ಬ್ರೇಕಿಂಗ್ ನ್ಯೂಸ್
10-03-23 01:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.10: ಹೆಚ್ 3ಎನ್ 2 ವೈರಸ್ ಸೋಂಕಿಗೆ ಹಾಸನ ಜಿಲ್ಲೆಯ ಈರೇಗೌಡ ಎಂಬ 82 ವರ್ಷದ ವೃದ್ಧ ವ್ಯಕ್ತಿ ಬಲಿಯಾಗಿದ್ದಾರೆ. ಮಾರ್ಚ್ 6ರಂದು ಇವರು ಮೃತಪಟ್ಟಿದ್ದು, ಹೆಚ್3ಎನ್2 ವೈರಸ್ಗೆ ಎಂಬುದು ದೃಢಪಟ್ಟಿದೆ, ಈ ಮೂಲಕ ಹೊಸ ವೈರಸ್ ಸೋಂಕಿಗೆ ಕರ್ನಾಟಕದಲ್ಲಿ ಮೊದಲ ಸಾವಾಗಿದೆ.
ದೇಶದಲ್ಲಿ H3N2 ವೈರಸ್ನಿಂದ ಉಂಟಾದ ಮೊದಲ ಎರಡು ಸಾವುಗಳು ಇದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ., ಒಬ್ಬರು ಕರ್ನಾಟಕದವರು ಮತ್ತು ಇನ್ನೊಂದು ಹರಿಯಾಣದವರು. ಈರೇಗೌಡ ಫೆಬ್ರವರಿ 24 ರಂದು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ವೈರಸ್ ಸೋಂಕಿನ ರೀತಿಯ ರೋಗ ಲಕ್ಷಣಗಳೊಂದಿಗೆ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು.
ಈರೇಗೌಡರ ಕುಟುಂಬ ಸದಸ್ಯರು ಮತ್ತು ಸಂಪರ್ಕದ ವ್ಯಕ್ತಿಗಳನ್ನು ಆರೋಗ್ಯ ಸಿಬಂದಿ ಸಮೀಕ್ಷೆ ಮಾಡಿದ್ದಾರೆ. ಅವರ ಪತ್ನಿ ಸೇರಿದಂತೆ ಎಲ್ಲರಿಗೂ ವೈರಸ್ ನೆಗೆಟಿವ್ ಬಂದಿದೆ. ಮುಂದಿನ 14 ದಿನಗಳವರೆಗೆ ಪ್ರದೇಶದಲ್ಲಿ ಕಣ್ಗಾವಲು ಮುಂದುವರಿಸಲು ಯೋಜಿಸಿದ್ದಾರೆ.
ಈ ಹಿಂದೆ ಕೋವಿಡ್ -19 ನಿಂದ ಬಳಲುತ್ತಿರುವ ಜನರು H3N2 ಸೋಂಕಿಗೆ ಒಳಗಾದ ವೇಳೆ ಹೆಚ್ಚು ಕೆಮ್ಮು ಲಕ್ಷಣ ಅನುಭವಿಸಿದ್ದರು. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಸೋಂಕಿನ ಲಕ್ಷಣ ಕಂಡುಬರುತ್ತವೆ. ಗರ್ಭಿಣಿಯರು ಸಹ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು. ಕಟ್ಟುನಿಟ್ಟಾದ ನೈರ್ಮಲ್ಯ ಮತ್ತು ಸಾಮಾಜಿಕ ಅಂತರವನ್ನು ಅನುಸರಿಸುವ ಮೂಲಕ ಸೋಂಕು ಹರಡುವುದನ್ನು ತಡೆಯಬಹುದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಕೆಮ್ಮು, ಜ್ವರ ಹಾಗೂ ಕೋವಿಡ್ ರೀತಿಯ ರೋಗಲಕ್ಷಣದ ಎಚ್3ಎನ್2 ಸೋಂಕಿನ 26 ಪ್ರಕರಣಗಳು ಪತ್ತೆಯಾಗಿವೆ.
An 82-year-old man in Karnataka's Hassan is believed to be the first to die of H3N2 in the country. Hire Gowda was admitted to hospital on February 24 and died on March 1, according to officials. He was reportedly a diabetic and suffered from hypertension.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm