ಬ್ರೇಕಿಂಗ್ ನ್ಯೂಸ್
10-03-23 03:26 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.10: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯನ್ನು ಮಾಡಿದ್ದು ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಮಾಡಿದೆ. ಅಧ್ಯಕ್ಷರಾಗುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಯಡಿಯೂರಪ್ಪ ಕೇವಲ ಸದಸ್ಯ ಸ್ಥಾನಕ್ಕೆ ಸೀಮಿತರಾಗಿದ್ದಾರೆ.
ಇದೇ ವೇಳೆ, ಚುನಾವಣಾ ನಿರ್ವಹಣಾ ಸಮಿತಿ ಘೋಷಿಸಲಾಗಿದ್ದು, ಅಚ್ಚರಿಯೆಂಬಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಂಚಾಲಕಿ ಹುದ್ದೆಗೆ ನೇಮಕ ಮಾಡಲಾಗಿದೆ. ಆಮೂಲಕ ಶೋಭಾ ಕರಂದ್ಲಾಜೆ ರಾಜ್ಯ ರಾಜಕಾರಣಕ್ಕೆ ಮರು ಎಂಟ್ರಿಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿದೆ.



ಪ್ರಚಾರ ಸಮಿತಿಗೆ 25 ಸದಸ್ಯರನ್ನು ನೇಮಕ ಮಾಡಲಾಗಿದೆ. ನಿರ್ವಹಣಾ ಸಮಿತಿಯಲ್ಲಿ 14 ಸದಸ್ಯರು ಇರಲಿದ್ದಾರೆ. ಕೆಲವರನ್ನು ಎರಡೂ ಸಮಿತಿಯಲ್ಲಿ ಸೇರಿಸಲಾಗಿದೆ. ಬಿಎಸ್ವೈ ಅವರ ಆಪ್ತೆಯಾಗಿರುವ ಶೋಭಾ ಅವರನ್ನು ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕಿ ಹುದ್ದೆಗೆ ತರುವ ಮೂಲಕ ಸಂತೈಸುವ ಕೆಲಸ ಮಾಡಿದ್ದಾರೆ. ಮೊನ್ನೆ ಶಿವಮೊಗ್ಗಕ್ಕೆ ಬಂದಿದ್ದ ಪ್ರಧಾನಿ ಮೋದಿ, ಬಿಎಸ್ವೈ ಅವರ ಕೈ ಹಿಡಿದುಕೊಂಡು ಹೋಗಿದ್ದು, ಯಡಿಯೂರಪ್ಪ ಅವರೇ ನಮ್ಮ ನಾಯಕ ಎಂದು ಹೇಳಿದ್ದು ಪ್ರಚಾರ ಸಮಿತಿಗೆ ಯಡಿಯೂರಪ್ಪ ಅವರನ್ನೇ ಅಧ್ಯಕ್ಷರನ್ನಾಗಿಸುತ್ತಾರೆ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿ ಮೂಡಿತ್ತು. ಲಿಂಗಾಯತರನ್ನು ಸಂತೈಸಲು ಸಿಎಂ ಬೊಮ್ಮಾಯಿ ಅವರನ್ನೇ ಅಧ್ಯಕ್ಷರನ್ನಾಗಿಸಿ, ಯಡಿಯೂರಪ್ಪ ಅವರನ್ನು ಜೊತೆಗೆ ಕೂರಿಸಿ ಸರಿದೂಗಿಸುವ ಕೆಲಸ ಮಾಡಲಾಗಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಚುನಾವಣಾ ನಿರ್ವಹಣಾ ಸಮಿತಿಗೆ ಸಂಚಾಲಕಿ ಮಾಡುವ ಮೂಲಕ ಶೋಭಕ್ಕೆ ಪೂರ್ತಿಯಾಗಿ ರಾಜ್ಯ ರಾಜಕಾರಣಕ್ಕೆ ಮರಳುವುದು ಖಚಿತವಾಗಿದೆ. ಕಳೆದ ಬಾರಿ ಸಿಎಂ ಬದಲಾವಣೆಯ ಕೂಗು ಕೇಳಿಬಂದಿದ್ದಾಗ ಶೋಭಾ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಶೋಭಾ ಅವರು ಸಿಎಂ ಆಗಲಿದ್ದಾರೆ ಎಂದೂ ಹೇಳಲಾಗಿತ್ತು. ಸಿಟಿ ರವಿಯ ಸ್ಪೀಡ್ ಹೆಚ್ಚಿದೆ ಅನ್ನುವ ಕಾರಣಕ್ಕೆ ಆರೆಸ್ಸೆಸ್ ಆಯ್ಕೆ ಗೌಡ ಜನಾಂಗದ ನಾಯಕಿ ಶೋಭಾ ಅನ್ನುವುದಿತ್ತು. ಇದೀಗ ಚುನಾವಣೆ ಹೊತ್ತಿಗೆ ಶೋಭಕ್ಕನಿಗೆ ನಿರ್ವಹಣಾ ಸಮಿತಿಯಲ್ಲಿ ಸ್ಥಾನ ನೀಡಿರುವುದು ಮತ್ತೆ ವಿಧಾನಸಭೆಗೆ ಸ್ಪರ್ಧಿಸಲಿದ್ದಾರೆಯೇ ಎಂಬ ಅನುಮಾನ ಮೂಡಿದೆ
While former Karnataka Chief Minister B S Yediyurappa was named in the BJP’s Karnataka election committee on Friday, his long-time confidante and Union Minister Shobha Karandlaje is set to head the party’s election management committee.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 04:34 pm
HK News Staffer
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am