ಬ್ರೇಕಿಂಗ್ ನ್ಯೂಸ್
10-03-23 03:26 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.10: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯನ್ನು ಮಾಡಿದ್ದು ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಮಾಡಿದೆ. ಅಧ್ಯಕ್ಷರಾಗುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಯಡಿಯೂರಪ್ಪ ಕೇವಲ ಸದಸ್ಯ ಸ್ಥಾನಕ್ಕೆ ಸೀಮಿತರಾಗಿದ್ದಾರೆ.
ಇದೇ ವೇಳೆ, ಚುನಾವಣಾ ನಿರ್ವಹಣಾ ಸಮಿತಿ ಘೋಷಿಸಲಾಗಿದ್ದು, ಅಚ್ಚರಿಯೆಂಬಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಂಚಾಲಕಿ ಹುದ್ದೆಗೆ ನೇಮಕ ಮಾಡಲಾಗಿದೆ. ಆಮೂಲಕ ಶೋಭಾ ಕರಂದ್ಲಾಜೆ ರಾಜ್ಯ ರಾಜಕಾರಣಕ್ಕೆ ಮರು ಎಂಟ್ರಿಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿದೆ.



ಪ್ರಚಾರ ಸಮಿತಿಗೆ 25 ಸದಸ್ಯರನ್ನು ನೇಮಕ ಮಾಡಲಾಗಿದೆ. ನಿರ್ವಹಣಾ ಸಮಿತಿಯಲ್ಲಿ 14 ಸದಸ್ಯರು ಇರಲಿದ್ದಾರೆ. ಕೆಲವರನ್ನು ಎರಡೂ ಸಮಿತಿಯಲ್ಲಿ ಸೇರಿಸಲಾಗಿದೆ. ಬಿಎಸ್ವೈ ಅವರ ಆಪ್ತೆಯಾಗಿರುವ ಶೋಭಾ ಅವರನ್ನು ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕಿ ಹುದ್ದೆಗೆ ತರುವ ಮೂಲಕ ಸಂತೈಸುವ ಕೆಲಸ ಮಾಡಿದ್ದಾರೆ. ಮೊನ್ನೆ ಶಿವಮೊಗ್ಗಕ್ಕೆ ಬಂದಿದ್ದ ಪ್ರಧಾನಿ ಮೋದಿ, ಬಿಎಸ್ವೈ ಅವರ ಕೈ ಹಿಡಿದುಕೊಂಡು ಹೋಗಿದ್ದು, ಯಡಿಯೂರಪ್ಪ ಅವರೇ ನಮ್ಮ ನಾಯಕ ಎಂದು ಹೇಳಿದ್ದು ಪ್ರಚಾರ ಸಮಿತಿಗೆ ಯಡಿಯೂರಪ್ಪ ಅವರನ್ನೇ ಅಧ್ಯಕ್ಷರನ್ನಾಗಿಸುತ್ತಾರೆ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿ ಮೂಡಿತ್ತು. ಲಿಂಗಾಯತರನ್ನು ಸಂತೈಸಲು ಸಿಎಂ ಬೊಮ್ಮಾಯಿ ಅವರನ್ನೇ ಅಧ್ಯಕ್ಷರನ್ನಾಗಿಸಿ, ಯಡಿಯೂರಪ್ಪ ಅವರನ್ನು ಜೊತೆಗೆ ಕೂರಿಸಿ ಸರಿದೂಗಿಸುವ ಕೆಲಸ ಮಾಡಲಾಗಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಚುನಾವಣಾ ನಿರ್ವಹಣಾ ಸಮಿತಿಗೆ ಸಂಚಾಲಕಿ ಮಾಡುವ ಮೂಲಕ ಶೋಭಕ್ಕೆ ಪೂರ್ತಿಯಾಗಿ ರಾಜ್ಯ ರಾಜಕಾರಣಕ್ಕೆ ಮರಳುವುದು ಖಚಿತವಾಗಿದೆ. ಕಳೆದ ಬಾರಿ ಸಿಎಂ ಬದಲಾವಣೆಯ ಕೂಗು ಕೇಳಿಬಂದಿದ್ದಾಗ ಶೋಭಾ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಶೋಭಾ ಅವರು ಸಿಎಂ ಆಗಲಿದ್ದಾರೆ ಎಂದೂ ಹೇಳಲಾಗಿತ್ತು. ಸಿಟಿ ರವಿಯ ಸ್ಪೀಡ್ ಹೆಚ್ಚಿದೆ ಅನ್ನುವ ಕಾರಣಕ್ಕೆ ಆರೆಸ್ಸೆಸ್ ಆಯ್ಕೆ ಗೌಡ ಜನಾಂಗದ ನಾಯಕಿ ಶೋಭಾ ಅನ್ನುವುದಿತ್ತು. ಇದೀಗ ಚುನಾವಣೆ ಹೊತ್ತಿಗೆ ಶೋಭಕ್ಕನಿಗೆ ನಿರ್ವಹಣಾ ಸಮಿತಿಯಲ್ಲಿ ಸ್ಥಾನ ನೀಡಿರುವುದು ಮತ್ತೆ ವಿಧಾನಸಭೆಗೆ ಸ್ಪರ್ಧಿಸಲಿದ್ದಾರೆಯೇ ಎಂಬ ಅನುಮಾನ ಮೂಡಿದೆ
While former Karnataka Chief Minister B S Yediyurappa was named in the BJP’s Karnataka election committee on Friday, his long-time confidante and Union Minister Shobha Karandlaje is set to head the party’s election management committee.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm