ಬ್ರೇಕಿಂಗ್ ನ್ಯೂಸ್
10-03-23 06:07 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.10 : 5 ಮತ್ತು 8ನೇ ತರಗತಿಗೆ ಇದೇ ವರ್ಷದಿಂದ ನಡೆಸಲು ಉದ್ದೇಶಿಸಿದ್ದ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು. ಆದರೆ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮುಂದಿನ ವರ್ಷದಿಂದ ಪರೀಕ್ಷೆ ನಡೆಸಬಹುದು ಅಥವಾ ಬಿಡಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
2022-23ನೇ ಸಾಲಿನಿಂದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು. ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು, ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಪೋಷಕರು ಹಾಗೂ ವಿದ್ಯಾರ್ಥಿಗಳು ಅಸಮಾಧಾನ ಹೊರಹಾಕಿದ್ದರು. ಇದರ ಬೆನ್ನಲ್ಲೇ 5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಗೊಳಿಸಬೇಕೆಂದು ಕೆಲವು ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು.
ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿತ್ತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿತ್ತು. ರಾಜ್ಯದಲ್ಲಿ ಈವರೆಗೆ 1ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ನೇರವಾಗಿ ಪಾಸ್ ಮಾಡುವ ಕ್ರಮ ಅನುಸರಿಸಲಾಗುತ್ತಿತ್ತು. ಹೀಗಾಗಿ ಮಕ್ಕಳ ಕಲಿಕೆಯ ಆಸಕ್ತಿ ಕಡಿಮೆಯಾಗಿದೆ. ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎನ್ನುವ ಅಭಿಪ್ರಾಯಗಳಿದ್ದವು.
ಇದೇ ಪರಿಸ್ಥಿತಿ ಮುಂದುವರಿದರೆ ಎಸ್.ಎಸ್.ಎಲ್. ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗಬಹುದು ಎಂದು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿತ್ತು, ಆದರೆ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆಯನ್ಜು ರದ್ದುಗೊಳಿಸಿ ಆದೇಶ ಹೊರಡಿಸಿದೆ.
A single member bench of the High Court has issued an order canceling the 5th and 8th class board exams. According to the rules, the board examination can be conducted from the next academic year.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm