ಬ್ರೇಕಿಂಗ್ ನ್ಯೂಸ್
11-03-23 11:59 am Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ್ ಶನಿವಾರ ಬೆಳಗ್ಗೆ ಮೈಸೂರಿನಲ್ಲಿ ಮೃತಪಟ್ಟಿದ್ದಾರೆ.
ಚಾಮರಾಜನಗರದಿಂದ ಎರಡು ಬಾರಿ ಕಾಂಗ್ರೆಸ್ ಸಂಸದರಾಗಿದ್ದ ಧ್ರುವನಾರಾಯಣ್, ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು. ಈ ಬಾರಿ ಚುನಾವಣೆಯಲ್ಲಿ ನಂಜನಗೂಡು ಅಸೆಂಬ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯಥಿಯಾಗಿ ಸ್ಪರ್ಧಿಸುವವರಿದ್ದರು. ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು.
ಧ್ರುವನಾರಾಯಣ ಅವರಿಗೆ ಆರೋಗ್ಯದ ಸಮಸ್ಯೆ ಇರಲಿಲ್ಲ. ಎದೆ ನೋವು ಶುರುವಾಗಿದೆ ಎಂದು ಶನಿವಾರ ಬೆಳಗ್ಗೆ 6.30ಕ್ಕೆ ಕಾರು ಚಾಲಕನಿಗೆ ಕರೆ ಮಾಡಿದ್ದರು. ಚಾಲಕ 6.40ಕ್ಕೆ ಬಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ರಕ್ತವಾಂತಿ ಆಗಿದ್ದರಿಂದ ತೀವ್ರ ಅಸ್ವಸ್ಥರಾಗಿದ್ದರು. ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಧ್ರುವನಾರಾಯಣ ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಧ್ರುವನಾರಾಯಣ್ 1983ರಲ್ಲಿ ಕಾಂಗ್ರೆಸ್ ಪ್ರವೇಶ ಮಾಡಿದ್ದರು. ಚಾಮರಾಜನಗರದಿಂದ ಸಂಸದರಾಗಿ ಎರಡು ಬಾರಿ ಆಯ್ಕೆಯಾಗಿದ್ದರು. ಕೊಳ್ಳೇಗಾಲ ಮತ್ತು ಸಂತೇಮರಹಳ್ಳಿ ಕ್ಷೇತ್ರಗಳಿಂದ ಎರಡು ಬಾರಿ ಶಾಸಕರಾಗಿದ್ದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ನಿಧನ ಹಿನ್ನಲೆಯಲ್ಲಿ ಶನಿವಾರದ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಶನಿವಾರ ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ನಡೆಯಬೇಕಿತ್ತು. ನಿಧನದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯಬೇಕಿದ್ದ ಪ್ರಜಾ ಧ್ವನಿ ಯಾತ್ರೆ ರದ್ದಾಗಿದೆ. ಮಾಜಿ ಸಂಸದ ಧ್ರುವನಾರಾಯಣ ನಿಧನಕ್ಕೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.
Karnataka Pradesh Congress Committee (KPCC) Working President R. Dhruvanarayan, 62, passed away in Mysuru on Saturday morning. Mr. Dhruvanarayan, a former MP representing Chamarajanagar Lok Sabha constituency, suffered a cardiac arrest on Saturday morning and passed away at his residence in Mysuru, sources said.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 06:21 pm
HK News Desk
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm