ಬ್ರೇಕಿಂಗ್ ನ್ಯೂಸ್
23-10-20 04:03 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 23: ಕೊರೊನಾ ನಿರ್ಬಂಧ, ಲಾಕ್ಡೌನ್ ಕಾರಣದಿಂದಾಗಿ ರಾಜ್ಯದಲ್ಲಿ ಶಾಲಾ ಚಟುವಟಿಕೆಗೆ ಬ್ರೇಕ್ ಬಿದ್ದಿದ್ದು, ಇದರ ಪರಿಣಾಮ 500ಕ್ಕೂ ಹೆಚ್ಚು ಶಾಲೆಗಳು ತೀವ್ರ ಮುಗ್ಗಟ್ಟಿಗೆ ಸಿಲುಕಿವೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಪ್ರಸಕ್ತ ವರ್ಷದ ಶುಲ್ಕ ಕಟ್ಟುವಂತೆ ಖಾಸಗಿ ಶಾಲೆಗಳ ಆಡಳಿತಗಳು ಪೋಷಕರಿಗೆ ಸೂಚನೆ ಕೊಡುತ್ತಲೇ ಬಂದಿವೆ. ಆದರೆ, ಶಾಲೆ ಆರಂಭವಾಗುವ ಬಗ್ಗೆ ಖಾತ್ರಿ ಇಲ್ಲದ ಕಾರಣ, ಹೆಚ್ಚಿನ ಪೋಷಕರು ಶುಲ್ಕ ಕಟ್ಟಿಲ್ಲ. ಶುಲ್ಕ ಕಟ್ಟದ ಪರಿಣಾಮ ಶಾಲಾಡಳಿತ ಮಂಡಳಿಗಳಿಗೆ ಶಾಲೆ ನಿರ್ವಹಣೆ ಮಾಡುವುದು ಕಷ್ಟವಾಗಿದ್ದು, ಶಾಲೆಗಳಿಗೆ ಬೀಗ ಹಾಕುವ ಹಂತಕ್ಕೆ ತಲುಪಿದ್ದಾರೆ.


ಇದರ ಪರಿಣಾಮ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಹಳೆ ಮೈಸೂರು ಭಾಗ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 500ಕ್ಕೂ ಹೆಚ್ಚು ಶಾಲೆಗಳು ಶಾಶ್ವತವಾಗಿ ಬೀಗ ಬೀಳುವ ಆತಂಕವನ್ನು ಎದುರಿಸುತ್ತಿವೆ. ಸಿಬ್ಬಂದಿಗಳ ವೇತನ, ಶಾಲಾ ಕಟ್ಟಡಗಳ ಬಾಡಿಗೆ, ನಿರ್ವಹಣೆ ವೆಚ್ಚದಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂ. ಖರ್ಚಾಗುತ್ತಿದೆ ಎಂದು ಶಿಕ್ಷಣ ಸಂಸ್ಥೆಗಳ ಒಕ್ಕೂಟಗಳು ಸರಕಾರದ ಮುಂದೆ ಅಲವತ್ತುಕೊಂಡಿವೆ.
ನರ್ಸರಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದೇ ಬಾರಿಗೆ ಬೀಗ ಬಿದ್ದರೆ ಅದನ್ನೇ ನಂಬಿದ್ದ ಸಾವಿರಾರು ಸಿಬ್ಬಂದಿ ಕೆಲಸ ಕಳಕೊಳ್ಳುವ ಆತಂಕದಲ್ಲಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm