ಬ್ರೇಕಿಂಗ್ ನ್ಯೂಸ್
14-03-23 12:01 pm HK News Desk ಕರ್ನಾಟಕ
ರಾಮನಗರ, ಮಾ.14: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ನಡೆಸಿದರು.
ಹೆದ್ದಾರಿಯಲ್ಲಿ ಧರಣಿ ಕುಳಿತ ಪ್ರತಿಭಟನಾಕಾರರು, ಬಿಜೆಪಿ ಸರ್ಕಾರ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.




ಹೆದ್ದಾರಿ ಪ್ರಾಧಿಕಾರವು ಸರ್ವೀಸ್ ರಸ್ತೆಗಳನ್ನು ಪೂರ್ಣಗೊಳಿಸದೆಯೇ ಟೋಲ್ ಆರಂಭಿಸಿದೆ. ಶೇಷಗಿರಿಹಳ್ಳಿ, ಹೆಜ್ಜಾಲ ಬಳಿ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿಲ್ಲ. ಹೆಜ್ಜಾಲ ಬಳಿ ಶಾಲಾ ವಿದ್ಯಾರ್ಥಿಗಳಿಗೆ ಸ್ಕೈ ವಾಕ್ ನಿರ್ಮಿಸಿಲ್ಲ. ಹೀಗೆ ಅಪೂರ್ಣ ಕಾಮಗಾರಿ ನಡುವೆಯೇ ಹೆದ್ದಾರಿ ಟೋಲ್ ಆರಂಭಿಸಲಾಗಿದೆ ಎಂದು ದೂರಿದರು.
ಟೋಲ್ ಸಂಗ್ರಹ ವಿರೋಧಿಸಿ ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಮೂರು ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಪ್ರತಿಭಟನಾಕಾರರನ್ನು ರಾಮನಗರಕ್ಕೆ ಕರೆದೊಯ್ಯಲಾಯಿತು

ಮೊದಲ ದಿನವೇ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಟೋಲ್ನಲ್ಲಿ ತಾಂತ್ರಿಕ ಸಮಸ್ಯೆ, ವಾಹನ ಸವಾರರ ಆಕ್ರೋಶ ;
ಟೋಲ್ ವಿರುದ್ಧ ವಾಹನ ಸವಾರರು ಗರಂ ಆಗಿದ್ದಾರೆ. ಟೋಲ್ ಸಂಗ್ರಹ ಆರಂಭವಾದ ಮೊದಲ ದಿನವೇ ಬೆಳ್ಳಂ ಬೆಳಗ್ಗೆಯೇ ಟೋಲ್ ಸಿಬ್ಬಂದಿ ವಿರುದ್ಧ ವಾಹನ ಸವಾರರು ಸಿಡಿಮಿಡಿಗೊಂಡಿದ್ದಾರೆ.
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ. ಟೆಕ್ನಿಕಲ್ ಎರರ್ ಆಗುತ್ತಿದೆ. ಫಾಸ್ಟ್ಯಾಗ್ ಇದ್ರೂ ಟೋಲ್ ಪ್ಲಾಜಾ ಸ್ಕ್ಯಾನ್ ತೆಗೆದುಕೊಳ್ಳುತ್ತಿಲ್ಲ. ಸ್ಕ್ಯಾನ್ ಆಗೋದ್ರಲ್ಲಿ ವಿಳಂಬವಾಗುತ್ತಿದೆ. ಅಲ್ಲದೆ ಟೋಲ್ ಕಂಬಿ ಕೂಡ ಸರಿಯಾಗಿ ವರ್ಕ್ ಆಗುತ್ತಿಲ್ಲ. ಸ್ಕ್ಯಾನ್ ಆಗಿ ವಾಹನ ಚಲಿಸುವಾಗಲೇ ವಾಹನದ ಮೇಲೆ ಕಂಬಿ ಬೀಳುತ್ತಿದೆ. ಹೀಗಾಗಿ ವಾಹನ ಚಾಲಕರು ಗರಂ ಆಗುತ್ತಿದ್ದಾರೆ. ಸಿದ್ಧತೆ ಮಾಡಿಕೊಳ್ಳದೇ ಯಾಕೆ ಟೋಲ್ ತಗೋತಿರಿ ಅಂತ ಅವಾಜ್ ಹಾಕುತ್ತಿದ್ದಾರೆ.
ಇನ್ನು ಈ ಬಗ್ಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಕೆ ಬಳಿ ಮಾತನಾಡಿದ ವಾಹನ ಸವಾರರೊಬ್ಬರು ಆಕ್ರೋಶ ಹೊರ ಹಾಕಿದ್ದಾರೆ. ಸಿದ್ಧತೆಯಿಲ್ಲದೇ ಟೋಲ್ ದರ ಸಂಗ್ರಹಿಸಲಾಗುತ್ತಿದೆ. ಸರಿಯಾದ ವ್ಯವಸ್ಥೆ ಇಲ್ಲ, ಟೋಲ್ ಕೂಡ ಸರಿಯಾಗಿ ವರ್ಕ್ ಆಗ್ತಿಲ್ಲ. ಟೋಲ್ ಕಂಬಿ ಕಾರಿನ ಮೇಲೆ ಬೀಳುತ್ತಿದೆ, ಗ್ಲಾಸ್ ಒಡೆದು ಹೋದ್ರೆ ಏನ್ಮಾಡಬೇಕು. ಮೊದಲು ಟೋಲ್ ವ್ಯವಸ್ಥೆ ಸರಿ ಮಾಡಲಿ. ಟೋಲ್ ತಗೋತಾರೆ ಅನ್ನೋದೆ ಗೊತ್ತಿರಲಿಲ್ಲ. ನಿನ್ನೆ ಸಂಜೆಯೇ ಇಲ್ಲಿಂದ ಹೋಗಿದ್ದೀನಿ. ನಿನ್ನೆನೇ ಮಾಹಿತಿ ನೀಡಬೇಕಿತ್ತು. ಕೊನೆ ಪಕ್ಷ ಮುಂದೆ ನೊಟೀಸ್ ಆದ್ರೂ ಹಾಕಬೇಕಿತ್ತು ಎಂದು ಟೋಲ್ ವಿರುದ್ಧ ವಾಹನ ಸವಾರ ಸತೀಶ್ ಆಕ್ರೋಶ ಹೊರ ಹಾಕಿದರು.
ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ;
ಈ ನಡುವೆ ಟೋಲ್ ಪ್ಲಾಜಾದ ಎದುರು ವಿವಿಧ ಕನ್ನಡ ಪರ ಸಂಘಟನೆಗಳು, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟೋಲ್ ದರ ಕಡಿಮೆ ಮಾಡಬೇಕು. ಮೊದಲು ಸರ್ವಿಸ್ ರಸ್ತೆಯನ್ನು ಪೂರ್ಣಗೊಳಿಸಿ, ಶೌಚಾಲಯ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದವು. ಪೊಲೀಸರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆದರು. ಮೂರು ಬಸ್ಗಳಲ್ಲಿ ಪ್ರತಿಭನಾನಿರಂತರನ್ನು ಬಿಡದಿ ಪೊಲೀಸ್ ಠಾಣೆಯತ್ತ ಕರೆದುಕೊಂಡು ಹೋಗುತ್ತಿದ್ದಾರೆ. ಇತ್ತ ಈ ವಿರೋಧದ ನಡುವೆ ಹೆದ್ದಾರಿ ಪ್ರಾಧಿಕಾರದಿಂದ ಟೋಲ್ ಶುಲ್ಕ ಸಂಗ್ರಹವು ಮುಂದುವರೆದಿದೆ. ನಿರಂತರ ಪ್ರತಿಭಟನೆ ಹಿನ್ನೆಲೆ ಪೊಲೀಸರು ಟೋಲ್ ಕೇಂದ್ರದ ಬಳಿಯೇ ಬೀಡುಬಿಟ್ಟಿದ್ದಾರೆ.


ಯಾವುದಕ್ಕೆ ಎಷ್ಟು ಶುಲ್ಕ?
A massive protest took place near Sheshagiri Halli toll on newly-inaugurated Mysuru-Bengaluru Expressway on Tuesday, over fee being collected “without facilities". The highway was inaugurated by Prime Minister Narendra Modi on Sunday.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm