ಬ್ರೇಕಿಂಗ್ ನ್ಯೂಸ್
15-03-23 12:24 pm HK news Desk ಕರ್ನಾಟಕ
ಹಾವೇರಿ, ಮಾ.15: ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಲು ರೆಡಿಯಾಗಿದ್ದಾರೆ ಎನ್ನಲಾಗುತ್ತಿರುವ ಎಂಎಲ್ಸಿ ಆರ್.ಶಂಕರ್ ಅವರ ರಾಣೇಬೆನ್ನೂರು ನಗರದ ಬೀರೇಶ್ವರ ಬಡವಾಣೆಯ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಾವೇರಿ ಜಿಲ್ಲೆ ವಾಣಿಜ್ಯ ತೆರಿಗೆ ಆಯುಕ್ತ ಶಿವಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕ್ಷೇತ್ರದ ಜನತೆಗೆ ವಿತರಿಸಲು ತಂದಿದ್ದ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಸಾರ್ವಜನಿಕರಿಗೆ ಎಂದು ವಿತರಣೆ ಮಾಡಲು ತಂದಿರಿಸಿದ್ದ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಂಕರ್ ಭಾವಚಿತ್ರವುಳ್ಳ ಸೀರೆಗಳ ಬಾಕ್ಸ್, ತಟ್ಟೆ, ಲೋಟ ಹಾಗೂ ಎಲ್ಕೆಜಿಯಿಂದ ಪದವಿ ವಿದ್ಯಾರ್ಥಿಗಳಿಗೆ ಹಂಚಲು ತಂದಿದ್ದ ಬ್ಯಾಗ್ಗಳನ್ನು ವಶಕ್ಕೆ ಪಡೆಯಲಾಗಿದೆ. ಆರು ಸಾವಿರದಷ್ಟು ಸೀರೆಗಳು ಇದ್ದವು ಎನ್ನಲಾಗುತ್ತಿದೆ.
ಅಧಿಕಾರಿಗಳು ಆರ್.ಶಂಕರ್ ನಿವಾಸದಲ್ಲಿ ವಶಕ್ಕೆ ಪಡೆದ ವಸ್ತುಗಳ ದಾಖಲೆ ಪತ್ರ, ಬಿಲ್ಗಳನ್ನು ಪರಿಶೀಲನೆ ನಡೆಸಿದ್ದಾರೆ. 6000ಕ್ಕೂ ಹೆಚ್ಚು ಸೀರೆ, 9000 ಕ್ಕೂ ಹೆಚ್ಚು ಶಾಲಾ ಕಾಲೇಜು ಬ್ಯಾಗ್ ಗಳು ಸೇರಿದಂತೆ ತಟ್ಟೆ, ಲೋಟಗಳನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು ಸುಮಾರು 30-40 ಲಕ್ಷ ಬೆಲೆಬಾಳುವ ಗೃಹಪಯೋಗಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಸೀಜ್ ಆಗಿರುವ ವಸ್ತುಗಳನ್ನು ಅಧಿಕಾರಿಗಳು ಪೊಲೀಸರ ವಶಕ್ಕೆ ನೀಡಿದ್ದಾರೆ.
ಶಂಕರ್ ನಿವಾಸದ ಮೇಲೆ ದಾಳಿ ನಡೆಯುತ್ತಿದ್ದಂತೆ ಅಭಿಮಾನಿಗಳು ಮತ್ತು ಬೆಂಬಲಿಗರು ನಿವಾಸದ ಮುಂದೆ ಸೇರಿದ್ದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಶಂಕರ್ ಗೆಲುವು ಕಂಡು ಅನೇಕ ರಾಜಕೀಯ ಮುಖಂಡರು ಭಯಗೊಂಡಿದ್ದಾರೆ. ಅದಕ್ಕೆ ಷಡ್ಯಂತ್ರ ಮಾಡಿ ತಪ್ಪು ಮಾಹಿತಿ ನೀಡಿದ್ದಾರೆ. ನಾವೆಲ್ಲರೂ ಆರ್.ಶಂಕರ್ ಪರ ನಿಲ್ಲುತ್ತೇವೆ. ನಮ್ಮ ನಾಯಕರ ಬಳಿ ವಶಕ್ಕೆ ಪಡೆದ ವಸ್ತುಗಳ ದಾಖಲೆ ಮತ್ತು ಬಿಲ್ಗಳಿವೆ. ಎಲ್ಲವನ್ನೂ ಅಧಿಕಾರಿಗಳ ಮುಂದೆ ಹಾಜರುಪಡಿಸುತ್ತಾರೆ ಎಂದು ಆರ್.ಶಂಕರ್ ಬೆಂಬಲಿಗರು ಹೇಳಿದ್ದಾರೆ.
ಆರ್. ಶಂಕರ್ ಗೆ ಈ ಬಾರಿ ಬಿಜೆಪಿಯಿಂದ ಟಿಕೆಟ್ ಸಿಗಲ್ಲ ಎನ್ನಲಾಗುತ್ತಿದ್ದು ಹೀಗಾಗಿ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದಾರೆ. ಚುನಾವಣೆಗೆ ಮೊದಲೇ ಮತದಾರರಿಗೆ ಆಮಿಷವೊಡ್ಡಲು ಗೃಹೋಪಯೋಗಿ ವಸ್ತುಗಳನ್ನು ತಂದಿರಿಸಿದ್ದರು. ಈ ಹಿನ್ನೆಲೆಯಲ್ಲಿ ಶಂಕರ್ ಮನೆಗೆ ವಾಣಿಜ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
Haveri MLA R Shankar house raided by commercial tax department, bundles of sarees and bags seized. He had planned to join the Congress party. A huge protest by his followers takes place.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm