ಬ್ರೇಕಿಂಗ್ ನ್ಯೂಸ್
15-03-23 12:24 pm HK news Desk ಕರ್ನಾಟಕ
ಹಾವೇರಿ, ಮಾ.15: ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಲು ರೆಡಿಯಾಗಿದ್ದಾರೆ ಎನ್ನಲಾಗುತ್ತಿರುವ ಎಂಎಲ್ಸಿ ಆರ್.ಶಂಕರ್ ಅವರ ರಾಣೇಬೆನ್ನೂರು ನಗರದ ಬೀರೇಶ್ವರ ಬಡವಾಣೆಯ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಾವೇರಿ ಜಿಲ್ಲೆ ವಾಣಿಜ್ಯ ತೆರಿಗೆ ಆಯುಕ್ತ ಶಿವಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕ್ಷೇತ್ರದ ಜನತೆಗೆ ವಿತರಿಸಲು ತಂದಿದ್ದ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಸಾರ್ವಜನಿಕರಿಗೆ ಎಂದು ವಿತರಣೆ ಮಾಡಲು ತಂದಿರಿಸಿದ್ದ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಂಕರ್ ಭಾವಚಿತ್ರವುಳ್ಳ ಸೀರೆಗಳ ಬಾಕ್ಸ್, ತಟ್ಟೆ, ಲೋಟ ಹಾಗೂ ಎಲ್ಕೆಜಿಯಿಂದ ಪದವಿ ವಿದ್ಯಾರ್ಥಿಗಳಿಗೆ ಹಂಚಲು ತಂದಿದ್ದ ಬ್ಯಾಗ್ಗಳನ್ನು ವಶಕ್ಕೆ ಪಡೆಯಲಾಗಿದೆ. ಆರು ಸಾವಿರದಷ್ಟು ಸೀರೆಗಳು ಇದ್ದವು ಎನ್ನಲಾಗುತ್ತಿದೆ.
ಅಧಿಕಾರಿಗಳು ಆರ್.ಶಂಕರ್ ನಿವಾಸದಲ್ಲಿ ವಶಕ್ಕೆ ಪಡೆದ ವಸ್ತುಗಳ ದಾಖಲೆ ಪತ್ರ, ಬಿಲ್ಗಳನ್ನು ಪರಿಶೀಲನೆ ನಡೆಸಿದ್ದಾರೆ. 6000ಕ್ಕೂ ಹೆಚ್ಚು ಸೀರೆ, 9000 ಕ್ಕೂ ಹೆಚ್ಚು ಶಾಲಾ ಕಾಲೇಜು ಬ್ಯಾಗ್ ಗಳು ಸೇರಿದಂತೆ ತಟ್ಟೆ, ಲೋಟಗಳನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು ಸುಮಾರು 30-40 ಲಕ್ಷ ಬೆಲೆಬಾಳುವ ಗೃಹಪಯೋಗಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಸೀಜ್ ಆಗಿರುವ ವಸ್ತುಗಳನ್ನು ಅಧಿಕಾರಿಗಳು ಪೊಲೀಸರ ವಶಕ್ಕೆ ನೀಡಿದ್ದಾರೆ.
ಶಂಕರ್ ನಿವಾಸದ ಮೇಲೆ ದಾಳಿ ನಡೆಯುತ್ತಿದ್ದಂತೆ ಅಭಿಮಾನಿಗಳು ಮತ್ತು ಬೆಂಬಲಿಗರು ನಿವಾಸದ ಮುಂದೆ ಸೇರಿದ್ದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಶಂಕರ್ ಗೆಲುವು ಕಂಡು ಅನೇಕ ರಾಜಕೀಯ ಮುಖಂಡರು ಭಯಗೊಂಡಿದ್ದಾರೆ. ಅದಕ್ಕೆ ಷಡ್ಯಂತ್ರ ಮಾಡಿ ತಪ್ಪು ಮಾಹಿತಿ ನೀಡಿದ್ದಾರೆ. ನಾವೆಲ್ಲರೂ ಆರ್.ಶಂಕರ್ ಪರ ನಿಲ್ಲುತ್ತೇವೆ. ನಮ್ಮ ನಾಯಕರ ಬಳಿ ವಶಕ್ಕೆ ಪಡೆದ ವಸ್ತುಗಳ ದಾಖಲೆ ಮತ್ತು ಬಿಲ್ಗಳಿವೆ. ಎಲ್ಲವನ್ನೂ ಅಧಿಕಾರಿಗಳ ಮುಂದೆ ಹಾಜರುಪಡಿಸುತ್ತಾರೆ ಎಂದು ಆರ್.ಶಂಕರ್ ಬೆಂಬಲಿಗರು ಹೇಳಿದ್ದಾರೆ.
ಆರ್. ಶಂಕರ್ ಗೆ ಈ ಬಾರಿ ಬಿಜೆಪಿಯಿಂದ ಟಿಕೆಟ್ ಸಿಗಲ್ಲ ಎನ್ನಲಾಗುತ್ತಿದ್ದು ಹೀಗಾಗಿ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದಾರೆ. ಚುನಾವಣೆಗೆ ಮೊದಲೇ ಮತದಾರರಿಗೆ ಆಮಿಷವೊಡ್ಡಲು ಗೃಹೋಪಯೋಗಿ ವಸ್ತುಗಳನ್ನು ತಂದಿರಿಸಿದ್ದರು. ಈ ಹಿನ್ನೆಲೆಯಲ್ಲಿ ಶಂಕರ್ ಮನೆಗೆ ವಾಣಿಜ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
Haveri MLA R Shankar house raided by commercial tax department, bundles of sarees and bags seized. He had planned to join the Congress party. A huge protest by his followers takes place.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 06:21 pm
HK News Desk
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm