ಬ್ರೇಕಿಂಗ್ ನ್ಯೂಸ್
16-03-23 03:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.16 : ವಿಶ್ವಾದ್ಯಂತ ಮನೆಮಾತಾದ ಕನ್ನಡ ಚಲನಚಿತ್ರ ಕಾಂತಾರ ವಿಶ್ವಸಂಸ್ಥೆಯ ಜಿನೀವಾದಲ್ಲಿ ಮಾರ್ಚ್ 17ರಂದು ಪ್ರದರ್ಶನಗೊಳ್ಳಲು ಸಿದ್ಧವಾಗಿದೆ. ಅದೇ ದಿನ ರಿಷಬ್ ಶೆಟ್ಟಿ ಭಾರತೀಯ ಸಿನಿಮಾಗಳ ಕುರಿತು ಕನ್ನಡದಲ್ಲಿ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಲಿದ್ದಾರೆ.
ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿದ ಸಂಭ್ರಮದ ನಡುವಲ್ಲೇ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ಕಡಲಾಚೆಯಲ್ಲಿ ಸುದ್ದಿ ಮಾಡುತ್ತಿದೆ. ವಿಶ್ವಾದ್ಯಂತ ಬಹು ಭಾಷೆಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ಕನ್ನಡ ಚಲನಚಿತ್ರ ಕಾಂತಾರ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮಾರ್ಚ್ 17 ರಂದು ಪ್ರದರ್ಶನಗೊಳ್ಳಲಿದೆ. ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಈಗಾಗಲೇ ಜಿನೀವಾ ತಲುಪಿದ್ದಾರೆ. ಸೆಂಟರ್ ಫಾರ್ ಗ್ಲೋಬಲ್ ಅಫೇರ್ಸ್ ಮತ್ತು ಪಬ್ಲಿಕ್ ಪೋಲೀಸ್ನ ಸಾಮಾಜಿಕ ಮಾಧ್ಯಮ ನೆಲೆಯಲ್ಲಿ ಯುಎನ್ಎಚ್ಆರ್ ಸಿ ಅಧಿವೇಶನದಲ್ಲಿ ಪರಿಸರ, ಹವಾಮಾನ ಮತ್ತು ಸಂರಕ್ಷಣೆಯಲ್ಲಿ ಭಾರತೀಯ ಸಿನಿಮಾದ ಪಾತ್ರದ ಬಗ್ಗೆ ಮಾತನಾಡಲಿದ್ದಾರೆ ಎಂದು ಸಿಜಿಎಪಿಪಿ ನಿರ್ದೇಶಕಿ ಅನಿಂಧ್ಯಾ ಸೇನ್ ಗುಪ್ತಾ ತಿಳಿಸಿದ್ದಾರೆ.
ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ವಿಶ್ವದ ಹಲವು ದೇಶದ ಪ್ರತಿನಿಧಿಗಳು ಭಾಗಿ ಆಗುತ್ತಿದ್ದಾರೆ. ಸಿನಿಮಾದ ಮೂಲಕ ಪರಿಸರ ಮತ್ತು ಅರಣ್ಯದಂಚಿನ ಜನರ ಸಮಸ್ಯೆಗಳನ್ನು ರಿಷಬ್ ತೋರಿಸಿದ್ದಾರೆ. ಅದೇ ವಿಷಯವನ್ನ ರಿಷಬ್ ವಿಶ್ವಸಂಸ್ಥೆಯಲ್ಲೂ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.
ಸ್ಕ್ರೀನಿಂಗ್ ನಂತರ, ರಿಷಬ್ ಕನ್ನಡದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ನಂತರ ಯುಎನ್ ಗಣ್ಯರೊಂದಿಗೆ ಖಾಸಗಿ ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ. ಸಾಮಾನ್ಯವಾಗಿ ಈ ಸಭೆಯಲ್ಲಿ ಹೆಚ್ಚು ಇಂಗ್ಲಿಷ್ ಭಾಷೆಯನ್ನು ಬಳಸುವುದು ವಾಡಿಕೆ. ಆದರೆ, ರಿಷಬ್ ಈ ಸಭೆಯಲ್ಲಿ ಕನ್ನಡದಲ್ಲೇ ಭಾಷಣ ಮಾಡಲಿದ್ದಾರೆ. ಈ ಮೂಲಕ ಕನ್ನಡದಲ್ಲಿ ಭಾಷಣ ಮಾಡಿದ ಮೊದಲ ಕನ್ನಡಿಗ ಎಂಬ ಕೀರ್ತಿಗೂ ಪಾತ್ರರಾಗಲಿದ್ದಾರೆ.
ಸಭೆಯಲ್ಲಿ ಸದ್ಯ ಜಗತ್ತು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಗಳ ಕುರಿತು ಚರ್ಚೆಗಳು ನಡೆಯುತ್ತಿದ್ದು, ರಿಷಬ್ ಯಾವೆಲ್ಲ ವಿಚಾರಗಳ ಕುರಿತು ಬೆಳಕು ಚೆಲ್ಲುತ್ತಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
It is, indeed, a golden era for South cinema. First, Telugu film RRR grabbed the Oscars and made its mark forever on the global map and now, Kannada film Kantara will be screened at the United Nations, Geneva, Switzerland on March 17th, which also happens to be actor Puneeth Rajkumar’s birth anniversary.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:02 pm
Mangalore Correspondent
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm