ಬ್ರೇಕಿಂಗ್ ನ್ಯೂಸ್
16-03-23 10:23 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ.16 : ಮೂಡಿಗೆರೆ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ಬದಲಿಸಬೇಕೆಂದು ಬಿಜೆಪಿ ಕಾರ್ಯಕರ್ತರು ಹೆದ್ದಾರಿಯಲ್ಲಿ ಯಡಿಯೂರಪ್ಪ ಮತ್ತು ಸಿಟಿ ರವಿ ಅವರಿದ್ದ ಕಾರನ್ನು ಅಡ್ಡಗಟ್ಟಿ ಹೈಡ್ರಾಮಾ ನಡೆಸಿದ ಘಟನೆ ನಡೆದಿದೆ.
ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ನೂರಾರು ಕಾರ್ಯಕರ್ತರು ಚಿಕ್ಕಮಗಳೂರು - ಮೂಡಿಗೆರೆ ಹೆದ್ದಾರಿಯ ನಡು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕುಮಾರಸ್ವಾಮಿ ಬೇಡವೇ ಬೇಡ ಅಂತ ಕೂಗಾಟ ನಡೆಸಿದ್ದು ಬಿ.ಎಸ್.ವೈ. ಬರುವ ಮಾರ್ಗದಲ್ಲಿ ರಸ್ತೆ ತಡೆದು ಭಾರೀ ಪ್ರತಿಭಟನೆ ನಡೆಸಿದ್ದಾರೆ. 1000ಕ್ಕೂ ಅಧಿಕ ಜನರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದು ಬಿಜೆಪಿ ಸ್ಥಳೀಯ ಮುಖಂಡರು, ಕಾರ್ಯಕರ್ತರೇ ಸೇರಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ, ಶಾಸಕ ಕುಮಾರಸ್ವಾಮಿ ಅವರನ್ನ ಪೊಲೀಸರು ಬೇರೆ ಕಡೆ ಕರೆದೊಯ್ದು ಬಚಾವ್ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರ ಆಕ್ರೋಶ ಹಿನ್ನೆಲೆಯಿಂದ ಬಿಎಸ್ವೈ ರೋಡ್ ಶೋ ಕ್ಯಾನ್ಸಲ್ ಮಾಡಿ ಬಂದ ದಾರಿಯಲ್ಲೇ ಹಿಂತಿರುಗಿದ್ದಾರೆ.

ಯಡಿಯೂರಪ್ಪ ಮತ್ತು ಸಿಟಿ ರವಿ ಅವರನ್ನ ರಸ್ತೆ ಮಧ್ಯೆಯೇ ಅಡ್ಡ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ನಾಯಕರು ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ. ಅಲ್ಲದೆ ಸಿಟ್ಟುಗೊಂಡು, ರೋಡ್ ಶೋ ಕ್ಯಾನ್ಸಲ್ ಮಾಡಿ ಯಡಿಯೂರಪ್ಪ ನೇರವಾಗಿ ಹೆಲಿಪ್ಯಾಡ್ ಗೆ ತೆರಳಿದ್ದಾರೆ.
ಇದರಿಂದ ಗರಂ ಆದ ಸಿಟಿ ರವಿ, ಪಕ್ಷದ ಮರ್ಯಾದೆ ಕಳೆಯುತ್ತಿದ್ದೀರಾ ಎಂದು ಕಾರ್ಯಕರ್ತರ ಬಗ್ಗೆ ಸಿಟ್ಟಾಗಿದ್ದಾರೆ. ಆಕ್ರೋಶ ಇದ್ದರೆ, ನೀವು ಮೊದಲೇ ಮಾತನಾಡಿಕೊಳ್ಳಬೇಕಿತ್ತು. ಕಾರ್ಯಕ್ರಮ ಏರ್ಪಡಿಸಿ ಇಷ್ಟೆಲ್ಲ ಹೈಡ್ರಾಮಾ ಮಾಡಬೇಕಿತ್ತೇ ಎಂದು ಸ್ಥಳೀಯ ಮುಖಂಡರನ್ನು ತರಾಟೆಗೆತ್ತಿಕೊಂಡಿದ್ದಾರೆ.
#KarnatakaElections2023
— Apurva Mirajkar (@apurvasays) March 16, 2023
Another issue at BJP's Vijay Snakalp Yatra at Mudigere.
Party workers encircle BSY demanding ticket not to be given to MLA MP Kumaraswamy. Upset Yediyurappa canceled the road show because of the drama. pic.twitter.com/FmTmHUJyjf
Rift within the BJP in Karnataka were laid bare to the public today as former Karnataka Chief Minister BS Yediyurappa was forced to cancel the party's pre-election march in Chikkamagaluru district, after being gheraoed by party workers apparently supporting party national general secretary CT Ravi.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 04:34 pm
HK News Staffer
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am