ಬ್ರೇಕಿಂಗ್ ನ್ಯೂಸ್
17-03-23 01:56 pm HK News Desk ಕರ್ನಾಟಕ
ಬೆಳಗಾವಿ, ಮಾ.17 : ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾ ಸಂಪೂರ್ಣ ಬಂದ್ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಸ್ಸಾಂನಲ್ಲಿ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಮಾಡಿರುವ ರೀತಿ ಕರ್ನಾಟಕದಲ್ಲಿ ಮದರಸಾಗಳನ್ನು ಬಂದ್ ಮಾಡುತ್ತೇವೆ. ಇವತ್ತು ನಾನು ಬಸನಗೌಡ ಪಾಟೀಲ್ ಯತ್ನಾಳ್ ಆಗಿ ಉಳಿದಿದ್ದರೆ ಅದಕ್ಕೆ ಕಾರಣ ಶಿವಾಜಿ ಮಹಾರಾಜರು. ಇಲ್ಲವಾದರೆ ನಾನು ಬಶೀರ್ ಅಹ್ಮದ್ ಪಟೇಲ್ ಆಗಿರುತ್ತಿದ್ದೆ. ಅದೇ ರೀತಿ ಅಭಯ್ ಪಾಟೀಲ್ ಇರುತ್ತಿರಲಿಲ್ಲ, ಅವರು ಅಜರುದ್ದೀನ್ ಪಟೇಲ್ ಆಗುತ್ತಿದ್ದರು ಎಂದು ಹೇಳಿದರು.
ಕರ್ನಾಟಕದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಹೇಳ್ತಾರೆ. ಆದರೆ ಟಿಪ್ಪು ಲಕ್ಷಾಂತರ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾನೆ. ಲಕ್ಷಾಂತರ ಹಿಂದೂಗಳನ್ನು ಮತಾಂತರ ಮಾಡಿದ್ದಾನೆ. ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಮುಸ್ಲಿಂ ಮಹಿಳೆ ಮೇಲೆ ಅತ್ಯಾಚಾರ ಮಾಡಿಲ್ಲ. ಹಾಗೇನಾದರೂ ಆದರೆ ಅವರ ಕೈಯನ್ನು ಕತ್ತರಿಸುತ್ತಿದ್ದರು.
ಇವತ್ತು ರೈಲ್ವೆ ನಿಲ್ದಾಣದಲ್ಲಿ ಉರ್ದು ಬೋರ್ಡ್ ಬರೆದರೆ ಕೇಳಲ್ಲ. ಹಿಂದಿ ಬೋರ್ಡ್ ಬರೆದರೆ ಕೇಳುತ್ತಾರೆ. ಆದರೆ ಹಿಂದಿ ವಿರೋಧಿಗಳ ಬಳಿ ಧಮ್ ಇದ್ರೆ ಕಲಬುರಗಿ ರೇಲ್ವೆ ನಿಲ್ದಾಣದ ಮೇಲಿನ ಉರ್ದು ಬೋರ್ಡ್ ತೆಗೀರಿ ಎಂದು ಹೇಳಿದ್ದೇನೆ. ಅದಕ್ಕೆ ಕೆಲವರು ಉತ್ತರ ಭಾರತದ ಚೇಲಾಗಳು ಅಂತಾರೆ. ನಾವು ಯಾರ ಚೇಲಾಗಳು ಅಲ್ಲ, ಹಿಂದೂಸ್ತಾನದ ಚೇಲಾಗಳು, ಹಿಂದೂಗಳಾಗಿದ್ದೇವೆ ಎಂದು ತಿಳಿಸಿದರು.
ವಿಜಯಪುರದಲ್ಲಿ ಎರಡೂವರೆ ಲಕ್ಷ ಮತದಲ್ಲಿ 1 ಲಕ್ಷ 3 ಸಾವಿರ ಟಿಪ್ಪು ಸುಲ್ತಾನ್ ಪರ ಇದ್ದಾರೆ. ಶಿವಾಜಿ ಮಹಾರಾಜರ ಕನಸು ಹಿಂದವಿ ಸಾಮ್ರಾಜ್ಯ ಇತ್ತು, ಮರಾಠ ಸಾಮ್ರಾಜ್ಯ ಅಲ್ಲ. ಇದರಿಂದ ಮರಾಠಿ, ಕನ್ನಡ ಸಲುವಾಗಿ ಹೋರಾಡೋದು ಬೇಡ, ಅದು ಮುಗಿದಿದೆ ಈಗ. ಈಗ ಏನಿದ್ರು ಹಿಂದೂ, ನಾವೆಲ್ಲ ಹಿಂದೂಗಳಾಗಿ ಇದ್ರೆ ಮಾತ್ರ ಭಾರತ ಉಳಿಯುತ್ತದೆ. ಇಲ್ಲವಾದ್ರೆ ಉರ್ದು ಕಲಿಯಬೇಕಾಗುತ್ತೆ ಎಂದು ಪರೋಕ್ಷ ಎಚ್ಚರಿಕೆ ನೀಡಿದರು.
Speaking at the inauguration program of “Shivacharitari” artworks held near Shivaji Udyan in Shahpur here on Thursday, BJP MLA Basanagouda Patil Yatnal Yatnal said, “Just like the decision was taken to close madrasas in Assam, if we come back to power, we will also close all madrasas in the state.”
23-03-23 11:31 am
Bangalore Correspondent
ಉರಿಗೌಡ- ನಂಜೇಗೌಡರ ಬಗ್ಗೆ ದಾಖಲೆ ಇದೆ, ಕಾಲ್ಪನಿಕ ಪಾ...
21-03-23 09:55 pm
ದೂರು ನೀಡಲು ಬಂದಿದ್ದ ಯುವತಿ ಜೊತೆಗೆ ಕೊಡಿಗೇಹಳ್ಳಿ ಠ...
21-03-23 09:36 pm
ಒಂದು ಕೋಟಿ ಲಂಚ ಆರೋಪ ; ಪ್ರಕರಣ ರದ್ದು ಕೋರಿ ಹೈಕೋರ್...
21-03-23 07:25 pm
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎ...
21-03-23 02:18 pm
23-03-23 10:30 pm
HK News Desk
ಆರ್ಥಿಕ ಕುಸಿತಕ್ಕೆ ನಲುಗುತ್ತಿದೆ ಟೆಕ್ ಕಂಪನಿ 'ಆಕ್...
23-03-23 09:31 pm
ಪಾಕ್ ಗಡಿಭಾಗದಲ್ಲಿ ಶಾರದಾ ಮಂದಿರ ಮರು ಸ್ಥಾಪನೆ ; ಸ್...
22-03-23 10:00 pm
ದೆಹಲಿಯಲ್ಲಿ ಮೋದಿ ಹಠಾವೋ, ದೇಶ್ ಬಚಾವೋ ಪೋಸ್ಟರ್ ; ಪ...
22-03-23 02:53 pm
ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್...
22-03-23 12:28 pm
23-03-23 10:57 pm
Mangalore Correspondent
ಮಾ.25ರಂದು ಮೋರ್ಲ- ಬೋಳದಲ್ಲಿ ಲವ-ಕುಶ ಜೋಡುಕರೆ ಕಂಬಳ...
23-03-23 10:00 pm
ತಲೆ ಗಟ್ಟಿ ಇದೆಯೆಂದು ಗಡಾಯಿಕಲ್ಲಿಗೆ ತಾಗಿಸಿದರೆ ತಲೆ...
23-03-23 05:08 pm
ಕರಾವಳಿ, ಚಿಕ್ಕಮಗಳೂರು, ಹಾಸನದಲ್ಲಿ ಮಾ.23ರಿಂದಲೇ ರಂ...
22-03-23 10:31 pm
ಪೌರ ಕಾರ್ಮಿಕರ ಮುಷ್ಕರ ಹತ್ತನೇ ದಿನಕ್ಕೆ ; ಕಸದ ರಾಶಿ...
22-03-23 09:02 pm
23-03-23 04:18 pm
Mangalore Correspondent
ಪೊಲೀಸರಿಂದಲೇ ಕಿಡ್ನಾಪ್, 40 ಲಕ್ಷಕ್ಕೆ ಬೇಡಿಕೆ ; ಮಾ...
23-03-23 02:16 pm
ಮಿನಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 9 ಕೇಜಿ ಅಕ್ರಮ...
23-03-23 01:38 pm
ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ ; 18 ವರ್ಷದಿ...
23-03-23 12:15 pm
ಬಸ್ ಚಾಲಕನಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...
22-03-23 06:46 pm