ಬ್ರೇಕಿಂಗ್ ನ್ಯೂಸ್
19-03-23 01:17 pm Headline Karnataka Staffer ಕರ್ನಾಟಕ
ಬೆಂಗಳೂರು, ಮಾ.19: ಇತ್ತೀಚೆಗೆ ಪ್ರಧಾನಿ ಮೋದಿಯನ್ನು ಮಂಡ್ಯದಲ್ಲಿ ರೌಡಿಶೀಟರ್ ಫೈಟರ್ ರವಿ ಸ್ವಾಗತಿಸಿದ್ದು ಟೀಕೆಗೊಳಗಾಗುತ್ತಲೇ ಬಿಜೆಪಿ ಎಚ್ಚತ್ತುಕೊಂಡಿದೆ. ಬೆಂಗಳೂರಿನ ರೌಡಿ ಸೈಲೆಂಟ್ ಸುನಿಲನಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಸೈಲೆಂಟ್ ಸುನೀಲ್, ಬಿಜೆಪಿ ಸದಸ್ಯತ್ವ ಪಡೆದಿದ್ದರೆ ಅದನ್ನು ರದ್ದು ಮಾಡಲಾಗುವುದು. ಅವರು ಪಾರ್ಟಿ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದರೆ, ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಹಲವು ಪ್ರಕರಣಗಳಲ್ಲಿ ಸಿಸಿಬಿ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ರೌಡಿ ಸೈಲೆಂಟ್ ಸುನೀಲ್, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ರಕ್ತದಾನ ಕಾರ್ಯಕ್ರಮ ಆಯೋಜಿಸಿದ್ದಲ್ಲದೆ, ಅದಕ್ಕೆ ಬಿಜೆಪಿ ನಾಯಕರನ್ನು ಕರೆಸಿದ್ದು ರೌಡಿ ಸುನೀಲ್ ಬಿಜೆಪಿ ಸೇರಲಿದ್ದಾನೆಂಬ ಸುದ್ದಿ ಹರಡಿತ್ತು. ಕಾರ್ಯಕ್ರಮದ ವಿಡಿಯೊ ಹಾಗೂ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು ವಿಪಕ್ಷಗಳು ಬಿಜೆಪಿಯನ್ನು ಹೀಗಳೆದಿದ್ದವು. ಆದರೆ ಇತ್ತೀಚೆಗೆ ಮೋದಿಯನ್ನು ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಫೈಟರ್ ರವಿ ಕಾಣಿಸಿಕೊಂಡಿದ್ದು ಭಾರೀ ಮುಜುಗರ ಸೃಷ್ಟಿಸಿತ್ತು.
ಬೆಕ್ಕಿನ ಕಣ್ಣು ರಾಜೇಂದ್ರ ಕೊಲೆ ಸೇರಿ 17 ಪ್ರಕರಣಗಳಲ್ಲಿ ಆರೋಪಿ ಆಗಿದ್ದ ಸೈಲೆಂಟ್ ಸುನೀಲ್ನ ಹೆಸರು ಬೆಂಗಳೂರಿನ ಹಲವು ಠಾಣೆಗಳಲ್ಲಿ ರೌಡಿಪಟ್ಟಿಯಲ್ಲಿದೆ. ತಮ್ಮ ವಿರುದ್ಧದ 17 ಪ್ರಕರಣಗಳಿಗೂ ಸುನೀಲ್, ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾನೆ. ಯಾವುದೇ ವಾರಂಟ್ಗಳು ಬಾಕಿ ಇಲ್ಲ. ಆನಂತರ ಬಿಬಿಎಂಪಿ ಕಸ ಸಾಗಣೆ ಹಾಗೂ ಇತರೆ ಕೆಲಸಗಳಲ್ಲಿ ತೊಡಗಿಸಿಕೊಂಡು ಹಣ ಮಾಡುತ್ತಿದ್ದಾನೆ. ಈಗ ಬಿಜೆಪಿ ಸೇರಿ ರಾಜಕೀಯಕ್ಕೆ ಬರಲು ಯೋಚಿಸುತ್ತಿದ್ದಾನೆ ಎನ್ನುವ ಮಾತುಗಳು ಕೇಳಿಬಂದಿದ್ದವು.
After a row over history-sheeter Silent Sunil’s membership in Karnataka BJP, the state unit has announced that he is expelled from the party. Sunil Kumar, aka Silent Sunil has a history of rowdy sheet and BJP claimed that he joined the party through the membership drive in Bengaluru’s Chamarajpet.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm