ಬ್ರೇಕಿಂಗ್ ನ್ಯೂಸ್
19-03-23 10:51 pm HK News Desk ಕರ್ನಾಟಕ
ಬೆಂಗಳೂರು, ಮಾ.19: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತಕ್ಕೆ (ಕೆಎಸ್ಡಿಎಲ್) ಕೆಮಿಕಲ್ ಆಯಿಲ್ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸಲೇಬೇಕು ಎಂದು ಲೋಕಾಯುಕ್ತ ಪೊಲೀಸರು ಹೈಕೋರ್ಟ್ನಲ್ಲಿ ವಾದ ಮಂಡನೆ ಮಾಡಿದ್ದಾರೆ.
ಅಕ್ರಮದಲ್ಲಿ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಬಂಧನ ಆಗಿದೆ. ಅಲ್ಲದೆ, ವಿರೂಪಾಕ್ಷಪ್ಪ ಹೆಸರು ಕೂಡ ಪ್ರಸ್ತಾಪವಾಗಿದೆ. ವಿರೂಪಾಕ್ಷಪ್ಪ ಪ್ರತಿದಿನ ನೋಟ್ಸ್ ಬರೆದುಕೊಂಡು ಬಂದು ಪೊಲೀಸರ ಮುಂದೆ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ, ಅವರನ್ನು ಬಂಧಿಸಿ ವಿಚಾರಣೆ ನಡೆಸಿದರೆ ತನಿಖೆಗೆ ಅನುಕೂಲವಾಗಲಿದೆ ಎಂದು ಲೋಕಾಯುಕ್ತ ಪೊಲೀಸರ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.
ಬಂಧನ ಭೀತಿ ಎದುರಿಸುತ್ತಿರುವ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ ವಿಚಾರಣೆ ನಡೆಸಿತ್ತು. ಅರ್ಜಿದಾರರು ಹಾಗೂ ಲೋಕಾಯುಕ್ತ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ಪೀಠ ಆದೇಶ ಕಾಯ್ದಿರಿಸಿತು.
'ವಿರೂಪಾಕ್ಷಪ್ಪ ಪರ ವಕೀಲರು, ಅರ್ಜಿದಾರರು ಪ್ರತಿದಿನವೂ ಲೋಕಾಯುಕ್ತ ಪೊಲೀಸರ ತನಿಖೆಗೆ ಹಾಜರಾಗಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ತನಿಖೆ ಮುಕ್ತಾಯದ ಹಂತದಲ್ಲಿರುವಾಗ ಅವರನ್ನು ಬಂಧಿಸಿ ವಿಚಾರಣೆ ನಡೆಸುವ ಅಗತ್ಯವಿಲ್ಲ. ಆದ್ದರಿಂದ, ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕೆಂದು ಕೋರಿದರು.
ಲೋಕಾಯುಕ್ತ ಪೊಲೀಸರ ಪರ ಹಿರಿಯ ವಕೀಲರು ವಾದ ಮಂಡಿಸಿ, 'ಇಂದಿನ ದಿನಗಳಲ್ಲಿ ಲಂಚವನ್ನು ನೇರವಾಗಿ ಪಡೆಯುವುದಿಲ್ಲ. ಬೇರೊಬ್ಬರ ಮೂಲಕ ಸ್ವೀಕರಿಸುತ್ತಾರೆ. ಇಲ್ಲೂ ಸಹ ಅದೇ ರೀತಿಯಾಗಿದ್ದು, ಪುತ್ರನ ಮೂಲಕ ಲಂಚವನ್ನು ಪಡೆದಿದ್ದಾರೆ ಎಂದರು.
The Lokayukta police on Friday argued before the high court that Channagiri BJP MLA and former chairman of the Karnataka Soaps and Detergents Ltd (KSDL) K Madal Virupakshappa is required for custodial interrogation to obtain more information as he is not cooperating with the investigation and giving evasive answers.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm