ಬ್ರೇಕಿಂಗ್ ನ್ಯೂಸ್
19-03-23 10:51 pm HK News Desk ಕರ್ನಾಟಕ
ಬೆಂಗಳೂರು, ಮಾ.19: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತಕ್ಕೆ (ಕೆಎಸ್ಡಿಎಲ್) ಕೆಮಿಕಲ್ ಆಯಿಲ್ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸಲೇಬೇಕು ಎಂದು ಲೋಕಾಯುಕ್ತ ಪೊಲೀಸರು ಹೈಕೋರ್ಟ್ನಲ್ಲಿ ವಾದ ಮಂಡನೆ ಮಾಡಿದ್ದಾರೆ.
ಅಕ್ರಮದಲ್ಲಿ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಬಂಧನ ಆಗಿದೆ. ಅಲ್ಲದೆ, ವಿರೂಪಾಕ್ಷಪ್ಪ ಹೆಸರು ಕೂಡ ಪ್ರಸ್ತಾಪವಾಗಿದೆ. ವಿರೂಪಾಕ್ಷಪ್ಪ ಪ್ರತಿದಿನ ನೋಟ್ಸ್ ಬರೆದುಕೊಂಡು ಬಂದು ಪೊಲೀಸರ ಮುಂದೆ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ, ಅವರನ್ನು ಬಂಧಿಸಿ ವಿಚಾರಣೆ ನಡೆಸಿದರೆ ತನಿಖೆಗೆ ಅನುಕೂಲವಾಗಲಿದೆ ಎಂದು ಲೋಕಾಯುಕ್ತ ಪೊಲೀಸರ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.
ಬಂಧನ ಭೀತಿ ಎದುರಿಸುತ್ತಿರುವ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ ವಿಚಾರಣೆ ನಡೆಸಿತ್ತು. ಅರ್ಜಿದಾರರು ಹಾಗೂ ಲೋಕಾಯುಕ್ತ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ಪೀಠ ಆದೇಶ ಕಾಯ್ದಿರಿಸಿತು.
'ವಿರೂಪಾಕ್ಷಪ್ಪ ಪರ ವಕೀಲರು, ಅರ್ಜಿದಾರರು ಪ್ರತಿದಿನವೂ ಲೋಕಾಯುಕ್ತ ಪೊಲೀಸರ ತನಿಖೆಗೆ ಹಾಜರಾಗಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ತನಿಖೆ ಮುಕ್ತಾಯದ ಹಂತದಲ್ಲಿರುವಾಗ ಅವರನ್ನು ಬಂಧಿಸಿ ವಿಚಾರಣೆ ನಡೆಸುವ ಅಗತ್ಯವಿಲ್ಲ. ಆದ್ದರಿಂದ, ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕೆಂದು ಕೋರಿದರು.
ಲೋಕಾಯುಕ್ತ ಪೊಲೀಸರ ಪರ ಹಿರಿಯ ವಕೀಲರು ವಾದ ಮಂಡಿಸಿ, 'ಇಂದಿನ ದಿನಗಳಲ್ಲಿ ಲಂಚವನ್ನು ನೇರವಾಗಿ ಪಡೆಯುವುದಿಲ್ಲ. ಬೇರೊಬ್ಬರ ಮೂಲಕ ಸ್ವೀಕರಿಸುತ್ತಾರೆ. ಇಲ್ಲೂ ಸಹ ಅದೇ ರೀತಿಯಾಗಿದ್ದು, ಪುತ್ರನ ಮೂಲಕ ಲಂಚವನ್ನು ಪಡೆದಿದ್ದಾರೆ ಎಂದರು.
The Lokayukta police on Friday argued before the high court that Channagiri BJP MLA and former chairman of the Karnataka Soaps and Detergents Ltd (KSDL) K Madal Virupakshappa is required for custodial interrogation to obtain more information as he is not cooperating with the investigation and giving evasive answers.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm