ಬ್ರೇಕಿಂಗ್ ನ್ಯೂಸ್
24-03-23 04:38 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24: ಟಿಕೆಟ್ ಬೇಡಿಕೆ ಮುಂದಿಟ್ಟು ಸಿದ್ದರಾಮಯ್ಯ ನಿವಾಸದಲ್ಲಿ ಹಾಲಿ ಶಾಸಕ ಹರಿಹರ ರಾಮಪ್ಪ ಹಾಗೂ ವಿಧಾನಪರಿಷತ್ ಬಿಜೆಪಿ ಸದಸ್ಯ ಆರ್.ಶಂಕರ್ ಪರವಾಗಿ ಕಾರ್ಯಕರ್ತರು ಜಮಾಯಿಸಿದ್ದರು. ಕಾರ್ಯಕರ್ತರ ಜೊತೆಗೆ ಮಾತನಾಡಿಸಲು ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿ ನಡೆದ ತಳ್ಳಾಟದಿಂದ ಗರಂ ಆದ ಸಿದ್ದು, ಕಾರ್ಯಕರ್ತರೊಬ್ಬರ ಕಪಾಳಕ್ಕೆ ಬಾರಿಸಿದ ಪ್ರಸಂಗ ನಡೆಯಿತು.
ಶುಕ್ರವಾರ ಬೆಳಗ್ಗೆ ಶಿವಾನಂದ ಸರ್ಕಲ್ ಬಳಿ ಇರುವ ಸಿದ್ದರಾಮಯ್ಯ ನಿವಾಸಕ್ಕೆ ಶಾಸಕ ರಾಮಪ್ಪ ಬೆಂಬಲಿಗರು ಆಗಮಿಸಿದ್ದರು. ರಾಮಪ್ಪ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಬಲಿಗರು ಜಮಾಯಿಸಿ ಟಿಕೆಟ್ ನೀಡುವಂತೆ ಆಗ್ರಹಿಸಿದರು. ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆರ್. ಶಂಕರ್ ಬೆಂಬಲಿಗರು ಕೂಡಾ ಆಗಮಿಸಿದ್ದರು. ರಾಣೆಬೆನ್ನೂರು ಕ್ಷೇತ್ರದ ಟಿಕೆಟ್ ನೀಡುವಂತೆ ಕಾರ್ಯಕರ್ತರು ಸಿದ್ದರಾಮಯ್ಯ ಬಳಿ ಒತ್ತಾಯಿಸಿದರು.
ಈ ವೇಳೆ ಕಾರ್ಯಕರ್ತರ ಜೊತೆಗೆ ಮಾತನಾಡಲು ಸಿದ್ದರಾಮಯ್ಯ ಆಗಮಿಸಿದರು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಜೊತೆ ಮಾತನಾಡಲು ಕಾರ್ಯಕರ್ತರು ಮುಗಿಬಿದ್ದರು. ಈ ವೇಳೆ ಉಂಟಾದ ತಳ್ಳಾಟದಿಂದ ಕೋಪಗೊಂಡ ಸಿದ್ದರಾಮಯ್ಯ ಕಾರ್ಯಕರ್ತನೊಬ್ಬನಿಗೆ ಕಪಾಲಮೋಕ್ಷ ಮಾಡಿದರು.
ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಅಂತಿಮ ಹಂತದ ಲಾಬಿ ನಡೆಯುತ್ತಿದೆ. ಅದರಲ್ಲೂ ರಾಣೆಬೆನ್ನೂರು ಟಿಕೆಟ್ ಗಾಗಿ ಆರ್. ಶಂಕರ್ ಬೆಂಬಲಿಗರು ಸಿದ್ದರಾಮಯ್ಯ ಮನೆಗೆ ಬಂದಿರುವುದು ಕುತೂಹಲ ಕೆರಳಿಸಿದೆ. ಆರ್. ಶಂಕರ್ ಕಾಂಗ್ರೆಸ್ ಸೇರ್ಪಡೆಗೆ ಪ್ರಯತ್ನಿಸಿದ್ದರು. ಆದರೆ ಅದಕ್ಕೆ ಸಿದ್ದರಾಮಯ್ಯ ಅವರೇ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಇದೆ. ಈ ನಡುವೆ ಅವರ ಬೆಂಬಲಿಗರು ಸಿದ್ದರಾಮಯ್ಯ ಮನೆಯಲ್ಲಿ ಜಮಾಯಿಸಿ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆ.
An irked @siddaramaiah slaps a Congress worker outside his residence, dozens of supporters had gathered to meet him, the man who was slapped is said to have repeatedly asked Siddaramaiah about the ticket for his leader. pic.twitter.com/caGK7qKaJ5
— Deepak Bopanna (@dpkBopanna) March 24, 2023
Congress leader Siddaramaiah today slapped a man when he was reportedly surrounded by a group of supporters demanding election ticket for a party MLA.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm