ಬ್ರೇಕಿಂಗ್ ನ್ಯೂಸ್
24-03-23 04:38 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24: ಟಿಕೆಟ್ ಬೇಡಿಕೆ ಮುಂದಿಟ್ಟು ಸಿದ್ದರಾಮಯ್ಯ ನಿವಾಸದಲ್ಲಿ ಹಾಲಿ ಶಾಸಕ ಹರಿಹರ ರಾಮಪ್ಪ ಹಾಗೂ ವಿಧಾನಪರಿಷತ್ ಬಿಜೆಪಿ ಸದಸ್ಯ ಆರ್.ಶಂಕರ್ ಪರವಾಗಿ ಕಾರ್ಯಕರ್ತರು ಜಮಾಯಿಸಿದ್ದರು. ಕಾರ್ಯಕರ್ತರ ಜೊತೆಗೆ ಮಾತನಾಡಿಸಲು ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿ ನಡೆದ ತಳ್ಳಾಟದಿಂದ ಗರಂ ಆದ ಸಿದ್ದು, ಕಾರ್ಯಕರ್ತರೊಬ್ಬರ ಕಪಾಳಕ್ಕೆ ಬಾರಿಸಿದ ಪ್ರಸಂಗ ನಡೆಯಿತು.
ಶುಕ್ರವಾರ ಬೆಳಗ್ಗೆ ಶಿವಾನಂದ ಸರ್ಕಲ್ ಬಳಿ ಇರುವ ಸಿದ್ದರಾಮಯ್ಯ ನಿವಾಸಕ್ಕೆ ಶಾಸಕ ರಾಮಪ್ಪ ಬೆಂಬಲಿಗರು ಆಗಮಿಸಿದ್ದರು. ರಾಮಪ್ಪ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಬಲಿಗರು ಜಮಾಯಿಸಿ ಟಿಕೆಟ್ ನೀಡುವಂತೆ ಆಗ್ರಹಿಸಿದರು. ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆರ್. ಶಂಕರ್ ಬೆಂಬಲಿಗರು ಕೂಡಾ ಆಗಮಿಸಿದ್ದರು. ರಾಣೆಬೆನ್ನೂರು ಕ್ಷೇತ್ರದ ಟಿಕೆಟ್ ನೀಡುವಂತೆ ಕಾರ್ಯಕರ್ತರು ಸಿದ್ದರಾಮಯ್ಯ ಬಳಿ ಒತ್ತಾಯಿಸಿದರು.
ಈ ವೇಳೆ ಕಾರ್ಯಕರ್ತರ ಜೊತೆಗೆ ಮಾತನಾಡಲು ಸಿದ್ದರಾಮಯ್ಯ ಆಗಮಿಸಿದರು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಜೊತೆ ಮಾತನಾಡಲು ಕಾರ್ಯಕರ್ತರು ಮುಗಿಬಿದ್ದರು. ಈ ವೇಳೆ ಉಂಟಾದ ತಳ್ಳಾಟದಿಂದ ಕೋಪಗೊಂಡ ಸಿದ್ದರಾಮಯ್ಯ ಕಾರ್ಯಕರ್ತನೊಬ್ಬನಿಗೆ ಕಪಾಲಮೋಕ್ಷ ಮಾಡಿದರು.
ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಅಂತಿಮ ಹಂತದ ಲಾಬಿ ನಡೆಯುತ್ತಿದೆ. ಅದರಲ್ಲೂ ರಾಣೆಬೆನ್ನೂರು ಟಿಕೆಟ್ ಗಾಗಿ ಆರ್. ಶಂಕರ್ ಬೆಂಬಲಿಗರು ಸಿದ್ದರಾಮಯ್ಯ ಮನೆಗೆ ಬಂದಿರುವುದು ಕುತೂಹಲ ಕೆರಳಿಸಿದೆ. ಆರ್. ಶಂಕರ್ ಕಾಂಗ್ರೆಸ್ ಸೇರ್ಪಡೆಗೆ ಪ್ರಯತ್ನಿಸಿದ್ದರು. ಆದರೆ ಅದಕ್ಕೆ ಸಿದ್ದರಾಮಯ್ಯ ಅವರೇ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಇದೆ. ಈ ನಡುವೆ ಅವರ ಬೆಂಬಲಿಗರು ಸಿದ್ದರಾಮಯ್ಯ ಮನೆಯಲ್ಲಿ ಜಮಾಯಿಸಿ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆ.
An irked @siddaramaiah slaps a Congress worker outside his residence, dozens of supporters had gathered to meet him, the man who was slapped is said to have repeatedly asked Siddaramaiah about the ticket for his leader. pic.twitter.com/caGK7qKaJ5
— Deepak Bopanna (@dpkBopanna) March 24, 2023
Congress leader Siddaramaiah today slapped a man when he was reportedly surrounded by a group of supporters demanding election ticket for a party MLA.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm