ಬ್ರೇಕಿಂಗ್ ನ್ಯೂಸ್
24-03-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24 : 2 ಬಿಯಲ್ಲಿರುವ ಮುಸ್ಲಿಮರ ಮೀಸಲಾತಿಗೆ ಕತ್ತರಿ ಪ್ರಯೋಗ ಹಾಕಿದ್ದು, ಅದನ್ನು ಪ್ರತಿಯಾಗಿ ಒಕ್ಕಲಿಗರಿಗೆ ಹಾಗೂ ವೀರಶೈವ ಲಿಂಗಾಯತರಿಗೆ ಹಂಚಿಕೆ ಮಾಡಿ ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾದ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. 2 ಬಿಯಲ್ಲಿರುವ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಇತ್ತು. ಆದರೆ ಇದೀಗ ಅದನ್ನು 2 ಸಿ ಗೆ ಶೇ 2 ಹಾಗೂ 2 ಡಿಗೆ ಶೇ. 2 ರಷ್ಟು ಹಂಚಿಕೆ ಮಾಡಲಾಗಿದೆ. ಇನ್ನು 2 ಬಿಯಲ್ಲಿದ್ದ ಮುಸ್ಲಿಮರಿಗೆ ಆರ್ಥಿಕ ಹಿಂದುಳಿದ ವರ್ಗ (ಇಡಬ್ಲ್ಯೂಎಸ್) ಮೀಸಲಾತಿ ವ್ಯಾಪ್ತಿಗೆ ವರ್ಗಾವಣೆ ಮಾಡಿ ಸಂಪುಟ ನಿರ್ಧಾರ ಕೈಗೊಂಡಿದೆ. ಈ ಮೂಲಕ 2 ಸಿ ಯಲ್ಲಿರುವ ಒಕ್ಕಲಿಗರಿಗೆ ಶೇ. 4 ರಿಂದ ಶೇ. 6 ಹಾಗೂ 2 ಡಿ ಯಲ್ಲಿರುವ ವೀರಶೈವ ಹಾಗೂ ಲಿಂಗಾಯತರಿಗೆ ಶೇ. 5 ರಿಂದ ಶೇ 7 ರಷ್ಟು ಮೀಸಲಾತಿ ಹೆಚ್ಚಳ ಆಗುತ್ತದೆ.
ಎಸ್ ಸಿ ಒಳಮೀಸಲಾತಿ ಬಗ್ಗೆ ಕ್ಯಾಬಿನೆಟ್ ಸಬ್ ಕಮಿಟಿ ರಚನೆ ಮಾಡಲಾಗಿತ್ತು. ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿ ನೀಡಿದ ವರದಿಗೆ ಕ್ಯಾಬಿನೆಟ್ ಅಸ್ತು ಎಂದಿದೆ. ಎಸ್ ಸಿ ಮೀಸಲಾತಿಯಲ್ಲಿ ಎಲ್ಲರಿಗೂ ನ್ಯಾಯ ಸಿಗುವ ನಿಟ್ಟಿನಲ್ಲಿ ಆರ್ಟಿಕಲ್ 341(2) ಅನ್ವಯ ನಾಲ್ಕು ಗುಂಪುಗಳಾಗಿ ವರ್ಗೀಕರಣ ಮಾಡಲಾಗಿದೆ.
ಎಸ್ ಸಿ (ಎಡ) ಶೇ.6, ಎಸ್ ಸಿ (ಬಲ) ಶೇ. 5.5, ಸ್ಪರ್ಶರಿಗೆ ಶೇ. 4.5 ಹಾಗೂ ಇತರರಿಗೆ ಶೇ. 1 ರಷ್ಟು ನೀಡಲು ಸಂಪುಟ ಉಪಸಮಿತಿ ಮಾಡಿದ ಶಿಫಾರಸ್ಸುಗೆ ಕ್ಯಾಬಿನೆಟ್ ಸಮ್ಮತಿ ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಡು ಕುರುಬ ಹಾಗೂ ಗೊಂಡ ಕುರುಬ ಪಂಗಡವನ್ನು ಎಸ್ ಟಿ ಮೀಸಲಾತಿ ಪಟ್ಟಿಗೆ ಸೇರಿಸುವ ಸಂಬಂಧ ಕೇಂದ್ರಕ್ಕೆ ಶಿಫಾರಸು ಮಾಡಲು ಸಂಬಂಧಿತ ಇಲಾಖೆಗೆ ಸೂಚನೆ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿರುವ ಕುರುಬ ಸಮುದಾಯದ ಪಂಗಡವಾದ ಕಾಡು ಕುರಬ ಹಾಗೂ ಗೊಂಡ ಕುರುಬರನ್ನು ಶಿಫಾರಸು ಮಾಡಿದೆ. ಮೈಸೂರು ವಿಶ್ವ ವಿದ್ಯಾನಿಲಯ ಮಾನವ ಶಾಸ್ತ್ರ ಅಧ್ಯಯನ ವಿಭಾಗಕ್ಕೆ ಕುಲಶಾಸ್ತ್ರ ಅಧ್ಯಯನ ಮಾಡುವಂತೆ ತಿಳಿಸಲಾಗಿತ್ತು. ಅವರು ಗುರುವಾರ ಅಧ್ಯಯನ ವರದಿಯನ್ನು ನೀಡಿದ್ದರು. ಅದೂ ಕೂಡ ಸಂಪುಟದಲ್ಲಿ ಚರ್ಚೆ ಆಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
Karnataka’s outgoing government headed by Basavaraj Bommai on Friday decided to take off Muslims from the other backward communities (OBC) list and move them into the economically weaker sections (EWS) quota while handing a 2% increase for the dominant Lingayats and Vokkaligas.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm