ಬ್ರೇಕಿಂಗ್ ನ್ಯೂಸ್
25-03-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮಾ.25 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಹುತೇಕ ತೀವ್ರ ಪೈಪೋಟಿ ಇಲ್ಲದ ಕಡೆಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ತೀವ್ರ ಕುತೂಹಲ ಮೂಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲು ವರುಣಾ ಕ್ಷೇತ್ರವನ್ನು ಅಂತಿಮ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ರಮಾನಾಥ ರೈ, ಬೆಳ್ತಂಗಡಿಗೆ ರಕ್ಷಿತ್ ಶಿವರಾಂ, ಸುಳ್ಯ ಎಸ್ಸಿ ಮೀಸಲು ಕ್ಷೇತ್ರಕ್ಕೆ ಜಿಗಣಿ ಕೃಷ್ಣಪ್ಪ ಹೆಸರನ್ನು ಫೈನಲ್ ಮಾಡಲಾಗಿದೆ. ಸುಳ್ಯದಲ್ಲಿ ಮಡಿಕೇರಿ ಮೂಲದ ನಂದಕುಮಾರ್ ಟಿಕೆಟ್ ಪಡೆಯಲು ತೀವ್ರ ಸೆಣಸಾಟ ನಡೆಸಿದ್ದರು. ಉಳಿದಂತೆ, ಮೂಡುಬಿದ್ರೆಗೆ ಮಿಥುನ್ ರೈಗೆ, ಮಂಗಳೂರು- ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್ ಗೆ ಟಿಕೆಟ್ ನೀಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕಾಪು ಕ್ಷೇತ್ರಕ್ಕೆ ವಿನಯ ಕುಮಾರ್ ಸೊರಕೆ, ಬೈಂದೂರಿಗೆ ಗೋಪಾಲ ಪೂಜಾರಿ, ಕುಂದಾಪುರದಲ್ಲಿ ಸಹಕಾರಿ ಹಿನ್ನೆಲೆಯ ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ಸಿಕ್ಕಿದೆ. ಕುಂದಾಪುರದಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲು ತೀವ್ರ ಪೈಪೋಟಿ ಒಡ್ಡಿದ್ದರು. ಸ್ಪರ್ಧೆ ಹೆಚ್ಚಿರುವ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಉಡುಪಿ, ಕಾರ್ಕಳ ಕ್ಷೇತ್ರದ ಟಿಕೆಟ್ ಫೈನಲ್ ಮಾಡಲಾಗಿಲ್ಲ.




ಸೊರಬ ಮಧು ಬಂಗಾರಪ್ಪ, ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಲಾಗಿದೆ. ಹುಣಸೂರಿನಲ್ಲಿ ಎಚ್.ಪಿ. ಮಂಜುನಾಥ್ ಟಿಕೆಟ್ ಪಡೆದಿದ್ದಾರೆ.
The Congress party released its first list of 124 candidates for the upcoming legislative assembly elections. It is confirmed that former chief minister and leader of opposition Siddaramaiah will be contesting from Varuna constituency. D K Shivakumar will be contesting from Kanakapura.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm