ಬ್ರೇಕಿಂಗ್ ನ್ಯೂಸ್
25-03-23 01:20 pm HK News Desk ಕರ್ನಾಟಕ
ಮಂಡ್ಯ, ಮಾ.25 : ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಗೂಡ್ಸ್ ಟೆಂಪೊ ಹಠಾತ್ ಬ್ರೇಕ್ ಹಾಕಿದ ಕಾರಣ ಹಿಂದೆ ಬರುತ್ತಿದ್ದ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರ್ನಲ್ಲಿದ್ದ ತಾಯಿ– ಮಗ ಮೃತಪಟ್ಟು ತಂದೆ ತೀವ್ರವಾಗಿ ಗಾಯಗೊಂಡಿದ್ದಾರೆ.
ಕೊಡಗು ಜಿಲ್ಲೆ, ನಾಪೋಕ್ಲು ಬಲಮುರಿ ನಿವಾಸಿಗಳಾದ ಕವಿತಾ (47), ಅವರ ಪುತ್ರ ಆರ್ಯ ಅಯ್ಯಪ್ಪನ್ (14) ಮೃತಪಟ್ಟಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಆರ್ಯ ತಂದೆ ಮುತ್ತಪ್ಪ (54) ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಕುಟುಂಬ ಯುಗಾದಿ ಹಬ್ಬಕ್ಕಾಗಿ ಸ್ವಗ್ರಾಮಕ್ಕೆ ಬಂದಿತ್ತು. ಹಬ್ಬ ಮುಗಿಸಿ ಮಾರುತಿ ಸ್ವಿಫ್ಟ್ ಕಾರ್ನಲ್ಲಿ ವಾಪಸ್ ಬೆಂಗಳೂರಿಗೆ ತೆರಳುವಾಗ ಘಟನೆ ನಡೆದಿದೆ. ಪಟ್ಟಣದ ಹೊರವಲಯ ಐಶ್ವರ್ಯ ಕಾನ್ವೆಂಟ್ ಬಳಿ ಮಧ್ಯಾಹ್ನ 2.20ರ ಸುಮಾರಿಗೆ ಅಪಘಾತ ಸಂಭವಿಸಿದೆ. ಎಕ್ಸ್ಪ್ರೆಸ್ವೇಯಲ್ಲಿ ವೇಗವಾಗಿ ಚಲಿಸುತ್ತಿದ್ದ ಗೂಡ್ಸ್ ಟೆಂಪೊ ಬ್ರೇಕ್ ಹಾಕಿದ್ದೇ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.


ಡಿಕ್ಕಿಯ ರಭಸಕ್ಕೆ ಆರ್ಯ ಸ್ಥಳದಲ್ಲೇ ಮೃತಪಟ್ಟರು, ಕವಿತಾ ಮಂಡ್ಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದ ಸಂದರ್ಭದಲ್ಲಿ ಕೊನೆಯುಸಿರೆಳೆದರು. ಮುತ್ತಪ್ಪ ಸ್ಥಿತಿ ಚಿಂತಾಜನಕವಾಗಿದ್ದು ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂಚಾರ ಠಾಣಾ ಸಬ್ ಇನ್ಸ್ಪೆಕ್ಟರ್ ಅಯ್ಯನಗೌಡ ಹಾಗೂ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಮದ್ದೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a terrible accident between a car and a goods tempo, a mother and son from Kodagu died and the father was seriously injured on the outskirts of the city on the Bangalore-Mysore national highway on Friday afternoon. Kavita (47) and her son Arya Ayyappan (14), residents of Balamuri near Napoklu in Kodagu district, are among the unfortunate people who died in the accident.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm