ಬ್ರೇಕಿಂಗ್ ನ್ಯೂಸ್
25-03-23 05:21 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.25 : ಮನೆಯವರು ಪ್ರೀತಿ ನಿರಾಕರಿಸಿದ್ದಕ್ಕೆ ನೊಂದಿದ್ದ ಪ್ರೇಮಿಗಳು ರಾಮದೇವರ ಬೆಟ್ಟದಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿ ಪವಾಡ ಸದೃಶ ಬದುಕುಳಿದ ಘಟನೆ ನಡೆದಿದೆ.
ಬೆಂಗಳೂರಿನ ನಾಗರಬಾವಿ ನಿವಾಸಿ ಚೇತನ್ (19) ಮತ್ತು ಕತ್ರಿಗುಪ್ಪೆಯ ಯುವತಿ (19) ಆತ್ಮಹತ್ಯೆಗೆ ಯತ್ನಿಸಿದವರು. ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಚೇತನ್ ಬಿಇ ವ್ಯಾಸಂಗ ಮಾಡುತ್ತಿದ್ದರೆ, ಯುವತಿ ಬಿಕಾಂ ಓದುತ್ತಿದ್ದಾಳೆ. ಇಬ್ಬರೂ 5 ವರ್ಷಗಳಿಂದ ಪ್ರೀತಿಸುತ್ತಿದ್ದು, ಮನೆಯವರಿಗೂ ತಿಳಿದಿತ್ತು.
ಆದರೆ, ಇವರ ಪ್ರೀತಿಯನ್ನು ನಿರಾಕರಿಸಿದ್ದ ಎರಡೂ ಕುಟುಂಬದವರು ವ್ಯಾಸಂಗ ಮುಂದುವರಿಸಲು ಸೂಚನೆ ನೀಡಿದ್ದರು. ಇದರಿಂದ ಮನನೊಂದ ಇಬ್ಬರೂ ಬೈಕ್ನಲ್ಲಿ ರಾಮದೇವರ ಬೆಟ್ಟಕ್ಕೆ ತೆರಳಿದ್ದಾರೆ. ಪಾರ್ಕಿಂಗ್ ಜಾಗದಲ್ಲಿ ಬೈಕ್ ನಿಲ್ಲಿಸಿ, ನಂತರ ಬೆಟ್ಟಕ್ಕೆ ತೆರಳಿ, ಡೆತ್ನೋಟ್ ಬರೆದಿಟ್ಟು ಬ್ಯಾಗ್ ಮತ್ತು ಚಪ್ಪಲಿಯನ್ನು ಬಿಟ್ಟು ಬೆಟ್ಟದಿಂದ ಜಿಗಿದಿದ್ದಾರೆ.
ನಮ್ಮ ಮನೆಯಲ್ಲಿ ಪ್ರೀತಿ ನಿರಾಕರಿಸಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ನೋಟ್ನಲ್ಲಿ ಬರೆದಿದ್ದು ಸುಮಾರು 100 ಅಡಿಗೂ ಹೆಚ್ಚು ಆಳದ ಕಂದಕಕ್ಕೆ ಜಿಗಿದಿದ್ದಾರೆ. ಇಷ್ಟು ಎತ್ತರದಿಂದ ಜಿಗಿದರೆ ಕಲ್ಲು ಬಂಡೆಗಳಿಂದ ಕೂಡಿರುವ ಪ್ರದೇಶದಲ್ಲಿ ಬದುಕುಳಿಯುವುದು ಕಷ್ಟ. ಆದರೆ ಇಬ್ಬರೂ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಭದ್ರತೆಗೆ ನಿಯೋಜನೆ ಮಾಡಿರುವ ಹೋಂಗಾರ್ಡ್ ಸಿಬ್ಬಂದಿ, ಬೆಟ್ಟದ ಮೇಲೆ ಪರಿಶೀಲನೆ ಮಾಡುತ್ತಿದ್ದ ವೇಳೆ ಚಪ್ಪಲಿ ಮತ್ತು ಬ್ಯಾಗ್ ಇರುವುದು ಕಂಡುಬಂದಿತ್ತು. ತಕ್ಷಣವೇ ಏನೋ ಅನಾಹುತ ನಡೆದಿರಬೇಕೆಂದು ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಪರಿಶೀಲನೆ ನಡೆಸಿದಾಗ ಇಬ್ಬರು ಆತ್ಮಹತ್ಯೆಗೆ ಯತ್ನಿಸಿರುವುದು ಕಂಡುಬಂದಿದೆ. ಇಬ್ಬರೂ ಮೃತಪಟ್ಟಿರಬಹುದು ಎಂದು ಅಂದಾಜಿಸಿದ್ದರೂ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡುಬಂದಿದ್ದು, ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಪ್ರೇಮಿಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
The lovers who expressed their opposition to Love fell from the cliff of Ramadevara Betta and tried to commit suicide. The condition of the young man is critical, while the young woman has minor injuries and is being treated at Rajarajeshwari Hospital, Bangalore. The lovers, who had come to the deserted area of Ramdevara hill, tried to commit suicide by throwing themselves from the top of a big rock.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm