ಬ್ರೇಕಿಂಗ್ ನ್ಯೂಸ್
27-03-23 03:34 pm HK News Desk ಕರ್ನಾಟಕ
ಶಿವಮೊಗ್ಗ, ಮಾ.27: ರಾಜ್ಯ ಸರಕಾರದ ಒಳ ಮೀಸಲಾತಿ ವಿರೋಧಿಸಿ ಶಿಕಾರಿಪುರದಲ್ಲಿ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಿಕಾರಿಪುರ ತಾಲೂಕಿನಲ್ಲಿ ಪೊಲೀಸರು 144 ಸೆಕ್ಷನ್ ಜಾರಿಗೊಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಿಕಾರಿಪುರದ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ಎಸ್ಸಿ ಸಮುದಾಯದ ಮೀಸಲಾತಿ ತೆಗೆದು ಒಳ ಪಂಗಡಗಳಿಗೆ ಹಂಚಿಕೆ ಮಾಡಿರುವುದನ್ನು ವಿರೋಧಿಸಿ ವಿವಿಧ ಸಮುದಾಯಗಳ ಮಹಿಳೆಯರು ಸೇರಿದಂತೆ ನೂರಾರು ಮಂದಿ ಯಡಿಯೂರಪ್ಪ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಇದೇ ವೇಳೆ, ಯಡಿಯೂರಪ್ಪ ಜನ್ಮದಿನದ ಅಂಗವಾಗಿ ನೀಡಿದ್ದ ಸೀರೆಗಳನ್ನು ಪ್ರತಿಭಟನಾಕಾರರು ಬೆಂಕಿ ಹಾಕಿ ಸುಟ್ಟಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಸರ್ಪಗಾವಲು ಹಾಕಿದ್ದರು. ಆದರೆ ಪೊಲೀಸರಿದ್ದ ಜಾಗಕ್ಕೇ ಪ್ರತಿಭಟನೆ ನಡೆಸುತ್ತಿದ್ದಲ್ಲಿಂದ ಜನರು ಕಲ್ಲು ತೂರಿದ್ದಾರೆ. ಇದರಿಂದ ಪೊಲೀಸರು ಲಾಠಿ ಕೈಗೆತ್ತಿಕೊಂಡಿದ್ದು, ಲಾಠಿ ಬೀಸುತ್ತಾ ಮುನ್ನುಗ್ಗಿದ್ದಾರೆ. ಲಾಠಿ ಏಟಿಗೆ ಹಲವಾರು ಮಂದಿ ಗಾಯಗೊಂಡಿದ್ದಾರೆ. ಪೊಲೀಸರ ವಿರುದ್ಧ ಜನರು ಆಕ್ರೋಶಗೊಂಡಿದ್ದರಿಂದ ಮತ್ತಷ್ಟು ಹಿಂಸಾಚಾರ ನಡೆಯುವ ಸೂಚನೆ ಹಿನ್ನೆಲೆಯಲ್ಲಿ ಇಡೀ ಶಿಕಾರಿಪುರ ತಾಲೂಕಿನಲ್ಲಿ ಸೆಕ್ಷನ್ ಹಾಕಲಾಗಿದೆ.
ಎರಡು ದಿನಗಳ ಹಿಂದಷ್ಟೇ ರಾಜ್ಯ ಸರಕಾರ ಪರಿಶಿಷ್ಟ ಸಮುದಾಯಕ್ಕಿದ್ದ 17 ಪರ್ಸೆಂಟ್ ಮೀಸಲಾತಿಯನ್ನು ವಿಭಾಗಿಸಿ ಒಳ ಮೀಸಲಾತಿ ನೀಡಿತ್ತು. ಬೋವಿ, ಲಂಬಾಣಿ, ಕೊರಮ, ಅರೆ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಒಳ ಮೀಸಲಾತಿ ನೀಡಿದ್ದು ಕೆಲವು ಸಮುದಾಯಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನು ವಿರೋಧಿಸಿ ಬೋವಿ, ಲಂಬಾಣಿ ಸೇರಿದಂತೆ ಕೆಲವು ಸಮುದಾಯದ ಜನರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಹಿಂಸಾಚಾರ ನಡೆದಿದ್ದು ಪೊಲೀಸರು ಮತ್ತು ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
Protesters pelt stones at #Yediyurappas house in #Shivamogga over #reservation by Banjara Community #BreakingNews #bsyediyurappa #shivamogganews pic.twitter.com/hx94hx7wpj
— Headline Karnataka (@hknewsonline) March 27, 2023
Protesters on Monday allegedly pelted stones at former Karnataka Chief Minister and BJP leader BS Yeddyurappa’s house in Shivamogga’s Shikaripura. The protests were held by the Banjara Community opposing the internal reservation recommended by the state government to the Centre.Protesters reportedly clashed with police deployed at Yediyurappa’s residence, TV9 Kannada reported. Some policemen were injured after protesters threw stones and slippers at them.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm