ಬ್ರೇಕಿಂಗ್ ನ್ಯೂಸ್
28-03-23 10:39 pm HK News Desk ಕರ್ನಾಟಕ
ಮಂಡ್ಯ, ಮಾ.28: ಕಾಂಗ್ರೆಸ್ ವತಿಯಿಂದ ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಸ್ ಮೇಲಿಂದಲೇ ಜಾನಪದ ಕಲಾವಿದರಿಗೆ ಹಣವನ್ನು ಎರಚುವ ಮೂಲಕ ಚುನಾವಣೆ ಸಂದರ್ಭದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.
ಮಂಡ್ಯ ತಾಲೂಕಿನ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೇವಿನಹಳ್ಳಿ ಗ್ರಾಮದಲ್ಲಿ ಇಂದು ಅದ್ಧೂರಿಯಾಗಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಇನ್ನು ಅಲ್ಲಿನ ಅಭ್ಯರ್ಥಿ ರಮೇಶ್ ಬಂಡಿಸಿದ್ದೇಗೌಡ ಅವರ ಪರವಾಗಿ ಬೇವಿನಹಳ್ಳಿಯಲ್ಲಿ ಬಸ್ ಮೇಲಿಂದಲೇ ರೋಡ್ ಶೋ ಮೂಲಕ ಭರ್ಜರಿ ಚುನಾವಣಾ ಪ್ರಚಾರ ಮಾಡುತ್ತಿದ್ದರು. ಈ ವೇಳೆ ಬೇವಿನಹಳ್ಳಿ ಬಸ್ ನಿಲ್ದಾಣದ ಬಳಿ ಹಲವು ಜಾನಪದ ಕಲಾತಂಡಗಳು ಪೂಜಾಕುಣಿತ ಹಾಗೂ ಪಟ ಕುಣಿತದ ದೇವರು ಹೊತ್ತುಕೊಂಡು ಕುಣಿಯುತ್ತಿದ್ದವು. ಇದನ್ನು ನೊಡಿದ ಡಿ.ಕೆ. ಶಿವಕುಮಾರ್ ಬಸ್ ಮೇಲಿಂದಲೇ ನೋಟಿನ ಕಂತೆಯನ್ನು ತೆರೆದು ಕಲಾ ತಂಡಗಳತ್ತ ಎಸೆದು ದರ್ಪ ತೋರಿದ್ದಾರೆ.

500 ಮುಖಬೆಲೆಯ ನೋಟುಗಳು;
ಇನ್ನು ಬಸ್ ಮೇಲಿಂದಲೇ ರೋಡ್ ಶೋ ಮೂಲಕ ಜನರತ್ತ ಕೈಬೀಸಿ ಮಾತನಾಡುತ್ತಾ ಸಾಗುತ್ತಿದ್ದ ವೇಳೆ ಡಿ.ಕೆ. ಶಿವಕುಮಾರ್ 500 ರೂ. ಮುಖಬೆಲೆಯ ಹಲವು ನೋಟುಗಳನ್ನು ಎರಚಿದ್ದಾರೆ. ಇನ್ನು ಜಾನಪದ ಕಲಾವಿದರಿಗೆ ಈ ಹಣ ಎರಚಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೂ, ಕಲಾವಿದರು ಪೂಜಾ ಕುಣಿತದ ದೇವರು ಹೊತ್ತುಕೊಂಡಿದ್ದು, ಇದು ಕಾಂಗ್ರೆಸ್ ಕಾರ್ಯಕರ್ತರ ಪಾಲಾಗಿದೆ ಎಂದು ಸ್ಥಳೀಯರು ಹಾಗೂ ಕಲಾತಂಡದ ಸದಸ್ಯರು ಹೇಳಿದ್ದಾರೆ. ಆದರೆ, ಕಲಾವಿದರ ಮೇಲೆ ಹಣವನ್ನು ಎರಚಿ ದರ್ಪ ತೋರಿಸಿದ ಡಿ.ಕೆ. ಶಿವಕುಮಾರ್ ಅವರ ಮೇಲೆ ಸ್ಥಳೀಯ ಮತದಾರರು ಮಾತ್ರ ಆಕ್ರೋಶ ಹೊರಹಾಕಿದ್ದಾರೆ.
ಅಂದು ರಮೇಶ್ ಕುಮಾರ್ ಅವರು ನಾಲ್ಕು ತಲೆಮಾರಿಗಾಗುವಷ್ಟು ನಾವು ಕಾಂಗ್ರೆಸ್ನಿಂದ ಪಡೆದಿದ್ದೇವೆ ಎಂದಿದ್ದರು. ಇಂದು ಅದೇ ಕಾಂಗ್ರೆಸ್ಸಿನ ಅಧ್ಯಕ್ಷ @DKShivakumar ಅವರು ಪ್ರಜಾದ್ರೋಹಿ ಯಾತ್ರೆಯಲ್ಲಿ ಹಣವನ್ನು ಎಸೆಯುತ್ತಿರುವುದನ್ನು ನೋಡಿದರೆ ಎಲ್ಲರಿಗೂ ಅರ್ಥ ಆಗುತ್ತದೆ.#ಪ್ರಜಾದ್ರೋಹಯಾತ್ರೆ pic.twitter.com/vG6NaeArES
— BJP Karnataka (@BJP4Karnataka) March 28, 2023
Karnataka Congress president DK Shivakumar, on the campaign trail in Mandya, threw money on people during a rally on Wednesday. In a video, Shivakumar was seen throwing currency notes on people part of a chariot procession near Bevinahalli.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm