ಬಸ್‌ ಮೇಲಿಂದಲೇ ಕಲಾವಿದರಿಗೆ ಹಣ ಎಸೆದ ಡಿಕೆಶಿ ; ದರ್ಪಕ್ಕೆ ಮಂಡ್ಯದಲ್ಲಿ ಸ್ಥಳೀಯರ ಆಕ್ರೋಶ 

28-03-23 10:39 pm       HK News Desk   ಕರ್ನಾಟಕ

ಕಾಂಗ್ರೆಸ್‌ ವತಿಯಿಂದ ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬಸ್‌ ಮೇಲಿಂದಲೇ ಜಾನಪದ ಕಲಾವಿದರಿಗೆ ಹಣವನ್ನು ಎರಚುವ ಮೂಲಕ ಚುನಾವಣೆ ಸಂದರ್ಭದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.

ಮಂಡ್ಯ, ಮಾ.28: ಕಾಂಗ್ರೆಸ್‌ ವತಿಯಿಂದ ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬಸ್‌ ಮೇಲಿಂದಲೇ ಜಾನಪದ ಕಲಾವಿದರಿಗೆ ಹಣವನ್ನು ಎರಚುವ ಮೂಲಕ ಚುನಾವಣೆ ಸಂದರ್ಭದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.

ಮಂಡ್ಯ ತಾಲೂಕಿನ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೇವಿನಹಳ್ಳಿ ಗ್ರಾಮದಲ್ಲಿ ಇಂದು ಅದ್ಧೂರಿಯಾಗಿ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಇನ್ನು ಅಲ್ಲಿನ ಅಭ್ಯರ್ಥಿ ರಮೇಶ್‌ ಬಂಡಿಸಿದ್ದೇಗೌಡ ಅವರ ಪರವಾಗಿ ಬೇವಿನಹಳ್ಳಿಯಲ್ಲಿ ಬಸ್‌ ಮೇಲಿಂದಲೇ ರೋಡ್‌ ಶೋ ಮೂಲಕ ಭರ್ಜರಿ ಚುನಾವಣಾ ಪ್ರಚಾರ ಮಾಡುತ್ತಿದ್ದರು. ಈ ವೇಳೆ ಬೇವಿನಹಳ್ಳಿ ಬಸ್‌ ನಿಲ್ದಾಣದ ಬಳಿ ಹಲವು ಜಾನಪದ ಕಲಾತಂಡಗಳು ಪೂಜಾಕುಣಿತ ಹಾಗೂ ಪಟ ಕುಣಿತದ ದೇವರು ಹೊತ್ತುಕೊಂಡು ಕುಣಿಯುತ್ತಿದ್ದವು. ಇದನ್ನು ನೊಡಿದ ಡಿ.ಕೆ. ಶಿವಕುಮಾರ್‌ ಬಸ್‌ ಮೇಲಿಂದಲೇ ನೋಟಿನ ಕಂತೆಯನ್ನು ತೆರೆದು ಕಲಾ ತಂಡಗಳತ್ತ ಎಸೆದು ದರ್ಪ ತೋರಿದ್ದಾರೆ.

DK Shivakumar: ర్యాలీలో కరెన్సీ నోట్లు విసిరిన డీకే | DK Shivakumar throws  currency notes on people during rally in Mandya AVR

500 ಮುಖಬೆಲೆಯ ನೋಟುಗಳು;

ಇನ್ನು ಬಸ್‌ ಮೇಲಿಂದಲೇ ರೋಡ್‌ ಶೋ ಮೂಲಕ ಜನರತ್ತ ಕೈಬೀಸಿ ಮಾತನಾಡುತ್ತಾ ಸಾಗುತ್ತಿದ್ದ ವೇಳೆ ಡಿ.ಕೆ. ಶಿವಕುಮಾರ್‌ 500 ರೂ. ಮುಖಬೆಲೆಯ ಹಲವು ನೋಟುಗಳನ್ನು ಎರಚಿದ್ದಾರೆ. ಇನ್ನು ಜಾನಪದ ಕಲಾವಿದರಿಗೆ ಈ ಹಣ ಎರಚಲಾಗಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದರೂ, ಕಲಾವಿದರು ಪೂಜಾ ಕುಣಿತದ ದೇವರು ಹೊತ್ತುಕೊಂಡಿದ್ದು, ಇದು ಕಾಂಗ್ರೆಸ್‌ ಕಾರ್ಯಕರ್ತರ ಪಾಲಾಗಿದೆ ಎಂದು ಸ್ಥಳೀಯರು ಹಾಗೂ ಕಲಾತಂಡದ ಸದಸ್ಯರು ಹೇಳಿದ್ದಾರೆ. ಆದರೆ, ಕಲಾವಿದರ ಮೇಲೆ ಹಣವನ್ನು ಎರಚಿ ದರ್ಪ ತೋರಿಸಿದ ಡಿ.ಕೆ. ಶಿವಕುಮಾರ್‌ ಅವರ ಮೇಲೆ ಸ್ಥಳೀಯ ಮತದಾರರು ಮಾತ್ರ ಆಕ್ರೋಶ ಹೊರಹಾಕಿದ್ದಾರೆ.

Karnataka Congress president DK Shivakumar, on the campaign trail in Mandya, threw money on people during a rally on Wednesday. In a video, Shivakumar was seen throwing currency notes on people part of a chariot procession near Bevinahalli.