ಬ್ರೇಕಿಂಗ್ ನ್ಯೂಸ್
28-03-23 10:39 pm HK News Desk ಕರ್ನಾಟಕ
ಮಂಡ್ಯ, ಮಾ.28: ಕಾಂಗ್ರೆಸ್ ವತಿಯಿಂದ ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಸ್ ಮೇಲಿಂದಲೇ ಜಾನಪದ ಕಲಾವಿದರಿಗೆ ಹಣವನ್ನು ಎರಚುವ ಮೂಲಕ ಚುನಾವಣೆ ಸಂದರ್ಭದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.
ಮಂಡ್ಯ ತಾಲೂಕಿನ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೇವಿನಹಳ್ಳಿ ಗ್ರಾಮದಲ್ಲಿ ಇಂದು ಅದ್ಧೂರಿಯಾಗಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಇನ್ನು ಅಲ್ಲಿನ ಅಭ್ಯರ್ಥಿ ರಮೇಶ್ ಬಂಡಿಸಿದ್ದೇಗೌಡ ಅವರ ಪರವಾಗಿ ಬೇವಿನಹಳ್ಳಿಯಲ್ಲಿ ಬಸ್ ಮೇಲಿಂದಲೇ ರೋಡ್ ಶೋ ಮೂಲಕ ಭರ್ಜರಿ ಚುನಾವಣಾ ಪ್ರಚಾರ ಮಾಡುತ್ತಿದ್ದರು. ಈ ವೇಳೆ ಬೇವಿನಹಳ್ಳಿ ಬಸ್ ನಿಲ್ದಾಣದ ಬಳಿ ಹಲವು ಜಾನಪದ ಕಲಾತಂಡಗಳು ಪೂಜಾಕುಣಿತ ಹಾಗೂ ಪಟ ಕುಣಿತದ ದೇವರು ಹೊತ್ತುಕೊಂಡು ಕುಣಿಯುತ್ತಿದ್ದವು. ಇದನ್ನು ನೊಡಿದ ಡಿ.ಕೆ. ಶಿವಕುಮಾರ್ ಬಸ್ ಮೇಲಿಂದಲೇ ನೋಟಿನ ಕಂತೆಯನ್ನು ತೆರೆದು ಕಲಾ ತಂಡಗಳತ್ತ ಎಸೆದು ದರ್ಪ ತೋರಿದ್ದಾರೆ.

500 ಮುಖಬೆಲೆಯ ನೋಟುಗಳು;
ಇನ್ನು ಬಸ್ ಮೇಲಿಂದಲೇ ರೋಡ್ ಶೋ ಮೂಲಕ ಜನರತ್ತ ಕೈಬೀಸಿ ಮಾತನಾಡುತ್ತಾ ಸಾಗುತ್ತಿದ್ದ ವೇಳೆ ಡಿ.ಕೆ. ಶಿವಕುಮಾರ್ 500 ರೂ. ಮುಖಬೆಲೆಯ ಹಲವು ನೋಟುಗಳನ್ನು ಎರಚಿದ್ದಾರೆ. ಇನ್ನು ಜಾನಪದ ಕಲಾವಿದರಿಗೆ ಈ ಹಣ ಎರಚಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೂ, ಕಲಾವಿದರು ಪೂಜಾ ಕುಣಿತದ ದೇವರು ಹೊತ್ತುಕೊಂಡಿದ್ದು, ಇದು ಕಾಂಗ್ರೆಸ್ ಕಾರ್ಯಕರ್ತರ ಪಾಲಾಗಿದೆ ಎಂದು ಸ್ಥಳೀಯರು ಹಾಗೂ ಕಲಾತಂಡದ ಸದಸ್ಯರು ಹೇಳಿದ್ದಾರೆ. ಆದರೆ, ಕಲಾವಿದರ ಮೇಲೆ ಹಣವನ್ನು ಎರಚಿ ದರ್ಪ ತೋರಿಸಿದ ಡಿ.ಕೆ. ಶಿವಕುಮಾರ್ ಅವರ ಮೇಲೆ ಸ್ಥಳೀಯ ಮತದಾರರು ಮಾತ್ರ ಆಕ್ರೋಶ ಹೊರಹಾಕಿದ್ದಾರೆ.
ಅಂದು ರಮೇಶ್ ಕುಮಾರ್ ಅವರು ನಾಲ್ಕು ತಲೆಮಾರಿಗಾಗುವಷ್ಟು ನಾವು ಕಾಂಗ್ರೆಸ್ನಿಂದ ಪಡೆದಿದ್ದೇವೆ ಎಂದಿದ್ದರು. ಇಂದು ಅದೇ ಕಾಂಗ್ರೆಸ್ಸಿನ ಅಧ್ಯಕ್ಷ @DKShivakumar ಅವರು ಪ್ರಜಾದ್ರೋಹಿ ಯಾತ್ರೆಯಲ್ಲಿ ಹಣವನ್ನು ಎಸೆಯುತ್ತಿರುವುದನ್ನು ನೋಡಿದರೆ ಎಲ್ಲರಿಗೂ ಅರ್ಥ ಆಗುತ್ತದೆ.#ಪ್ರಜಾದ್ರೋಹಯಾತ್ರೆ pic.twitter.com/vG6NaeArES
— BJP Karnataka (@BJP4Karnataka) March 28, 2023
Karnataka Congress president DK Shivakumar, on the campaign trail in Mandya, threw money on people during a rally on Wednesday. In a video, Shivakumar was seen throwing currency notes on people part of a chariot procession near Bevinahalli.
03-04-26 07:35 am
HK News Staffer
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm