ಬ್ರೇಕಿಂಗ್ ನ್ಯೂಸ್
28-03-23 11:09 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.28 : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ನಡೆದ ದಾಳಿಗೆ ಬಿಜೆಪಿ ಒಳಗಿನ ವಿರೋಧಿ ಬಣದ ಪಿತೂರಿಯೇ ಕಾರಣ ಎಂದು ಕಾಂಗ್ರೆಸ್ ಕಟಕಿಯಾಡಿದೆ. ಯಡಿಯೂರಪ್ಪ ಸರ್ಕಾರದ ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ಧಾರಗಳಲ್ಲಿ ಅವರ ಪಾತ್ರವಿಲ್ಲ. ಆದರೂ ಸರ್ಕಾರದ ಅವಾಂತರಕ್ಕೆ ಬಿಎಸ್ವೈ ಮನೆ ಮೇಲೆ ದಾಳಿ ಆಗಿದ್ದೇಕೆ? ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ. ಯಡಿಯೂರಪ್ಪ ಅವರ ಮನೆಯ ಮೇಲಿನ ದಾಳಿಯ ಹಿಂದೆ ಬಿಜೆಪಿಯ "ಸಂತೋಷ ಕೂಟ"ದ ಕೈವಾಡ ಇರುವುದು ನಿಶ್ಚಿತ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಅಲ್ಲದೆ, ಬಂಜಾರ ಸಮುದಾಯದ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ ಇದೆಯೆಂದು ದೂರಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧವೂ ಕಾಂಗ್ರೆಸ್ ಕಿಡಿಕಾರಿದೆ. ಪ್ರತಿ ಬಾರಿ ಕಾನೂನು ಸುವ್ಯವಸ್ಥೆ ಉಲ್ಲಂಘನೆಯ ಪ್ರಕರಣಗಳು, ಗಲಭೆ, ಘರ್ಷಣೆಯ ಬೀಜ ಬಿತ್ತುವುದು ಗೃಹ ಸಚಿವರ ತವರು ಜಿಲ್ಲೆಯಲ್ಲೇ ಏಕೆ..? ತನ್ನ ತವರಿನಲ್ಲಿ, ಅದರಲ್ಲೂ ಮಾಜಿ ಸಿಎಂ ಮನೆ ಬಳಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದ ಆರಗ ಜ್ಞಾನೇಂದ್ರ ಅವರದ್ದು ಹೊಣೆಗೇಡಿತನವೋ ಅಥವಾ "ಸಂತೋಷ ಕೂಟ"ವನ್ನು ಮೆಚ್ಚಿಸುವ ಷಡ್ಯಂತ್ರವೋ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ತಿವಿದಿದೆ.
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ಎಜೆ ಸದಾಶಿವ ಸಮಿತಿ ವರದಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಂಜಾರ ಸಮುದಾಯದವರು ಶಿಕಾರಿಪುರದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಶಿಕಾರಿಪುರದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು.
'@BSYBJP ಅವರ ಮನೆ ಮೇಲಿನ ದಾಳಿಯ ಹಿಂದೆ ಬಿಜೆಪಿಯ ಯಡಿಯೂರಪ್ಪ ವಿರೋಧಿ ಬಣದ ಕೈವಾಡವಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
— Karnataka Congress (@INCKarnataka) March 28, 2023
ದಮ್ಮು ತಾಕತ್ತಿನ ಮುಖ್ಯಮಂತ್ರಿಗಳೇ,
ಒಮ್ಮೆ @CTRavi_BJP ಹಾಗೂ @blsanthosh ಅವರನ್ನು ವಿಚಾರಣೆಗೆ ಒಳಪಡಿಸಿ, ತನಿಖೆ ನಡೆಸಿ.
ಹಾಗೂ BSYರಿಗೆ ಬಿಜೆಪಿಯವರಿಂದ ಅಪಾಯವಿದೆ, ಅವರಿಗೆ ರಕ್ಷಣೆ ಹೆಚ್ಚಿಸಬೇಕು.
BS Yediyurappas home, office attacked by protesters over reservation, BJP leader conspiracy says Congress tweet.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm