ಬ್ರೇಕಿಂಗ್ ನ್ಯೂಸ್
01-04-23 07:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.1 : ಚಿಕ್ಕಮಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದ್ದು ಮೂಲ ಮತ್ತು ವಲಸಿಗ ನಾಯಕರ ಬಣಗಳು ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಕಿತ್ತಾಡಿಕೊಂಡಿವೆ. ಕೆಪಿಸಿಸಿ ಸಂಯೋಜಕರ ಮೇಲೆ ಹಲ್ಲೆ ನಡೆಸಲಾಗಿದೆ.
ಕಾರ್ಯಕರ್ತರು ತಾವು ತಾವೇ ಹೊಡೆದಾಡಿ ಪರಸ್ಪರ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದಾರೆ. ತಾಲೂಕು ಅಧ್ಯಕ್ಷ ಮಾತಿಗೆ ಮುಂದಾಗುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಆಕಾಂಕ್ಷಿಗಳ ಬೆಂಬಲಿಗರ ತಳ್ಳಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಮಧ್ಯೆ ಪ್ರವೇಶಿಸಿ ಉದ್ರಿಕ್ತ ಕಾರ್ಯಕರ್ತರನ್ನು ಹೊರಕ್ಕೆ ಕಳಿಸಿದ್ದಾರೆ. ಪರ ವಿರೋಧ ನಡುವೆಯೇ ಕಾರ್ಯಕರ್ತರು ಸಭೆಯಿಂದ ಹೊರ ನಡೆದಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಎರಡು ಬಣಗಳು ಕಿತ್ತಾಟ ನಡೆಸಿವೆ. ಟಿಕೆಟ್ ವಿಚಾರದಲ್ಲಿ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆಯಿಂದಲೂ ಸಭೆ ನಡೆದಿತ್ತು. ಬಳಿಕ ಮಾತಿಗೆ ಮಾತು ಬೆಳೆದು ಕುರ್ಚಿ ಹಿಡಿದು ಹೊಡೆದಾಟ ನಡೆಸಿದ್ದಾರೆ. ಕೆಪಿಸಿಸಿ ಸಂಯೋಜಕರಾಗಿದ್ದ ಪವನ್ ಮೇಲೆ ಹಲ್ಲೆ ನಡೆಸಲಾಗಿದೆ.
ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್ ಬಂದಿದ್ದ ಲಿಂಗಾಯತ ಮುಖಂಡ ಎಚ್.ಡಿ.ತಮ್ಮಯ್ಯ ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡೋಣ ಎನ್ನುತ್ತಿದ್ದಂತೆ ಮಾರಾಮಾರಿ ಶುರುವಾಗಿದೆ. ಇವರ ಮಾತಿನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಗರಂ ಆಗಿದ್ದಾರೆ. ಇದೇ ವೇಳೆ, ಪಕ್ಷ ಒಗ್ಗಟ್ಟಾಗಿ ಹೋಗಲಿ ಎಂದ ಮಂಜೇಗೌಡ ವಿರುದ್ಧವೂ ಕಾರ್ಯಕರ್ತರು ರೆಬಲ್ ಆಗಿದ್ದಾರೆ. ಯಾರಿಗೋ ಅಲ್ಲ... ಅಂತ ಮಂಜೇಗೌಡ ವಿರುದ್ಧ ಕಾರ್ಯಕರ್ತರು ತಿರುಗಿ ಬಿದ್ದು ಗಲಾಟೆ ನಡೆದಿದೆ. ನೋಡ ನೋಡ್ತಿದ್ದಂತೆ ಕಾಂಗ್ರೆಸ್ ಕಚೇರಿ ರಣರಂಗವಾಗಿದೆ.
#chikmagalu #congress office turns ugly after #fight over #ticket, #KPCC organiser attacked by members #BreakingNews #karnatakacongress pic.twitter.com/HpyLizhsIb
— Headline Karnataka (@hknewsonline) April 1, 2023
chikmagalu congress office turns ugly after fight over ticket, KPCC organiser attacked by members
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm