ಬ್ರೇಕಿಂಗ್ ನ್ಯೂಸ್
01-04-23 07:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.1 : ಚಿಕ್ಕಮಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದ್ದು ಮೂಲ ಮತ್ತು ವಲಸಿಗ ನಾಯಕರ ಬಣಗಳು ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಕಿತ್ತಾಡಿಕೊಂಡಿವೆ. ಕೆಪಿಸಿಸಿ ಸಂಯೋಜಕರ ಮೇಲೆ ಹಲ್ಲೆ ನಡೆಸಲಾಗಿದೆ.
ಕಾರ್ಯಕರ್ತರು ತಾವು ತಾವೇ ಹೊಡೆದಾಡಿ ಪರಸ್ಪರ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದಾರೆ. ತಾಲೂಕು ಅಧ್ಯಕ್ಷ ಮಾತಿಗೆ ಮುಂದಾಗುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಆಕಾಂಕ್ಷಿಗಳ ಬೆಂಬಲಿಗರ ತಳ್ಳಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಮಧ್ಯೆ ಪ್ರವೇಶಿಸಿ ಉದ್ರಿಕ್ತ ಕಾರ್ಯಕರ್ತರನ್ನು ಹೊರಕ್ಕೆ ಕಳಿಸಿದ್ದಾರೆ. ಪರ ವಿರೋಧ ನಡುವೆಯೇ ಕಾರ್ಯಕರ್ತರು ಸಭೆಯಿಂದ ಹೊರ ನಡೆದಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಎರಡು ಬಣಗಳು ಕಿತ್ತಾಟ ನಡೆಸಿವೆ. ಟಿಕೆಟ್ ವಿಚಾರದಲ್ಲಿ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆಯಿಂದಲೂ ಸಭೆ ನಡೆದಿತ್ತು. ಬಳಿಕ ಮಾತಿಗೆ ಮಾತು ಬೆಳೆದು ಕುರ್ಚಿ ಹಿಡಿದು ಹೊಡೆದಾಟ ನಡೆಸಿದ್ದಾರೆ. ಕೆಪಿಸಿಸಿ ಸಂಯೋಜಕರಾಗಿದ್ದ ಪವನ್ ಮೇಲೆ ಹಲ್ಲೆ ನಡೆಸಲಾಗಿದೆ.
ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್ ಬಂದಿದ್ದ ಲಿಂಗಾಯತ ಮುಖಂಡ ಎಚ್.ಡಿ.ತಮ್ಮಯ್ಯ ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡೋಣ ಎನ್ನುತ್ತಿದ್ದಂತೆ ಮಾರಾಮಾರಿ ಶುರುವಾಗಿದೆ. ಇವರ ಮಾತಿನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಗರಂ ಆಗಿದ್ದಾರೆ. ಇದೇ ವೇಳೆ, ಪಕ್ಷ ಒಗ್ಗಟ್ಟಾಗಿ ಹೋಗಲಿ ಎಂದ ಮಂಜೇಗೌಡ ವಿರುದ್ಧವೂ ಕಾರ್ಯಕರ್ತರು ರೆಬಲ್ ಆಗಿದ್ದಾರೆ. ಯಾರಿಗೋ ಅಲ್ಲ... ಅಂತ ಮಂಜೇಗೌಡ ವಿರುದ್ಧ ಕಾರ್ಯಕರ್ತರು ತಿರುಗಿ ಬಿದ್ದು ಗಲಾಟೆ ನಡೆದಿದೆ. ನೋಡ ನೋಡ್ತಿದ್ದಂತೆ ಕಾಂಗ್ರೆಸ್ ಕಚೇರಿ ರಣರಂಗವಾಗಿದೆ.
#chikmagalu #congress office turns ugly after #fight over #ticket, #KPCC organiser attacked by members #BreakingNews #karnatakacongress pic.twitter.com/HpyLizhsIb
— Headline Karnataka (@hknewsonline) April 1, 2023
chikmagalu congress office turns ugly after fight over ticket, KPCC organiser attacked by members
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm