ಬ್ರೇಕಿಂಗ್ ನ್ಯೂಸ್
01-04-23 07:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.1 : ಚಿಕ್ಕಮಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದ್ದು ಮೂಲ ಮತ್ತು ವಲಸಿಗ ನಾಯಕರ ಬಣಗಳು ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಕಿತ್ತಾಡಿಕೊಂಡಿವೆ. ಕೆಪಿಸಿಸಿ ಸಂಯೋಜಕರ ಮೇಲೆ ಹಲ್ಲೆ ನಡೆಸಲಾಗಿದೆ.
ಕಾರ್ಯಕರ್ತರು ತಾವು ತಾವೇ ಹೊಡೆದಾಡಿ ಪರಸ್ಪರ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದಾರೆ. ತಾಲೂಕು ಅಧ್ಯಕ್ಷ ಮಾತಿಗೆ ಮುಂದಾಗುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಆಕಾಂಕ್ಷಿಗಳ ಬೆಂಬಲಿಗರ ತಳ್ಳಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಮಧ್ಯೆ ಪ್ರವೇಶಿಸಿ ಉದ್ರಿಕ್ತ ಕಾರ್ಯಕರ್ತರನ್ನು ಹೊರಕ್ಕೆ ಕಳಿಸಿದ್ದಾರೆ. ಪರ ವಿರೋಧ ನಡುವೆಯೇ ಕಾರ್ಯಕರ್ತರು ಸಭೆಯಿಂದ ಹೊರ ನಡೆದಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಎರಡು ಬಣಗಳು ಕಿತ್ತಾಟ ನಡೆಸಿವೆ. ಟಿಕೆಟ್ ವಿಚಾರದಲ್ಲಿ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆಯಿಂದಲೂ ಸಭೆ ನಡೆದಿತ್ತು. ಬಳಿಕ ಮಾತಿಗೆ ಮಾತು ಬೆಳೆದು ಕುರ್ಚಿ ಹಿಡಿದು ಹೊಡೆದಾಟ ನಡೆಸಿದ್ದಾರೆ. ಕೆಪಿಸಿಸಿ ಸಂಯೋಜಕರಾಗಿದ್ದ ಪವನ್ ಮೇಲೆ ಹಲ್ಲೆ ನಡೆಸಲಾಗಿದೆ.
ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್ ಬಂದಿದ್ದ ಲಿಂಗಾಯತ ಮುಖಂಡ ಎಚ್.ಡಿ.ತಮ್ಮಯ್ಯ ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡೋಣ ಎನ್ನುತ್ತಿದ್ದಂತೆ ಮಾರಾಮಾರಿ ಶುರುವಾಗಿದೆ. ಇವರ ಮಾತಿನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಗರಂ ಆಗಿದ್ದಾರೆ. ಇದೇ ವೇಳೆ, ಪಕ್ಷ ಒಗ್ಗಟ್ಟಾಗಿ ಹೋಗಲಿ ಎಂದ ಮಂಜೇಗೌಡ ವಿರುದ್ಧವೂ ಕಾರ್ಯಕರ್ತರು ರೆಬಲ್ ಆಗಿದ್ದಾರೆ. ಯಾರಿಗೋ ಅಲ್ಲ... ಅಂತ ಮಂಜೇಗೌಡ ವಿರುದ್ಧ ಕಾರ್ಯಕರ್ತರು ತಿರುಗಿ ಬಿದ್ದು ಗಲಾಟೆ ನಡೆದಿದೆ. ನೋಡ ನೋಡ್ತಿದ್ದಂತೆ ಕಾಂಗ್ರೆಸ್ ಕಚೇರಿ ರಣರಂಗವಾಗಿದೆ.
#chikmagalu #congress office turns ugly after #fight over #ticket, #KPCC organiser attacked by members #BreakingNews #karnatakacongress pic.twitter.com/HpyLizhsIb
— Headline Karnataka (@hknewsonline) April 1, 2023
chikmagalu congress office turns ugly after fight over ticket, KPCC organiser attacked by members
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm