ಬ್ರೇಕಿಂಗ್ ನ್ಯೂಸ್
02-04-23 06:36 pm HK News Desk ಕರ್ನಾಟಕ
ಹಾಸನ, ಏ 02: ಜಾತ್ಯಾತೀತ ಜನತಾದಳದ ನಾಯಕ ಹೆಚ್ ಡಿ ರೇವಣ್ಣ ಅವರ ಆರೋಪಗಳಿಂದ ಬೇಸತ್ತು ಹಾಸನದ ಡಿವೈಎಸ್ಪಿ ಉದಯ್ ಭಾಸ್ಕರ್ ಅವರು ವರ್ಗಾವಣೆ ಮಾಡುವಂತೆ ತಾವೇ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಅವರ ವಿರುದ್ಧ ಕ್ರಮಕ್ಕೆ ಹೆಚ್ಡಿ ರೇವಣ್ಣ ಒತ್ತಾಯಿಸಿದ್ದರು. ಇದೀಗ ಡಿವೈಎಸ್ಪಿ ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಸ್ವಯಂ ವರ್ಗಾವಣೆಗೆ ಕೋರಿದ್ದಾರೆ.
ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ ಒತ್ತಾಯಗಳಿಗೆ ನಾನು ಮಣಿಯದ ಕಾರಣ ನನ್ನ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಉದಯ್ ಭಾಸ್ಕರ್ ಪರೋಕ್ಷವಾಗಿ ಮಾಜಿ ಸಚಿವ ರೇವಣ್ಣ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ನನ್ನ ಮೇಲೆ ಆರೋಪ ಮಾಡಿ ನನ್ನ ಮೇಲಾಧಿಕಾರಿಗಳಿಗೆ ಮಾನಸಿಕ ಒತ್ತಡಗಳನ್ನು ನೀಡುತ್ತಿದ್ದಾರೆ. ರಾಜಕಾರಣಿಗಳು ಈ ಚುನಾವಣಾ ಸಂದರ್ಭದಲ್ಲಿ ನನಗೆ ಸುಗಮವಾಗಿ ಕೆಲಸ ಮಾಡಲು ಅಡ್ಡಿಪಡಿಸಿ ಗೊಂದಲ ಸೃಷ್ಟಿಪಡಿಸುವುದು ಖಚಿತ. ಇದರಿಂದ ಮೇಲಾಧಿಕಾರಿಗಳಿಗೂ ಇರುಸುಮುರುಸು ಉಂಟಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೀಗ ಬೇಸರದಿಂದಲೇ ತಮ್ಮ ವರ್ಗಾವಣೆಗೆ ಬೇಡಿಕೆ ಇಟ್ಟಿರುವ ಉದಯ್ ಭಾಸ್ಕರ್, ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ನನ್ನನ್ನು ಹಾಸನ ಜಿಲ್ಲೆಯಿಂದ ತಮಗೆ ಸರಿ ಎನಿಸಿದ ಸ್ಥಳಕ್ಕೆ ತಾತ್ಕಾಲಿಕ ವರ್ಗಾವಣೆಗೆ ಕೋರುತ್ತೇನೆ ಎಂದು ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಉದಯ್ ಭಾಸ್ಕರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಎಚ್.ಡಿ.ರೇವಣ್ಣ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಉದಯಭಾಸ್ಕರ್ ಅವರು ಆಯಾ ಪೊಲೀಸ್ ಠಾಣೆಗಳ ರೌಡಿ ಶೀಟರ್ಗಳೊಂದಿಗೆ ನಂಟು ಹೊಂದಿದ್ದು, ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಎಚ್ಡಿ ರೇವಣ್ಣ ಆರೋಪಿಸಿದ್ದರು.
Hassan DySP Uday Bhaskar frustrated with Revanna statements, requests higher officers to transfer
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm