ಬ್ರೇಕಿಂಗ್ ನ್ಯೂಸ್
02-04-23 06:36 pm HK News Desk ಕರ್ನಾಟಕ
ಹಾಸನ, ಏ 02: ಜಾತ್ಯಾತೀತ ಜನತಾದಳದ ನಾಯಕ ಹೆಚ್ ಡಿ ರೇವಣ್ಣ ಅವರ ಆರೋಪಗಳಿಂದ ಬೇಸತ್ತು ಹಾಸನದ ಡಿವೈಎಸ್ಪಿ ಉದಯ್ ಭಾಸ್ಕರ್ ಅವರು ವರ್ಗಾವಣೆ ಮಾಡುವಂತೆ ತಾವೇ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಅವರ ವಿರುದ್ಧ ಕ್ರಮಕ್ಕೆ ಹೆಚ್ಡಿ ರೇವಣ್ಣ ಒತ್ತಾಯಿಸಿದ್ದರು. ಇದೀಗ ಡಿವೈಎಸ್ಪಿ ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಸ್ವಯಂ ವರ್ಗಾವಣೆಗೆ ಕೋರಿದ್ದಾರೆ.
ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ ಒತ್ತಾಯಗಳಿಗೆ ನಾನು ಮಣಿಯದ ಕಾರಣ ನನ್ನ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಉದಯ್ ಭಾಸ್ಕರ್ ಪರೋಕ್ಷವಾಗಿ ಮಾಜಿ ಸಚಿವ ರೇವಣ್ಣ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ನನ್ನ ಮೇಲೆ ಆರೋಪ ಮಾಡಿ ನನ್ನ ಮೇಲಾಧಿಕಾರಿಗಳಿಗೆ ಮಾನಸಿಕ ಒತ್ತಡಗಳನ್ನು ನೀಡುತ್ತಿದ್ದಾರೆ. ರಾಜಕಾರಣಿಗಳು ಈ ಚುನಾವಣಾ ಸಂದರ್ಭದಲ್ಲಿ ನನಗೆ ಸುಗಮವಾಗಿ ಕೆಲಸ ಮಾಡಲು ಅಡ್ಡಿಪಡಿಸಿ ಗೊಂದಲ ಸೃಷ್ಟಿಪಡಿಸುವುದು ಖಚಿತ. ಇದರಿಂದ ಮೇಲಾಧಿಕಾರಿಗಳಿಗೂ ಇರುಸುಮುರುಸು ಉಂಟಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೀಗ ಬೇಸರದಿಂದಲೇ ತಮ್ಮ ವರ್ಗಾವಣೆಗೆ ಬೇಡಿಕೆ ಇಟ್ಟಿರುವ ಉದಯ್ ಭಾಸ್ಕರ್, ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ನನ್ನನ್ನು ಹಾಸನ ಜಿಲ್ಲೆಯಿಂದ ತಮಗೆ ಸರಿ ಎನಿಸಿದ ಸ್ಥಳಕ್ಕೆ ತಾತ್ಕಾಲಿಕ ವರ್ಗಾವಣೆಗೆ ಕೋರುತ್ತೇನೆ ಎಂದು ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಉದಯ್ ಭಾಸ್ಕರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಎಚ್.ಡಿ.ರೇವಣ್ಣ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಉದಯಭಾಸ್ಕರ್ ಅವರು ಆಯಾ ಪೊಲೀಸ್ ಠಾಣೆಗಳ ರೌಡಿ ಶೀಟರ್ಗಳೊಂದಿಗೆ ನಂಟು ಹೊಂದಿದ್ದು, ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಎಚ್ಡಿ ರೇವಣ್ಣ ಆರೋಪಿಸಿದ್ದರು.
Hassan DySP Uday Bhaskar frustrated with Revanna statements, requests higher officers to transfer
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm