ಬ್ರೇಕಿಂಗ್ ನ್ಯೂಸ್
02-04-23 06:36 pm HK News Desk ಕರ್ನಾಟಕ
ಹಾಸನ, ಏ 02: ಜಾತ್ಯಾತೀತ ಜನತಾದಳದ ನಾಯಕ ಹೆಚ್ ಡಿ ರೇವಣ್ಣ ಅವರ ಆರೋಪಗಳಿಂದ ಬೇಸತ್ತು ಹಾಸನದ ಡಿವೈಎಸ್ಪಿ ಉದಯ್ ಭಾಸ್ಕರ್ ಅವರು ವರ್ಗಾವಣೆ ಮಾಡುವಂತೆ ತಾವೇ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಅವರ ವಿರುದ್ಧ ಕ್ರಮಕ್ಕೆ ಹೆಚ್ಡಿ ರೇವಣ್ಣ ಒತ್ತಾಯಿಸಿದ್ದರು. ಇದೀಗ ಡಿವೈಎಸ್ಪಿ ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಸ್ವಯಂ ವರ್ಗಾವಣೆಗೆ ಕೋರಿದ್ದಾರೆ.
ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ ಒತ್ತಾಯಗಳಿಗೆ ನಾನು ಮಣಿಯದ ಕಾರಣ ನನ್ನ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಉದಯ್ ಭಾಸ್ಕರ್ ಪರೋಕ್ಷವಾಗಿ ಮಾಜಿ ಸಚಿವ ರೇವಣ್ಣ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ನನ್ನ ಮೇಲೆ ಆರೋಪ ಮಾಡಿ ನನ್ನ ಮೇಲಾಧಿಕಾರಿಗಳಿಗೆ ಮಾನಸಿಕ ಒತ್ತಡಗಳನ್ನು ನೀಡುತ್ತಿದ್ದಾರೆ. ರಾಜಕಾರಣಿಗಳು ಈ ಚುನಾವಣಾ ಸಂದರ್ಭದಲ್ಲಿ ನನಗೆ ಸುಗಮವಾಗಿ ಕೆಲಸ ಮಾಡಲು ಅಡ್ಡಿಪಡಿಸಿ ಗೊಂದಲ ಸೃಷ್ಟಿಪಡಿಸುವುದು ಖಚಿತ. ಇದರಿಂದ ಮೇಲಾಧಿಕಾರಿಗಳಿಗೂ ಇರುಸುಮುರುಸು ಉಂಟಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೀಗ ಬೇಸರದಿಂದಲೇ ತಮ್ಮ ವರ್ಗಾವಣೆಗೆ ಬೇಡಿಕೆ ಇಟ್ಟಿರುವ ಉದಯ್ ಭಾಸ್ಕರ್, ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ನನ್ನನ್ನು ಹಾಸನ ಜಿಲ್ಲೆಯಿಂದ ತಮಗೆ ಸರಿ ಎನಿಸಿದ ಸ್ಥಳಕ್ಕೆ ತಾತ್ಕಾಲಿಕ ವರ್ಗಾವಣೆಗೆ ಕೋರುತ್ತೇನೆ ಎಂದು ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಉದಯ್ ಭಾಸ್ಕರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಎಚ್.ಡಿ.ರೇವಣ್ಣ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಉದಯಭಾಸ್ಕರ್ ಅವರು ಆಯಾ ಪೊಲೀಸ್ ಠಾಣೆಗಳ ರೌಡಿ ಶೀಟರ್ಗಳೊಂದಿಗೆ ನಂಟು ಹೊಂದಿದ್ದು, ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಎಚ್ಡಿ ರೇವಣ್ಣ ಆರೋಪಿಸಿದ್ದರು.
Hassan DySP Uday Bhaskar frustrated with Revanna statements, requests higher officers to transfer
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm