ಬ್ರೇಕಿಂಗ್ ನ್ಯೂಸ್
02-04-23 06:36 pm HK News Desk ಕರ್ನಾಟಕ
ಹಾಸನ, ಏ 02: ಜಾತ್ಯಾತೀತ ಜನತಾದಳದ ನಾಯಕ ಹೆಚ್ ಡಿ ರೇವಣ್ಣ ಅವರ ಆರೋಪಗಳಿಂದ ಬೇಸತ್ತು ಹಾಸನದ ಡಿವೈಎಸ್ಪಿ ಉದಯ್ ಭಾಸ್ಕರ್ ಅವರು ವರ್ಗಾವಣೆ ಮಾಡುವಂತೆ ತಾವೇ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಅವರ ವಿರುದ್ಧ ಕ್ರಮಕ್ಕೆ ಹೆಚ್ಡಿ ರೇವಣ್ಣ ಒತ್ತಾಯಿಸಿದ್ದರು. ಇದೀಗ ಡಿವೈಎಸ್ಪಿ ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಸ್ವಯಂ ವರ್ಗಾವಣೆಗೆ ಕೋರಿದ್ದಾರೆ.
ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ ಒತ್ತಾಯಗಳಿಗೆ ನಾನು ಮಣಿಯದ ಕಾರಣ ನನ್ನ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಉದಯ್ ಭಾಸ್ಕರ್ ಪರೋಕ್ಷವಾಗಿ ಮಾಜಿ ಸಚಿವ ರೇವಣ್ಣ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ನನ್ನ ಮೇಲೆ ಆರೋಪ ಮಾಡಿ ನನ್ನ ಮೇಲಾಧಿಕಾರಿಗಳಿಗೆ ಮಾನಸಿಕ ಒತ್ತಡಗಳನ್ನು ನೀಡುತ್ತಿದ್ದಾರೆ. ರಾಜಕಾರಣಿಗಳು ಈ ಚುನಾವಣಾ ಸಂದರ್ಭದಲ್ಲಿ ನನಗೆ ಸುಗಮವಾಗಿ ಕೆಲಸ ಮಾಡಲು ಅಡ್ಡಿಪಡಿಸಿ ಗೊಂದಲ ಸೃಷ್ಟಿಪಡಿಸುವುದು ಖಚಿತ. ಇದರಿಂದ ಮೇಲಾಧಿಕಾರಿಗಳಿಗೂ ಇರುಸುಮುರುಸು ಉಂಟಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೀಗ ಬೇಸರದಿಂದಲೇ ತಮ್ಮ ವರ್ಗಾವಣೆಗೆ ಬೇಡಿಕೆ ಇಟ್ಟಿರುವ ಉದಯ್ ಭಾಸ್ಕರ್, ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ನನ್ನನ್ನು ಹಾಸನ ಜಿಲ್ಲೆಯಿಂದ ತಮಗೆ ಸರಿ ಎನಿಸಿದ ಸ್ಥಳಕ್ಕೆ ತಾತ್ಕಾಲಿಕ ವರ್ಗಾವಣೆಗೆ ಕೋರುತ್ತೇನೆ ಎಂದು ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಉದಯ್ ಭಾಸ್ಕರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಎಚ್.ಡಿ.ರೇವಣ್ಣ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಉದಯಭಾಸ್ಕರ್ ಅವರು ಆಯಾ ಪೊಲೀಸ್ ಠಾಣೆಗಳ ರೌಡಿ ಶೀಟರ್ಗಳೊಂದಿಗೆ ನಂಟು ಹೊಂದಿದ್ದು, ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಎಚ್ಡಿ ರೇವಣ್ಣ ಆರೋಪಿಸಿದ್ದರು.
Hassan DySP Uday Bhaskar frustrated with Revanna statements, requests higher officers to transfer
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am