ಬ್ರೇಕಿಂಗ್ ನ್ಯೂಸ್
04-04-23 11:02 pm HK News Desk ಕರ್ನಾಟಕ
ಹಾಸನ, ಎ.4 : ಅತ್ತ ಕೋಲು ಮುರಿಯಲೂ ಇಲ್ಲ, ಇತ್ತ ಹಾವು ಸಾಯಲೂ ಇಲ್ಲ. ಹೌದು.. ಇತಿಹಾಸ ಪ್ರಸಿದ್ಧ ಬೇಲೂರು ಚೆನ್ನಕೇಶವ ಸನ್ನಿಧಿಯಲ್ಲಿ ರಥೋತ್ಸವವೂ ನಡೀತು. ಸಂಪ್ರದಾಯಕ್ಕೆ ತಕ್ಕಂತೆ ಮುಸ್ಲಿಮರ ಪ್ರಾರ್ಥನೆಯೂ ನೆರವೇರಿತು. ಇವರು ಗೆಲ್ಲಲಿಲ್ಲ, ಅವರು ಸೋಲಲಿಲ್ಲ ಅನ್ನೋ ಹಾಗೆ.
ಹಿಂದು ಸಂಘಟನೆಗಳ ಬೆದರಿಕೆಯ ಕಾರಣ ರಥೋತ್ಸವ ನಡೆಯುತ್ತಾ ಅಥವಾ ಗಲಾಟೆ ತಲೆದೋರುತ್ತಾ ಎನ್ನುವ ಆತಂಕ ಎದುರಾಗಿತ್ತು. ಇದಕ್ಕಾಗಿ ಅರೆ ಮಿಲಿಟರಿ ಪಡೆಯ ಬಂದೋಬಸ್ತ್ ಮಾಡಲಾಗಿತ್ತು. ರಥೋತ್ಸವ ಸಂದರ್ಭದಲ್ಲೇ ಖುರಾನ್ ಪಠಣ ಮಾಡಲು ಮುಸ್ಲಿಂ ಮುಖಂಡರೂ ಆಗಮಿಸಿದ್ದರು. ಹಿಂದಿನಿಂದ ನಡೆದುಬಂದ ಪದ್ಧತಿಯೆಂದು ಜಿಲ್ಲಾಡಳಿತವೂ ಒಪ್ಪಿಗೆ ಸೂಚಿಸಿತ್ತು. ಆದರೆ ದೇವಸ್ಥಾನದ ಮುಂದೆ ಮುಸ್ಲಿಮರ ಪ್ರಾರ್ಥನೆ ನೆರವೇರಿದೆ, ಜೊತೆಗೆ ರಥೋತ್ಸವವೂ ಜರಗಿದೆ.

ಚೆನ್ನಕೇಶವ ರಥೋತ್ಸವದಲ್ಲಿ 'ಕುರಾನ್ ಪಠಣ' ಮಾಡಬಾರದು ಎಂದು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಪ್ರತಿ ವರ್ಷದಂತೆ ಕುರಾನ್ ಪಠಣ ಮಾಡಲು ಬಂದಿದ್ದ, ದೊಡ್ಡ ಮೇದೂರು ಗ್ರಾಮದ ಸೈಯದ್ ಸಜಾದ್ ಭಾಷಾ ಖಾದ್ರಿ ಈ ಬಾರಿ ಜಿಲ್ಲಾಧಿಕಾರಿ ಸೂಚನೆಯಂತೆ ದೇವಸ್ಥಾನದ ಮುಂಭಾಗದ ಮೆಟ್ಟಿಲಿನ ಬಳಿ ನಿಂತು ಪ್ರಾರ್ಥನೆ ಸಲ್ಲಿಸಿದರು. ಆದರೆ ಹಿಂದು ಸಂಘಟನೆಗಳ ಕಾರ್ಯಕರ್ತರು ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಹೀಗಾಗಿ ಇಸ್ಲಾಂ ಧರ್ಮದ ರೀತಿಯಲ್ಲಿ ಶ್ಲೋಕ ಹೇಳಿ ನಮಸ್ಕರಿಸಿ ಸಂಕ್ಷಿಪ್ತವಾಗಿ ಮುಸ್ಲಿಂ ಮುಖಂಡರು ಪ್ರಾರ್ಥನೆ ಮುಗಿಸಿದ್ದಾರೆ, ಈ ಹಿಂದಿನಂತೆ ಖುರಾನ್ ಪಠಣ ಮಾಡಲು ಸಾಧ್ಯವಾಗಿಲ್ಲ.
ದೊಡ್ಡ ಮೇದೂರಿನ ಖಾಜಿ ಸಾಹೇಬರು ಶ್ಲೋಕ ಹೇಳಲು ಮುಂದಾದ ವೇಳೆ ವಿವಿಧ ಹಿಂದು ಪರ ಸಂಘಟನೆಗಳ ಮುಖಂಡರು 'ಜೈ ಶ್ರೀರಾಮ್... ನಾವೆಲ್ಲ ಹಿಂದೂ, ನಾವೆಲ್ಲ ಒಂದು' ಎಂಬ ಘೋಷಣೆಗಳನ್ನು ಕೂಗಿದರು. ಗೊಂದಲದ ವಾತಾವರಣ ನಿರ್ಮಾಣ ಆದರೂ, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಶ್ಲೋಕ ಹೇಳುವುದಕ್ಕೆ ಅವಕಾಶ ನೀಡಿದ ಜಿಲ್ಲಾಡಳಿತದ ವಿರುದ್ಧ ಹಿಂದೂ ಸಂಘಟನೆಗಳು ಧಿಕ್ಕಾರ ಕೂಗುವ ಮೂಲಕ ಪ್ರತಿಭಟನೆ ನಡೆಸಿದ್ದೂ ಆಯ್ತು.
ಈ ಎಲ್ಲದರ ಮಧ್ಯೆ ಬೇಲೂರು ಚೆನ್ನಕೇಶವ ರಥೋತ್ಸವ ಹೊರಗಡೆ ವಿಜೃಂಭಣೆಯಿಂದ ನಡೆದಿದೆ. ರಥೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗಿಯಾದರು. ಒಳಗಡೆ ಗೊಂದಲ ಇದ್ದರೂ, ಹೊರಗಡೆ ಎಲ್ಲವೂ ಸಾಂಗವಾಗಿ ನಡೆಯಿತು.
Due to threats from Hindu organisations, there were apprehensions whether the rathotsava would take place or there would be a ruckus. A paramilitary force was deployed for this purpose. Muslim leaders had also come to recite the Quran during the rathotsava. The district administration had also accepted it as a practice from the past. But in front of the temple, muslim prayers were offered and a rathotsava was also held.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm