ಬ್ರೇಕಿಂಗ್ ನ್ಯೂಸ್
05-04-23 11:43 am HK News Desk ಕರ್ನಾಟಕ
ಮೂಡುಬಿದ್ರೆ, ಎ.5 : ಕೃಷಿ ತಜ್ಞ, ‘ಕೃಷಿ ಋಷಿ’ ಎಂದೇ ಗುರುತಿಸಿಕೊಂಡಿದ್ದ ಮೂಡುಬಿದಿರೆ ಬನ್ನಡ್ಕದ ಸೋನ್ಸ್ ಫಾರ್ಮ್ ಸ್ಥಾಪಕ, ಪ್ರಗತಿಪರ ಕೃಷಿಕ ಡಾ.ಎಲ್.ಸಿ ಸೋನ್ಸ್(89) ಅಲ್ಪಕಾಲದ ಅನಾರೋಗ್ಯದ ಬಳಿಕ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.
ಡಾ.ಎಲ್.ಸಿ.ಸೋನ್ಸ್ ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಹಾಗೂ ತನ್ನೊಂದಿಗೆ ಕೃಷಿಯಲ್ಲಿ ತೊಡಗಿಸಿಕೊಂಡ ಸಹೋದರ ಐ.ವಿ. ಸೋನ್ಸ್ ಅವರನ್ನು ಅಗಲಿದ್ದಾರೆ.
1934 ಎಪ್ರಿಲ್ 4ರಂದು ಜನಿಸಿದ್ದ ಡಾ.ಲಿವಿಂಗ್ ಸ್ಟನ್ ಚಂದ್ರಮೋಹನ ಸೋನ್ಸ್ ಇದೇ ಎ.4ರ ಮಂಗಳವಾರವಷ್ಟೇ 89 ವರ್ಷ ತುಂಬಿ 90ಕ್ಕೆ ಕಾಲಿರಿಸಿದ್ದರು. ಡಾ.ಎಲ್.ಸಿ ಸೋನ್ಸ್ ತಮ್ಮ ಜೀವನವನ್ನು ಕೃಷಿಗಾಗಿ ಮುಡಿಪಾಗಿಟ್ಟವರು. ಕೃಷಿ ಕ್ಷೇತ್ರದಲ್ಲಿ ಅಸಾಮಾನ್ಯ ಸಾಧನೆ ಮಾಡಿರುವ ಸೋನ್ಸ್ ಅವರು ಅನಾನಸು ಕೃಷಿ, ಬಿದಿರಿನ ವಿವಿಧ ಪ್ರಭೇದಗಳು, ದೇಶ -ವಿದೇಶಗಳ ಹಣ್ಣು- ತರಕಾರಿ ಪ್ರಭೇದಗಳನ್ನು ಮೂಡುಬಿದಿರೆ ಸಮೀಪದ ಬನ್ನಡ್ಕದಲ್ಲಿ ಬೆಳೆಸಿ, ಅದರಿಂದ ಲಾಭ ಗಳಿಸಿದ್ದರು. ಜಲ ತಜ್ಞರಾಗಿಯೂ ವಿಶೇಷ ಪರಿಣಿತಿಯನ್ನು ಹೊಂದಿದ್ದರು.
ಆಧುನಿಕ ಕೃಷಿಯಿಂದ ಹಣ್ಣು ಹಂಪಲು ಬೆಳೆಯಬಹುದು, ಲಾಭ ಮಾಡಿಕೊಳ್ಳಬಹುದು ಎಂಬುದನ್ನು ಸೋನ್ಸ್ ಅವರು ನಿರೂಪಿಸಿದ್ದರು. ಇದರ ಜೊತೆಗೆ ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಸೋನ್ಸ್ ಅವರು ಹಲವಾರು ಸಂಘ ಸಂಸ್ಥೆಗಳ ಸಕ್ರಿಯ ಪದಾಧಿಕಾರಿ. ಅಮೆರಿಕನ್ ಸೊಸೈಟಿ ಆಫ್ ಡೌಸರ್ ಸದಸ್ಯ, ಬ್ರಿಟಿಷ್ ಸೊಸೈಟಿ ಆಫ್ ಡೌಸರ್ ಅಜೀವ ಸದಸ್ಯರೂ ಆಗಿದ್ದರು.
ಕೃಷಿ ಮತ್ತು ಮಾನವನ ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಆಲ್ಫ್ರೆಡ್ ಸೋನ್ಸ್ ಫೌಂಡೇಶನ್ ಎಂಬ ಸಂಸ್ಥೆ ಸ್ಥಾಪಿಸಿದ್ದರು. ಬೆಂಗಳೂರು ಕೃಷಿ ವಿವಿಯಿಂದ ಉತ್ತಮ ತೋಟಗಾರಿಕಾ ಸಾಧಕ ಪ್ರಶಸ್ತಿ, ಅಮೆರಿಕದ ಮೊಟಾನಾ ವಿವಿಯಿಂದ ವಿಶೇಷ ಹಳೆ ವಿದ್ಯಾರ್ಥಿ ಪ್ರಶಸ್ತಿ ಪಡೆದಿದ್ದು, ಅಮೇರಿಕದ ಹಳೆ ವಿದ್ಯಾರ್ಥಿಗಳನ್ನು ಹೊರತು ಪಡಿಸಿ, ಅನ್ಯ ದೇಶದಿಂದ ಪ್ರಶಸ್ತಿ ಪಡೆದ ಮೊದಲ ಭಾರತೀಯ ವ್ಯಕ್ತಿ ಡಾ. ಎಲ್.ಸಿ . ಸೋನ್ಸ್ ಆಗಿದ್ದರು.
Internationally renowned agricultural scientist Dr Livingston Chandramohan (L C) Soans, known for ‘Soans Farm’, passed away on Wednesday April 5. He was 89. Born in 1934, Dr Soans had his basic schooling at Mission School, Jain High School and college education at St Aloysius College Mangaluru and Christian College Madras.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 10:46 pm
Mangalore Correspondent
Mines, Krishnaveni Mangalore, Dinesh gundrao;...
08-02-25 01:08 pm
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
08-02-25 10:16 pm
Bangalore Correspondent
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am