ಬ್ರೇಕಿಂಗ್ ನ್ಯೂಸ್
05-04-23 02:04 pm Bangalore Correspondent ಕರ್ನಾಟಕ
ಬೆಂಗಳೂರು, ಎ.5: ಖ್ಯಾತ ಚಿತ್ರನಟ ಸುದೀಪ್ ಬಿಜೆಪಿ ಸೇರುತ್ತಾರೆಂಬ ವದಂತಿಗೆ ಸ್ವತಃ ಅವರೇ ತೆರೆ ಎಳೆದಿದ್ದಾರೆ. ತಾನು ಯಾವುದೇ ಪಕ್ಷ ಸೇರುವುದಿಲ್ಲ. ಜೊತೆಗೆ, ಯಾವುದೇ ಕಡೆ ಸ್ಪರ್ಧೆಯನ್ನೂ ಮಾಡೋದಿಲ್ಲ ಎಂದು ಹೇಳಿದ್ದಾರೆ.
ನಟ ಸುದೀಪ್ ಜೊತೆಗೆ ಮುಖ್ಯಮಂತ್ರಿ ಬೊಮ್ಮಾಯಿ ಜಂಟಿ ಸುದ್ದಿಗೋಷ್ಠಿ ನಡೆಸುತ್ತಾರೆ, ಅಧಿಕೃತವಾಗಿ ಬಿಜೆಪಿಗೆ ಸೇರುತ್ತಾರೆಂದು ಬೆಳಗ್ಗಿನಿಂದಲೇ ಸುದ್ದಿ ಚರ್ಚೆಗೆ ಗ್ರಾಸವಾಗಿತ್ತು. ಈ ನಡುವೆ, ನಟ ಪ್ರಕಾಶ್ ರೈ ಬಿಜೆಪಿ ಸೋಲುವ ಭಯದಲ್ಲಿ ಸುದೀಪ್ ಅವರನ್ನು ಕರೆಸಿಕೊಳ್ಳುತ್ತಿದೆ. ಆದರೆ ಸುದೀಪ್ ಅವರು ತಮ್ಮನ್ನು ಮಾರಿಕೊಳ್ಳಲ್ಲ ಎಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದರು. ಇದಲ್ಲದೆ, ಸುದೀಪ್ ಅವರಿಗೆ ಬೆದರಿಕೆ ಒಡ್ಡಲಾಗಿದೆ ಎನ್ನುವ ಸುದ್ದಿಗಳೂ ಬಂದಿದ್ದವು. ಆದರೆ, ಆ ಬೆದರಿಕೆ ಪತ್ರ ವಾರದ ಮೊದಲೇ ಬಂದಿದೆ ಎನ್ನಲಾಗುತ್ತಿದ್ದು, ಆ ಬಗ್ಗೆ ಪೊಲೀಸ್ ದೂರು ಕೂಡ ದಾಖಲಾಗಿದೆಯಂತೆ.
ಈ ನಡುವೆ, ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ ಸುದೀಪ್, ನಾನು ಯಾವುದೇ ಪಕ್ಷ ಸೇರ್ಪಡೆ ಆಗುವುದಿಲ್ಲ ಎಂದಿದ್ದಾರೆ. ಅಲ್ಲದೆ, ನನಗೆ ಕೆಲವರು ತುಂಬ ಆಪ್ತರಿದ್ದಾರೆ, ನಾನು ಸಣ್ಣಂದಿನಿಂದ ಇಷ್ಟು ಎತ್ತರಕ್ಕೆ ಕಾರಣವಾದ ಕೆಲವರಿದ್ದಾರೆ. ಅವರನ್ನು ಬಿಟ್ಟಾಕಲಾಗದು. ನಾನು ಆ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಸ್ಪಷ್ಟನೆ ಕೊಡುತ್ತೇನೆ. ಆದರೆ ಒಂದಂತೂ ಸ್ಪಷ್ಟ. ನಾನು ಚುನಾವಣೆ ಸ್ಪರ್ಧೆ ಮಾಡಲ್ಲ. ಪಕ್ಷ ಸೇರ್ಪಡೆಯೂ ಮಾಡಲ್ಲ ಎಂದಿದ್ದಾರೆ. ಹೀಗಾಗಿ ಸುದೀಪ್ ಬಹುತೇಕ ಬಿಜೆಪಿ ಕೆಲವು ಶಾಸಕರ ಪರವಾಗಿ ಪ್ರಚಾರ ನಡೆಸುವುದಂತೂ ಖಚಿತ ಎನ್ನಲಾಗಿದೆ.
ಇತ್ತೀಚೆಗೆ ನಟ ಸುದೀಪ್ ಅವರನ್ನು ಪಕ್ಷಕ್ಕೆ ಆಹ್ವಾನಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಆದರೆ ಕಾಂಗ್ರೆಸ್ ಸೇರುವ ಬಗ್ಗೆಯಾಗಲೀ, ಭೇಟಿಯ ಬಗ್ಗೆಯಾಗಲೀ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ. ಇದೀಗ ಸಿಎಂ ಬೊಮ್ಮಾಯಿ, ಸಚಿವರಾದ ಅಶೋಕ್, ಸುಧಾಕರ್ ಅವರು ಸುದೀಪ್ ಜೊತೆಗೆ ಸುದ್ದಿಗೋಷ್ಟಿ ನಡೆಸಿದ್ದಾರೆ.
Amid speculations over Kannada movie star Kiccha Sudeep joining the Bhartiya Janata Party ahead of the Karnataka assembly elections, the actor has cleared the air stating that he will only be campaigning for the party but will not contesting elections. Earlier, he was set to visit the party's state headquarters at 1:30 pm. Other than Sudeep, several other prominent actors were also approached to be star campaigners for the elections.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am