ಬ್ರೇಕಿಂಗ್ ನ್ಯೂಸ್
25-10-20 10:43 pm Headline Karnataka News Network ಕರ್ನಾಟಕ
ಬೆಳಗಾವಿ, ಅಕ್ಟೋಬರ್ 25: ಕಾಂಗ್ರೆಸ್ ಹಿರಿಯ ಮುಖಂಡ, ಉತ್ತರ ಕರ್ನಾಟಕ ಭಾಗದ ಪ್ರಭಾವಿ ಮುಖಂಡರಾಗಿರುವ ಪ್ರಕಾಶ್ ಹುಕ್ಕೇರಿ ಕಾಂಗ್ರೆಸಿನಿಂದ ಹೊರ ನಡೆಯಲು ಸಜ್ಜಾಗಿದ್ದಾರೆ. ಈ ಬಾರಿಯ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಸಿಗದಿದ್ದರೆ ಯಾರು ಟಿಕೆಟ್ ಕೊಡುತ್ತಾರೋ ಆ ಪಕ್ಷಕ್ಕೆ ಹೋಗಲು ರೆಡಿ ಇದ್ದೇನೆ ಎಂದು ಪ್ರಕಾಶ್ ಹುಕ್ಕೇರಿ ಹೇಳಿದ್ದಾರೆ.
ಇತ್ತೀಚೆಗೆ ನಿಧನರಾದ ಬೆಳಗಾವಿ ಸಂಸದ ಸುರೇಶ್ ಅಂಗಡಿ ಕ್ಷೇತ್ರಕ್ಕೆ ಸದ್ಯದಲ್ಲೇ ಚುನಾವಣೆ ಘೋಷಣೆ ಆಗುವ ಹಿನ್ನೆಲೆಯಲ್ಲಿ ಪ್ರಕಾಶ್ ಹುಕ್ಕೇರಿ ಈ ಮಾತು ಆಡಿದ್ದಾರೆ. ಇದರ ಜೊತೆಗೇ ಬಿಜೆಪಿ ಸುರೇಶ್ ಅಂಗಡಿಯವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಿದರೆ ಅವರ ಪರವಾಗಿ ಪ್ರಚಾರ ಮಾಡುತ್ತೇನೆ. ಸುರೇಶ್ ಅಂಗಡಿ ತುಂಬ ಆತ್ಮೀಯರಾಗಿದ್ದರು. ಅವರ ಜೊತೆ ದೆಹಲಿಗೆ ತೆರಳಿ, ಬೆಳಗಾವಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಅವರ ಕುಟುಂಬ ಹೊರತುಪಡಿಸಿ ಬೇರೆ ಯಾರಿಗೆ ಟಿಕೆಟ್ ನೀಡಿದರೂ ಎದುರಾಳಿಯಾಗಿ ಸ್ಪರ್ಧಿಸಲು ತಯಾರಿದ್ದೇನೆ.
ನನ್ನ ಹೇಳಿಕೆಗೆ ಕಾಂಗ್ರೆಸ್ ಹೈಕಮಾಂಡ್ ಏನು ಕ್ರಮ ಕೈಗೊಳ್ಳುತ್ತದೋ ಕೈಗೊಳ್ಳಲಿ. ನಾನೇನು ಅವರಿಂದ ಕಾಫಿ ಕುಡಿದಿಲ್ಲ, ಚಾ ಕುಡಿದಿಲ್ಲ. ನನ್ನ ಸ್ವಂತ ಶಕ್ತಿಯಿಂದ ನಾನು ಮೇಲೆ ಬಂದಿದ್ದೇನೆ. ಕಾಂಗ್ರೆಸ್ ನಾಯಕರು ಯಾವುದಕ್ಕೆ ಹೋರಾಟ ಮಾಡಬೇಕಿತ್ತೋ ಮಾಡುತ್ತಿಲ್ಲ. ಸುಮ್ಮನೇ ಏನೇನೋ ಮಾಡುತ್ತಿದ್ದಾರೆ ಎಂದು ಪ್ರಕಾಶ ಹುಕ್ಕೇರಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸುರೇಶ ಅಂಗಡಿ ಕುಟುಂಬ ಹೊರತುಪಡಿಸಿ ಬೇರೆಯವರಿಗೆ ಟಿಕೆಟ್ ಕೊಡಲು ಮುಂದಾದರೆ ನಾನು ಯಾವುದೇ ಪಕ್ಷದಿಂದ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ಸಿದ್ಧ. ಕಾಂಗ್ರೆಸ್ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ನಿಂದ, ಬಿಜೆಪಿ ಕೊಟ್ಟರೆ ಬಿಜೆಪಿಯಿಂದ, ಜೆಡಿಎಸ್ ಕೊಟ್ಟರೆ ಜೆಡಿಎಸ್ ನಿಂದ ಕಣಕ್ಕಿಳಿಯುತ್ತೇನೆ ಎಂದವರು ಹೇಳಿದ್ದಾರೆ.
ನಾನು ಕಳೆದ ಚುನಾವಣೆಯಲ್ಲಿ ಸೋತಿದ್ದೇನೆ. ನನಗೆ ಈಗ ಯಾವುದೇ ಹಣೆಪಟ್ಟಿ ಇಲ್ಲ. ಕಾಂಗ್ರೆಸ್ ಬಿಟ್ಟಿಲ್ಲ, ಆದರೆ ಬಿಡು ಅಂದ್ರೆ ಬಿಡ್ತೀನಿ. ನನಗೆ ಆಗೋದೇನಿದೆ ಎಂದು ಪ್ರಶ್ನಿಸಿದರು. ಸುಮ್ಮನೇ ಬಾಯಿ ಮುಚ್ಚಿಕೊಂಡು ಎಷ್ಟು ದಿನ ಇರಲಿ. ಎರಡು ವರ್ಷದಿಂದ ಕುಳಿತಿದ್ದೇನೆ. ಹೀಗೇ ಕುಳಿತರೆ ಮೂಲೆಗುಂಪು ಮಾಡುತ್ತಾರೆ ಅಷ್ಟೇ. ಸುರೇಶ ಅಂಗಡಿ ಕುಟುಂಬಕ್ಕೆ ಟಿಕೆಟ್ ಕೊಡದಿದ್ದಲ್ಲಿ ನಾನು ಟಿಕೆಟ್ ಕೊಡುವ ಪಕ್ಷಕ್ಕೆ ಹೋಗಲು ರೆಡಿ ಇದ್ದೇನೆ. ನಾನಂತೂ ನೀರಲ್ಲಿ ಬಿದ್ದಿದ್ದೇನೆ. ಮುಂದೇನಾಗುತ್ತೋ ನೋಡೋಣ ಎನ್ನುವ ಮೂಲಕ ಪ್ರಕಾಶ್ ಹುಕ್ಕೇರಿ ಬಿಜೆಪಿಯತ್ತ ವಾಲುವ ಇಂಗಿತ ವ್ಯಕ್ತಪಡಿಸಿದ್ದಾರೆ.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm