ಬೊಮ್ಮಾಯಿಗೆ ಕಿಚ್ಚ ಸಪೋರ್ಟ್ ಫೈಟ್ ; ಸುದೀಪ್ ಸಿನಿಮಾ, ಜಾಹೀರಾತು ಪ್ರಸಾರ ಬ್ಯಾನ್ ಮಾಡಿ, ಚುನಾವಣಾ ಆಯೋಗಕ್ಕೆ ಜೆಡಿಎಸ್ ಮನವಿ

08-04-23 01:12 pm       HK News Desk   ಕರ್ನಾಟಕ

ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಕಿಚ್ಚ ಸುದೀಪ್ ಘೋಷಿಸಿದ ಬೆನ್ನಲ್ಲೇ, ಜೆಡಿಎಸ್ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ನಟನನ್ನು ಒಳಗೊಂಡ ಚಲನಚಿತ್ರಗಳು, ಜಾಹೀರಾತುಗಳು ಮತ್ತು ಇತರ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿದೆ.

ಬೆಂಗಳೂರು, ಎ.8: ಮೇ 10 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಕಿಚ್ಚ ಸುದೀಪ್ ಘೋಷಿಸಿದ ಬೆನ್ನಲ್ಲೇ, ಜೆಡಿಎಸ್ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ನಟನನ್ನು ಒಳಗೊಂಡ ಚಲನಚಿತ್ರಗಳು, ಜಾಹೀರಾತುಗಳು ಮತ್ತು ಇತರ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿದೆ.

ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸುದೀಪ್ ಅವರ ಸಿನಿಮಾ, ಜಾಹೀರಾತು, ಟಿವಿ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸಬೇಕು ಎಂದು ಜೆಡಿಎಸ್ ರಾಜ್ಯ ಕಾನೂನು ಘಟಕದ ವಕ್ತಾರ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.

ನಟನ ಚಲನಚಿತ್ರಗಳು ಅಥವಾ ಕಾರ್ಯಕ್ರಮಗಳ ಪ್ರಸಾರವು ಮತದಾರರ ಮೇಲೆ ಪ್ರಭಾವ ಬೀರಬಹುದು. ಆದ್ದರಿಂದ ಅವುಗಳನ್ನು ನಿಷೇಧಿಸಲು ಆದೇಶವನ್ನು ಹೊರಡಿಸಬೇಕು. ಸಾರ್ವಜನಿಕ ಸ್ಥಳಗಳಿಂದ ನಟನ ಫೋಟೊ ಇರುವ ಪೋಸ್ಟರ್‌ಗಳನ್ನು ತೆಗೆಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸಿಇಸಿಗೆ ಮನವಿ ಮಾಡಿದರು.

ಬೊಮ್ಮಾಯಿ ಅವರೊಂದಿಗೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿದರು

The Janata Dal (Secular), on Friday, urged the Election Commission to ban the screening and telecast of films and advertisements featuring popular South Indian actor Kichcha Sudeep. Sudeep had recently announced his support to Chief Minister Basavaraj Bommai in poll-bound Karnataka even as he clarified that he is not entering politics or contesting the polls.