ಬ್ರೇಕಿಂಗ್ ನ್ಯೂಸ್
10-04-23 12:47 pm HK News Desk ಕರ್ನಾಟಕ
ವಿಜಯನಗರ, ಎ.10: ಮನುಷ್ಯ ಸತ್ತಾಗ ಸಂಬಂಧಿಕರು, ಸ್ನೇಹಿತರು ಅಂತಿಮ ಗೌರವ ಸಲ್ಲಿಸುವುದು ನಡೆದುಕೊಂಡು ಬಂದ ವಾಡಿಕೆ. ಆದರೆ ಇಲ್ಲೊಂದು ಮಂಗ ತನಗೆ ಅನ್ನ ಹಾಕುತ್ತಿದ್ದ ವ್ಯಕ್ತಿ ಸತ್ತಾಗ ಅಂತಿಮ ದರ್ಶನಕ್ಕೆ ಬಂದಿದ್ದಲ್ಲದೆ, ಆತನ ತಲೆಗೆ ಮುತ್ತುಕೊಟ್ಟು ವಿದಾಯ ಹೇಳಿದ್ದು ನೋಡಿದವರನ್ನು ಬೆರಗಾಗಿಸಿದೆ.
ವಿಜಯನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹೊಟೆಲ್ ಉದ್ಯಮಿ ಶವಕ್ಕೆ ಮಂಗ ಮುತ್ತು ಕೊಟ್ಟು ನಮನ ಸಲ್ಲಿಸಿ ತನಗೆ ಅನ್ನ ಕೊಟ್ಟವರ ಋಣ ತೀರಿಸಿದೆ. ಹಗರಿಬೊಮ್ಮನಹಳ್ಳಿ ಪಟ್ಟಣದ ಹೊಟೇಲ್ ಉದ್ಯಮಿ ಪರಶುರಾಮ ಪೋಮುಸಾ ಹಬೀಬ್ ಸಾವಜಿ ಎಂಬ ವೃದ್ಧ ವ್ಯಕ್ತಿ ಏಪ್ರಿಲ್ 3 ರಂದು ಇಹಲೋಕ ತ್ಯಜಿಸಿದ್ದರು. ಸಾವಜಿ ಸಣ್ಣಂದಿನಿಂದಲೂ ಪ್ರಾಣಿ - ಪಕ್ಷಿ ಪ್ರಿಯರಾಗಿದ್ದರು. ತಮ್ಮ ಜೀವನದುದ್ದಕ್ಕೂ ಪ್ರಾಣಿ ಪಕ್ಷಿಗಳಿಗೆ ಕೈಲಾದ ನೆರವು ನೀಡುತ್ತಿದ್ದರು. ಅದರಲ್ಲೂ ಈ ಕೋತಿಗೆ ನಿತ್ಯವೂ ಹೊಟೇಲಿನಿಂದ ಹಣ್ಣು, ರೊಟ್ಟಿ ನೀಡಿ ಆರೈಕೆ ಮಾಡುತ್ತಿದ್ದರು. ಮನೆಯ ಬಳಿ ಬರುತ್ತಿದ್ದ ಕೋತಿ ಕಿಟಕಿ ಬಳಿ ಬಂದು ಈ ಅಜ್ಜನನ್ನು ನೋಡುತ್ತಿತ್ತು. ಇದನ್ನು ಗಮನಿಸಿದ ಅಜ್ಜ ಮನೆಯವರಿಗೆ ಹೇಳಿ ಅದಕ್ಕೆ ಆಹಾರ ಕೊಡಿಸುತ್ತಿದ್ದರು.
ಅಜ್ಜನ ಸೂಚನೆಯಂತೆ ಮನೆಯವರು ಕೋತಿಗೆ ನಿತ್ಯವೂ ಆಹಾರ ನೀಡುತ್ತಿದ್ದರು. ಅದನ್ನು ತಿಂದ ಕೋತಿ ಸಂತೃಪ್ತಿಯಿಂದ ಮರಳುತ್ತಿತ್ತು. ಆದರೆ ಇಂದು ಅಜ್ಜ ಇಹಲೋಕ ತ್ಯಜಿಸಿದ್ದನ್ನು ತಿಳಿದ ಮಂಗ ತನ್ನ ಆಪತ್ಬಾಂಧವ ಆಗಲಿದ್ದಾನೆಂದು ಮರುಗಿದೆ. ಅಲ್ಲದೆ, ನಿತ್ಯ ತನಗೆ ಆಹಾರ ಹಾಕುತ್ತಿದ್ದ ಅಜ್ಜನ ಹಣೆಗೆ ಮುತ್ತು ಕೊಟ್ಟು ವಿದಾಯ ಹೇಳಿದ್ದು ಮಂಗನಿಗೂ ದುಃಖ, ಸಂತಸದ ಭಾವನೆ ಇದೆಯೆಂಬುದನ್ನು ಸಾರಿದೆ.
ಗೌರವ ಸಲ್ಲಿಸಿದ ಬಳಿಕ ಬಂದಷ್ಟೇ ವೇಗವಾಗಿ ಮಂಗ ಅಲ್ಲಿಂದ ತೆರಳಿದ್ದೂ ಆಗಿದೆ. ಈ ಮೂಲಕ ಅನ್ನ ಕೊಟ್ಟವರನ್ನು ಮುಪ್ಪಿನ ವರೆಗೂ ನೆನೆಯಬೇಕು ಎಂಬ ಸಂದೇಶವನ್ನು ಕೋತಿ ಸಾರಿದೆ. ಇದರ ವಿಡಿಯೋ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದ್ದು ಜನರ ಗಮನ ಸೆಳೆದಿದೆ.
Monkey kisses forehead of dead man during the last rites who feed it with rice, shocks people in Vijayanagara.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am