ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ ; ಟಿಕೆಟ್ ಮಿಸ್ ಖಾತ್ರಿಯಾಗುತ್ತಿದ್ದಂತೆ ಸ್ಪರ್ಧಾ ಕಣಕ್ಕೆ ಗುಡ್ ಬೈ 

11-04-23 03:40 pm       Bangalore Correspondent   ಕರ್ನಾಟಕ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಬೆಂಗಳೂರು, ಎ.11 : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ''ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಎಂದಿದ್ದಾರೆ. 

ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ–ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ. ಈ ಬಾರಿ 70 ವಯಸ್ಸು ಮೀರಿದವರಿಗೆ ಪಕ್ಷದ ಟಿಕೆಟ್ ಸಿಗಲ್ಲ ಎನ್ನುವುದು ತಿಳಿಯುತ್ತಿದ್ದಂತೆ ಈಶ್ವರಪ್ಪ ಸ್ವತಃ ಸ್ಪರ್ಧಾ ಕಣದಿಂದ ದೂರ ಸರಿಯುವುದಾಗಿ ತಿಳಿಸಿದ್ದಾರೆ.

Weeks ahead of the Assembly election in the state, senior BJP leader and Shivamogga MLA K S Eshwarappa has made a surprise announcement that he is quitting electoral politics. He is the second leader to do so after former Chief Minister B S Yediyurappa. In a letter to party national president J P Nadda, Eshwarappa has said that he is voluntarily withdrawing from electoral politics and requested that his candidature should not be considered for any constituency.