ಟಿಕೆಟ್ ಕೈತಪ್ಪಿದ್ದಕ್ಕೆ ಬಿಜೆಪಿಗೆ ಲಕ್ಷ್ಮಣ ಸವದಿ ಗುಡ್ ಬೈ ; ನಿಷ್ಠಾವಂತನಿಗೆ ಗೌರವ ಇರದ ಪಕ್ಷದಲ್ಲಿ ಇರುವ ಅಗತ್ಯತೆ ಇಲ್ಲ, ಲಜ್ಜೆಗೆಟ್ಟ ರಾಜಕಾರಣಿ ನಾನಲ್ಲ , ಗಾಳ ಹಾಕಿದ ಕಾಂಗ್ರೆಸ್ 

12-04-23 12:26 pm       HK News Desk   ಕರ್ನಾಟಕ

ಟಿಕೆಟ್ ತಪ್ಪಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಈಗ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಬೆಳಗಾವಿ, ಎ.12: ಟಿಕೆಟ್ ತಪ್ಪಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಈಗ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಬುಧವಾರ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಿಷ್ಠಾವಂತನಿಗೆ ಗೌರವ ಇರದ ಪಕ್ಷದಲ್ಲಿ ಇರುವ ಅಗತ್ಯತೆ ಇಲ್ಲ. ವಿಧಾನಪರಿಷತ್ ಸ್ಥಾನಕ್ಕೂ ರಾಜಿನಾಮೆ ನೀಡುವಂತೆ ಕ್ಷೇತ್ರದ ಜನತೆ ಸಲಹೆ ನೀಡಿದ್ದಾರೆ. ನಾನೂ ಕೂಡ ಸ್ವಾಭಿಮಾನಿ ರಾಜಕಾರಣಿ. ಲಜ್ಜೆಗೆಟ್ಟ ರಾಜಕಾರಣಿ ಅಲ್ಲ. ಅಧಿಕಾರದ ಅಮಲಿನಲ್ಲೂ ನಾನಿಲ್ಲ. ನಾನು ಯಾರ ಬೆನ್ನಿಗೂ ಚೂರಿ ಹಾಕಿಲ್ಲ ಎಂದರು.

ನನ್ನ ಹೈ ಕಮಾಂಡ್ ನನ್ನ ಜನತೆ. ಜನತೆ ತೀರ್ಮಾನಕ್ಕೆ ಬದ್ಧನಾಗಿದ್ದು ತಕ್ಷಣ ವಿಧಾನಪರಿಷತ್ ಸದಸ್ಯತ್ವ ಸೇರಿದಂತೆ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದರು.

Ramesh jarakiholi resighns for ministry | Ramesh Jarakiholi : ರಾಸಲೀಲೆ  ಪ್ರಕರಣದಲ್ಲಿ ಮಹತ್ವದ ತಿರುವು, ರಮೇಶ್ ಜಾರಕಿಹೊಳಿ ರಾಜೀನಾಮೆ Karnataka News in  Kannada

On visit to Delhi, Basavaraj Bommai says no talk on Cabinet reshuffle |  Cities News,The Indian Express

ರಮೇಶ್ ಜಾರಕಿಹೊಳಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಲಕ್ಷ್ಮಣ ಸವದಿ, 'ನನ್ನೊಂದಿಗೆ ಸ್ನೇಹದಿಂದ ಇದ್ದ, ಪ್ರೀತಿಯಿಂದ ನೋಡುತ್ತಿದ್ದ ಸಿಎಂ ಬಸವರಾಜ ಬೊಮ್ಮಾಯಿಗೆ ಈಗ ಎರಡನೇ ಬಾರಿಗೆ ಸಿಎಂ ಆಗುವ ಭಾಗ್ಯ ಇಲ್ಲ. ಪ್ರಧಾನಿ ಆಗುವ ಯೋಗ ಇದೆ. ಇದೆಲ್ಲದರ ನಡುವೆ ನನಗೂ ಒಬ್ಬರು ಗುರು ಇದ್ದಾರೆ. ಅವರ ಮಾತು ಮೀರುವ ಪರಿಸ್ಥಿತಿ ಬಂದಿದೆ. ಕ್ಷಮಿಸಿ ಗುರುವೇ' ಎಂದು ಸಿಎಂ ವಿರುದ್ಧವೂ ಪರೋಕ್ಷವಾಗಿ ಮಾತಿನ ತಿರುಗೇಟು ಕೊಟ್ಟರು.

ಪಕ್ಷಾಂತರ ವಿಷಯವಾಗಿ ಪ್ರತಿಕ್ರಿಯಿಸಿದ ಸವದಿ, 'ಇಷ್ಟೆಲ್ಲ ಆದರೂ ಬಿಜೆಪಿ ವರಿಷ್ಟರಾರೂ ನನ್ನನ್ನು ಸಂಪರ್ಕಿಸಿಲ್ಲ. ಆದರೆ, ಇತರ ಪಕ್ಷಗಳ ಅನೇಕ ಮುಖಂಡರು ಸಂಪರ್ಕದಲ್ಲಿದ್ದಾರೆ. ನಾಳೆಯೇ ಗಟ್ಟಿ, ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ' ಎಂದು ಪಕ್ಷ ಬದಲಾವಣೆಯ ಮುನ್ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಲಕ್ಷ್ಮಣ ಸವದಿ ಮನೆಗೆ ಮಾಜಿ ಶಾಸಕ ಹಾಗೂ ಸವದಿ ಸ್ನೇಹಿತ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಭೇಟಿ ನೀಡಿ ಚರ್ಚಿಸಿದ್ದಾರೆ. ಅರ್ಧ ಗಂಟೆಗಯೂ ಹೆಚ್ಚು ಹೊತ್ತು ಮಾತುಕತೆ ನಡೆಸಿದ ಹಳೇ ಸ್ನೇಹಿತರು ಹೊಸ ಲೆಕ್ಕಾಚಾರ ಹಾಕಿದ್ದು, ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಪಕ್ಕಾ ಎನ್ನುವಂತೆ ಮಾಡಿದೆ.

20 ವರ್ಷಗಳಿಂದ ಕ್ಷೇತ್ರದ ಜನ ನನ್ನ ಮಾತು ಕೇಳಿದ್ದಾರೆ. ಈಗ ನಾನು ಜನತೆ ಮಾತು ಕೇಳುತ್ತೇನೆ. ಸ್ವತಂತ್ರವಾಗಿ ಸ್ಪರ್ಧಿಸು ಎಂದರೆ ಅದಕ್ಕೂ ಸಿದ್ಧ. ನಾನೀಗ ರಾಜಕೀಯದ ಸಂಕಷ್ಟ ಕಾಲದಲ್ಲಿದ್ದೇನೆ. ಈಗ ನನ್ನ ಕೈ ಬಿಡಬೇಡಿ'', ಎಂದು ಕ್ಷೇತ್ರದ ಮತದಾರರಲ್ಲಿ ಮನವಿ ಮಾಡುತ್ತ ಲಕ್ಷ್ಮಣ ಸವದಿ ಕಣ್ಣೀರು ಹಾಕಿದರು.

A day after former Deputy Chief Minister of Karnataka Laxman Savadi was denied ticket to fight the state Assembly elections, the BJP MLC announced his decision to quit the party