ಬ್ರೇಕಿಂಗ್ ನ್ಯೂಸ್
13-04-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಎ.13: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಇದರಲ್ಲೂ ಹಲವು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.
ಟಿಕೆಟ್ ವಂಚಿತ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಟಿಕೆಟ್ ಕೈತಪ್ಪಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಎಂಪಿ ಕುಮಾರಸ್ವಾಮಿ ಅವರು, ನನಗೆ ಮೂಡಿಗೆರೆ ಕ್ಷೇತ್ರದ ಟಿಕೆಟ್ ತಪ್ಪಲು ಸಿ.ಟಿ.ರವಿ ಕಾರಣ ಎಂದು ಆರೋಪಿಸಿದ್ದಾರೆ.
ಸಿಟಿ ರವಿ ಅವರಿಗೆ ನಿಷ್ಠರಾಗಿ ಹೋಗಬೇಕು, ಅದು ನನ್ನಿಂದ ಸಾಧ್ಯವಿಲ್ಲ. ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಲು ಸಿ.ಟಿ.ರವಿ ಕಾರಣ ಆಗುತ್ತಾರೆ. ದೆಹಲಿಯಲ್ಲಿ ಶಾಸಕ ಸಿ.ಟಿ.ರವಿ ಕಣ್ಣಾಮುಚ್ಚಾಲೆ ಆಟ ಆಡಿದ್ದಾರೆ. ಬಿಎಸ್ ಯಡಿಯೂರಪ್ಪ ಅವರು ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡ್ರೆ 50 ಸ್ಥಾನವೂ ಬರಲ್ಲ. ಬಿಜೆಪಿ ಸಿ.ಟಿ ರವಿಯನ್ನು ನಂಬಿಕೊಂಡು ಹೋದರೆ ಮುಂದಿನ ದಿನಗಳಲ್ಲಿ ಅನುಭವಿಸುತ್ತದೆ. ಸಿಟಿ ರವಿ ಓದ್ಕೊಂಡು ಬಂದಿಲ್ಲ. ಸಂಘ ಪರಿವಾರದ ಜೊತೆ ಇದ್ದು ಮಾತನಾಡುವುದನ್ನು ಕಲಿತುಕೊಂಡಿದ್ದಾನೆ ಎಂದು ವಾಗ್ದಾಳಿ ನಡೆಸಿದರು. ಹೈಕಮಾಂಡ್ಗೆ ನನ್ನ ಬಗ್ಗೆ ತಪ್ಪು ವರದಿ ಕೊಟ್ಟಿದ್ದಾರೆ. ವೈಯಕ್ತಿಕ ಕಾರಣಕ್ಕೆ ರಾಜಕಾರಣ ಮಾಡುತ್ತಿದ್ದಾರೆ. ಕೆಲ ರಾಜ್ಯ ನಾಯಕರೇ ಇದಕ್ಕೆ ಕಾರಣ.
ಸಿಟಿ ರವಿ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಿ ತಿಳಿದಿದೆ. ಹೈಕಮಾಂಡ್ ಮುಂದೆ ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಟಿಕೆಟ್ ತಪ್ಪಿಸಿದ್ದಾರೆ. ಬಿಜೆಪಿ ಮುಗಿಸುವವರೆಗೂ ಸಿ.ಟಿ ರವಿ ವಿಶ್ರಾಂತಿ ಪಡೆಯುವುದಿಲ್ಲ. ಪಕ್ಷಕ್ಕೆ ಇದು ಮುಂದೇ ಗೊತ್ತಾಗುತ್ತದೆ ಎಂದು ಗುಡುಗಿದರು. ಪಕ್ಷಕ್ಕೆ ನಾನು ಏನು ಅನ್ಯಾಯ ಮಾಡಿದ್ದೇನೆ. ಜನರ ಸೇವೆ ಮಾಡುವ ಶಕ್ತಿ ಇನ್ನೂ ಇದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
Mudigere MLA M.P. Kumaraswamy submitted his resignation from the primary membership of the BJP to party State unit president Nalin Kumar Kateel. He took this decision after being denied the ticket to contest from Mudigere constituency in Chikkamagaluru district for the Assembly elections in Karnataka, which are scheduled on May 10.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm