ಬ್ರೇಕಿಂಗ್ ನ್ಯೂಸ್
14-04-23 10:16 am HK News Desk ಕರ್ನಾಟಕ
ಶಿರಸಿ, ಎ.14: ನಾನು ನನ್ನ ಕಾರ್ಯಕರ್ತರಿಗೆ ಮೋಸ ಮಾಡಲು ಸಾಧ್ಯವಿಲ್ಲ. ಪುನಃ ಸ್ಪರ್ಧೆ ಮನಸ್ಸೂ ಇದೆ ಜೊತೆಗೆ ವಯಸ್ಸೂ ಇದೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದರು.
ಶಿರಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಯಲ್ಲಿ ಗುರುವಾರ ರಾತ್ರಿ ರಾಜೀನಾಮೆ ಸಲ್ಲಿಸಿ ಸುದ್ದಿಗಾರರ ಜೊತೆ ಮಾತನಾಡಿದರು. ಸ್ವತಂತ್ರವಾಗಿ ನಿಲ್ಲಬೇಕು ಎಂಬ ಮನಸ್ಸಿದೆ ಆದರೆ ಚಿಹ್ನೆ ಬೇಕಾಗಿದೆ ಎಂಬ ಮಾತೂ ಇದೆ. ರಾಜೀನಾಮೆ ಕೊಟ್ಟ ನಂತರ ಎರಡು ದಿನದಲ್ಲಿ ಬೆಂಬಲಿಗರ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದರು. 2008ರಲ್ಲಿ, 2013ರಲ್ಲಿ ಸ್ವತಂತ್ರವಾಗಿ ನಿಂತಿದ್ದೆ.

2018ರಲ್ಲಿ ಬಿಜೆಪಿ ಸೇರಿದೆ. ಆಗ ಅಧಿಕಾರಕ್ಕೆ ಬರಲು ಕಾರಣ ಇರಬಹುದು. ಆದರೆ, ಈಗ ಟಿಕೆಟ್ ಗೆ ಸಾಮಾಜಿಕ ನ್ಯಾಯ ಎಂದು ಬಿಜೆಪಿಯವರು ಪ್ರಸ್ತಾಪ ಮಾಡಿದ್ದಾರೆ. ಯಡಿಯೂರಪ್ಪ ಅವರ ಶಿಷ್ಯ ಹಾಗೂ ಅವರ ಮಗ ವಿಜಯೇಂದ್ರರ ಗೆಳೆಯಗೆ ಟಿಕೆಟ್ ಕೊಟ್ಟಿದ್ದಾರೆ. ನಾನು ಅದರ ಬಗ್ಗೆ ಮಾತನಾಡುವದಿಲ್ಲ ಎಂದರು.
ಯಾರಿಗೆ ಟೀಕೆ ಮಾಡಿ ಏನು ಪ್ರಯೋಜನವಿಲ್ಲ. ಜೆಡಿಎಸ್ ಹಾಗೂ ಎನ್ ಪಿಪಿ, ರೆಡ್ಡಿ ಪಕ್ಷದಿಂದಲೂ ಪಕ್ಷಕ್ಕೆ ಬರುವಂತೆ ಹೇಳುತ್ತಿದ್ದಾರೆ ಎಂದರು. ಇತ್ತ ಬಿಜೆಪಿ ಅಸಮಾಧಾನಿತರಿಗೆ ಗಾಳ ಹಾಕುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪಕ್ಷಕ್ಕೆ ಸೆಳೆಯಲು ಪ್ರಯತ್ನ ನಡೆಸಿದ್ದು, ಜನಾರ್ದನ ರೆಡ್ಡಿ ಸ್ಥಾಪಿಸಿರುವ ಕೆಆರ್ಪಿಪಿ ಪಕ್ಷದಿಂದ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಗೂಳಿಹಟ್ಟಿ ಶೇಖರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
BJP leader Goolihatti Shekhar submitted his resignation to Legislative Assembly Speaker Vishweshwar Hegde Kageri at the latter’s residence in Sirsi on Thursday night. Shekhar also resigned from the primary membership of the BJP after he was denied a ticket in the Karnataka Assembly elections.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm