ಬ್ರೇಕಿಂಗ್ ನ್ಯೂಸ್
14-04-23 09:45 pm HK News Desk ಕರ್ನಾಟಕ
ಹಾಸನ, ಎ.14 : ಮಾಜಿ ಸಿಎಂ ಯಡಿಯೂರಪ್ಪ ಬಲಗೈ ಬಂಟನಂತಿದ್ದ ಯುವ ಮುಖಂಡ ಎನ್.ಆರ್ ಸಂತೋಷ್ ಜೆಡಿಎಸ್ ಕಡೆಗೆ ತಿರುಗಿದ್ದಾರೆ. ಅರಸೀಕೆರೆ ಬಿಜೆಪಿ ಟಿಕೆಟ್ ಸಿಗದೆ ಬಂಡಾಯ ಎದ್ದಿದ್ದ ಸಂತೋಷ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ರೇವಣ್ಣ ಮತ್ತು ಪ್ರಜ್ವಲ್ ಮುಂದಾಗಿದ್ದಾರೆ.
ಕಡೂರಿನಲ್ಲಿ ವೈಎಸ್ವಿ ದತ್ತಾ ಅವರನ್ನು ಸೆಳೆದುಕೊಂಡ ಮಾದರಿಯಲ್ಲಿ ಅರಸೀಕೆರೆಯಲ್ಲೂ ರೇವಣ್ಣ ಬಿಜೆಪಿ ಟಿಕೆಟ್ ಆಕಾಂಕ್ಷಿಗೆ ಗಾಳ ಹಾಕಿದ್ದು ಯಶಸ್ಸು ಸಾಧಿಸಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ಟಿಕೆಟ್ ಸಿಗದೆ ಬಂಡಾಯದ ಮುನ್ಸೂಚನೆ ನೀಡಿದ್ದ ಎನ್.ಆರ್.ಸಂತೋಷ ಜೆಡಿಎಸ್ ಸೇರುವ ಸುಳಿವು ನೀಡಿದ್ದಾರೆ. ಇದರ ಬೆನ್ನಲ್ಲೇ ಸಂತೋಷ್ ಬೆಂಬಲಿಗರು ತೆನೆಹೊತ್ತ ಮಹಿಳೆಯ ಚಿಹ್ನೆಯ ಜೊತೆಗೆ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಸಮ್ಮಿಶ್ರ ಸರ್ಕಾರ ಕೆಡವಿ ಯಡಿಯೂರಪ್ಪ ಅವರನ್ನು ಸಿಎಂ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎನ್.ಆರ್.ಸಂತೋಷ್ ಅವರನ್ನೇ ಜೆಡಿಎಸ್ ಕಡೆ ಸೆಳೆದು ಸಂಸದ ಪ್ರಜ್ವಲ್ ಮತ್ತು ಮಾಜಿ ಸಚಿವ ರೇವಣ್ಣ ವಿರೋಧಿಗಳಿಗೆ ದೊಡ್ಡ ಟಾಂಗ್ ನೀಡಿದ್ದಾರೆ. ಅರಸೀಕೆರೆ ಕ್ಷೇತ್ರದಲ್ಲಿ ಎನ್.ಆರ್ ಸಂತೋಷ್ ಪ್ರಭಾವಿಯಾಗಿದ್ದು ಈ ಬಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು.
ನಿನ್ನೆ ತಮ್ಮ ನಿವಾಸದೆದುರಿನ ಬೆಂಬಲಿಗರ ಸಭೆಯಲ್ಲಿ ಸಂತೋಷ್ ಅವರನ್ನು ಜೆಡಿಎಸ್ ಸೇರಿ ಎಂದು ಬೆಂಬಲಿಗರು ಒತ್ತಾಯ ಮಾಡಿದ್ದರು. ಬೆಂಬಲಿಗರ ಒತ್ತಾಯದಂತೆ ಜೆಡಿಎಸ್ ಸೇರಲು ಸಂತೋಷ್ ಓಕೆ ಎಂದಿದ್ದರು. ಕುಮಾರಸ್ವಾಮಿ ಬದಿಗಿಟ್ಟು ಮಾಜಿ ಸಚಿವ ರೇವಣ್ಣ ಮತ್ತು ಮಗ ಪ್ರಜ್ವಲ್ ಸೇರಿ ಆಪರೇಶನ್ ನಡೆಸಿದ್ದು ಬೆಂಗಳೂರಿನಲ್ಲಿ ದೇವೇಗೌಡರ ಭೇಟಿ ಮಸಡಿಸಿದ್ದಾರೆ. ಇದಲ್ಲದೆ, ಈಗಾಗಲೇ ಕ್ಷೇತ್ರದ ಅಭ್ಯರ್ಥಿ ಎಂದು ಬಿಂಬಿತವಾಗಿದ್ದ ಬಾಣಾವರ ಅಶೋಕ್ ಜೊತೆಗೆ ರೇವಣ್ಣ ಮತ್ತು ಪ್ರಜ್ವಲ್ ಮಾತನಾಡಿ ಮನವೊಲಿಕೆ ಮಾಡಿದ್ದಾರೆ. ನಿಮ್ಮ ತೀರ್ಮಾನಕ್ಕೆ ಬದ್ದ ಎಂದು ಬಾಣಾವರ ಅಶೋಕ್ ತಿಳಿಸಿದ್ದಾರೆ ಎನ್ನಲಾಗಿದೆ.
Former Chief Minister B.S. Yediyurappa’s relative N.R. Santhosh, an aspirant for the Arsikere seat in Hassan district, has been denied the ticket by the BJP. The BJP has nominated G.V. Basavaraj in the constituency. N R Santosh is likely to join JDS.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm