ಬ್ರೇಕಿಂಗ್ ನ್ಯೂಸ್
14-04-23 09:45 pm HK News Desk ಕರ್ನಾಟಕ
ಹಾಸನ, ಎ.14 : ಮಾಜಿ ಸಿಎಂ ಯಡಿಯೂರಪ್ಪ ಬಲಗೈ ಬಂಟನಂತಿದ್ದ ಯುವ ಮುಖಂಡ ಎನ್.ಆರ್ ಸಂತೋಷ್ ಜೆಡಿಎಸ್ ಕಡೆಗೆ ತಿರುಗಿದ್ದಾರೆ. ಅರಸೀಕೆರೆ ಬಿಜೆಪಿ ಟಿಕೆಟ್ ಸಿಗದೆ ಬಂಡಾಯ ಎದ್ದಿದ್ದ ಸಂತೋಷ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ರೇವಣ್ಣ ಮತ್ತು ಪ್ರಜ್ವಲ್ ಮುಂದಾಗಿದ್ದಾರೆ.
ಕಡೂರಿನಲ್ಲಿ ವೈಎಸ್ವಿ ದತ್ತಾ ಅವರನ್ನು ಸೆಳೆದುಕೊಂಡ ಮಾದರಿಯಲ್ಲಿ ಅರಸೀಕೆರೆಯಲ್ಲೂ ರೇವಣ್ಣ ಬಿಜೆಪಿ ಟಿಕೆಟ್ ಆಕಾಂಕ್ಷಿಗೆ ಗಾಳ ಹಾಕಿದ್ದು ಯಶಸ್ಸು ಸಾಧಿಸಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ಟಿಕೆಟ್ ಸಿಗದೆ ಬಂಡಾಯದ ಮುನ್ಸೂಚನೆ ನೀಡಿದ್ದ ಎನ್.ಆರ್.ಸಂತೋಷ ಜೆಡಿಎಸ್ ಸೇರುವ ಸುಳಿವು ನೀಡಿದ್ದಾರೆ. ಇದರ ಬೆನ್ನಲ್ಲೇ ಸಂತೋಷ್ ಬೆಂಬಲಿಗರು ತೆನೆಹೊತ್ತ ಮಹಿಳೆಯ ಚಿಹ್ನೆಯ ಜೊತೆಗೆ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಸಮ್ಮಿಶ್ರ ಸರ್ಕಾರ ಕೆಡವಿ ಯಡಿಯೂರಪ್ಪ ಅವರನ್ನು ಸಿಎಂ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎನ್.ಆರ್.ಸಂತೋಷ್ ಅವರನ್ನೇ ಜೆಡಿಎಸ್ ಕಡೆ ಸೆಳೆದು ಸಂಸದ ಪ್ರಜ್ವಲ್ ಮತ್ತು ಮಾಜಿ ಸಚಿವ ರೇವಣ್ಣ ವಿರೋಧಿಗಳಿಗೆ ದೊಡ್ಡ ಟಾಂಗ್ ನೀಡಿದ್ದಾರೆ. ಅರಸೀಕೆರೆ ಕ್ಷೇತ್ರದಲ್ಲಿ ಎನ್.ಆರ್ ಸಂತೋಷ್ ಪ್ರಭಾವಿಯಾಗಿದ್ದು ಈ ಬಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು.
ನಿನ್ನೆ ತಮ್ಮ ನಿವಾಸದೆದುರಿನ ಬೆಂಬಲಿಗರ ಸಭೆಯಲ್ಲಿ ಸಂತೋಷ್ ಅವರನ್ನು ಜೆಡಿಎಸ್ ಸೇರಿ ಎಂದು ಬೆಂಬಲಿಗರು ಒತ್ತಾಯ ಮಾಡಿದ್ದರು. ಬೆಂಬಲಿಗರ ಒತ್ತಾಯದಂತೆ ಜೆಡಿಎಸ್ ಸೇರಲು ಸಂತೋಷ್ ಓಕೆ ಎಂದಿದ್ದರು. ಕುಮಾರಸ್ವಾಮಿ ಬದಿಗಿಟ್ಟು ಮಾಜಿ ಸಚಿವ ರೇವಣ್ಣ ಮತ್ತು ಮಗ ಪ್ರಜ್ವಲ್ ಸೇರಿ ಆಪರೇಶನ್ ನಡೆಸಿದ್ದು ಬೆಂಗಳೂರಿನಲ್ಲಿ ದೇವೇಗೌಡರ ಭೇಟಿ ಮಸಡಿಸಿದ್ದಾರೆ. ಇದಲ್ಲದೆ, ಈಗಾಗಲೇ ಕ್ಷೇತ್ರದ ಅಭ್ಯರ್ಥಿ ಎಂದು ಬಿಂಬಿತವಾಗಿದ್ದ ಬಾಣಾವರ ಅಶೋಕ್ ಜೊತೆಗೆ ರೇವಣ್ಣ ಮತ್ತು ಪ್ರಜ್ವಲ್ ಮಾತನಾಡಿ ಮನವೊಲಿಕೆ ಮಾಡಿದ್ದಾರೆ. ನಿಮ್ಮ ತೀರ್ಮಾನಕ್ಕೆ ಬದ್ದ ಎಂದು ಬಾಣಾವರ ಅಶೋಕ್ ತಿಳಿಸಿದ್ದಾರೆ ಎನ್ನಲಾಗಿದೆ.
Former Chief Minister B.S. Yediyurappa’s relative N.R. Santhosh, an aspirant for the Arsikere seat in Hassan district, has been denied the ticket by the BJP. The BJP has nominated G.V. Basavaraj in the constituency. N R Santosh is likely to join JDS.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm