ಟಿಕೆಟ್ ಮಿಸ್ ಆಗಿದ್ದಕ್ಕೆ ರಾಮದಾಸ್ ಗರಂ ; 30 ವರ್ಷದಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ 

18-04-23 10:24 am       HK News Desk   ಕರ್ನಾಟಕ

ವಿಧಾನಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್​ಎ ರಾಮದಾಸ್​ಗೆ ಟಿಕೆಟ್ ಕೈತಪ್ಪಿದೆ.  ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಿದೆ.

ಮೈಸೂರು, ಎ.18: ವಿಧಾನಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್​ಎ ರಾಮದಾಸ್​ಗೆ ಟಿಕೆಟ್ ಕೈತಪ್ಪಿದೆ.  ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಿದೆ.

ಟಿಕೆಟ್ ಕೈ ತಪ್ಪಿರುವುದು ರಾಮದಾಸ್​​ ಅಸಮಾಧಾನಕ್ಕೆ ಕಾರಣವಾಗಿದ್ದು, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕಾ ಬೇಡವಾ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿಗೆ ಮೈಸೂರಿನಲ್ಲೂ ಬಂಡಾಯದ ಬಿಸಿ ಮುಟ್ಟಿಸುವ ಸುಳಿವು ನೀಡಿದ್ದಾರೆ.

ಟಿಕೆಟ್ ಘೋಷಣೆ ಬಳಿಕ ಕೆಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ ರಾಮದಾಸ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ರಾಮದಾಸ್ ತಾವು ಯಾರೊಂದಿಗೂ ಮಾತನಾಡುವುದಿಲ್ಲ ಎಂದು ಹೇಳಿ ಅವರನ್ನು ಹಾಗೇ ಕಳುಹಿಸಿದ್ದಾರೆ.

ಈ ವೇಳೆ ಮಾತನಾಡಿದ ಪ್ರತಾಪ್ ಸಿಂಹ, ನಾವು ರಾಮದಾಸ್ ಅವರ ಆಶೀರ್ವಾದ ಪಡೆಯಲು ಮನೆಗೆ ಬಂದಿದ್ದೆವು. ಟಿಕೆಟ್ ತಪ್ಪಿರುವ ಕಾರಣ ಅವರಿಗೆ ನೋವಾಗಿದೆ. 30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರುವುದು ಸಹಜ. ಪಕ್ಷವನ್ನು ತಾಯಿ ಎಂದು ಭಾವಿಸಿರುವ ಅವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದರು.

Ramdas denied ticket for Krishnaraja in Mysuru, chased me out of mothers house after 30 years. After a long delay and building suspense over declaring the ticket for Krishnaraja in Mysuru city, the BJP announced its titicket to a new candidate, denying ticket to sitting MLA S.A. Ramdas.