ಶೆಟ್ಟರ್ ಗೆ ಹುಬ್ಬಳ್ಳಿ ಸೆಂಟ್ರಲ್, ಚಿಕ್ಕಮಗಳೂರಿಗೆ ಎಚ್.ಡಿ.ತಮ್ಮಯ್ಯ ; ಮಂಗಳೂರು ಉತ್ತರ ಸೇರಿ ಎಂಟು ಸ್ಥಾನ ಕಾಂಗ್ರೆಸಿಗೆ ಕಗ್ಗಂಟು ! 

18-04-23 10:19 pm       Bangalore Correspondent   ಕರ್ನಾಟಕ

ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ್ದು, ಮೊನ್ನೆ ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಣಕ್ಕಿಳಿಸಿದೆ.

ಬೆಂಗಳೂರು, ಎ.18 : ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ್ದು, ಮೊನ್ನೆ ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಣಕ್ಕಿಳಿಸಿದೆ. ನಾಲ್ಕನೇ ಪಟ್ಟಿಯಲ್ಲಿ ಏಳು ಜನರಿಗೆ ಟಿಕೆಟ್ ನೀಡಿದ್ದು ಇನ್ನೂ ಎಂಟು ಸ್ಥಾನಗಳಿಗೆ ಅಭ್ಯರ್ಥಿ ಫೈನಲ್ ಮಾಡಿಲ್ಲ. 

ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಎಚ್.ಡಿ ತಮ್ಮಯ್ಯ ಅವರನ್ನು ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಿಟಿ ರವಿ ಸ್ಪರ್ಧಿಸುತ್ತಿದ್ದಾರೆ. ಹುಬ್ಬಳ್ಳಿ - ಧಾರವಾಡ ಪಶ್ಚಿಮ ಕ್ಷೇತ್ರದಿಂದ ದೀಪಕ್ ಚಿಂಚೋರೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

ಒಟ್ಟು 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 216 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು 8 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಾಕಿ ಉಳಿಸಿಕೊಂಡಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ.

The Congress on Tuesday released its fourth list of candidates, which included Jagadish Shettar, a day after his switch from the BJP ahead of the upcoming Karnataka assembly polls. The six-time MLA and former state chief minister is being fielded from Hubballi – Dharwad-Central constituency, a seat he has won multiple times. The list included 6 other candidates apart from Shettar.