ಬ್ರೇಕಿಂಗ್ ನ್ಯೂಸ್
18-04-23 10:27 pm HK News Desk ಕರ್ನಾಟಕ
ಮೈಸೂರು, ಎ.18 : ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು. ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು. ವಿ.ಸೋಮಣ್ಣ ವರುಣಾ ಕ್ಷೇತ್ರಕ್ಕೆ ಬರಬಾರದಾ?
ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಅಲ್ಲದೇ, ನೀವು ಬಾದಾಮಿಯಲ್ಲಿ ಹುಟ್ಟಿ ಗೋಲಿ ಆಡಿದ್ದೀರಲ್ಲಾ ಎಂದು ಟ್ವಿಟರ್ನಲ್ಲಿ ಟಾಂಗ್ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣ ಅವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾ ಕ್ಷೇತ್ರಕ್ಕೆ ಕರೆತಂದು ಕಣಕ್ಕಿಳಿಸಿದೆ. ಇದು ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆ. ನನ್ನ ಜನ ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ಎಂದು ಹೇಳಿದ್ದರು.
ಅಲ್ಲದೆ, ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದವ, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಪ್ರತಾಪಸಿಂಹ ತಿರುಗೇಟು ನೀಡಿದ್ದಾರೆ.
ಸಿದ್ರಾಮಣ್ಣ, ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು, ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು, ಸೋಮಣ್ಣ ವರುಣಾಕ್ಕೆ ಬರಬಾರದಾ? ಅದಿರಲಿ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ? https://t.co/e7DP2HFTNR
— Pratap Simha (@mepratap) April 18, 2023
Pratap Simha slams siddaramaiah, says if Sonia Gandhi from Italy could contest in Ballari, why cant Somanna from Varuna
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm