ಅಮಿತ್ ಶಾ ಬಗ್ಗೆ ಕಮೆಂಟ್; ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿಗೆ ಜಾಮೀನು

05-08-20 08:36 am       Headline Karnataka News Network   ಕರ್ನಾಟಕ

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿ ಆನಂದ್ ಪ್ರಸಾದ್‌ಗೆ ಜಾಮೀನು ಸಿಕ್ಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

ಬೆಂಗಳೂರು, ಆಗಸ್ಟ್ 05: ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿ ಆನಂದ್ ಪ್ರಸಾದ್‌ಗೆ ಜಾಮೀನು ಸಿಕ್ಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

ಆನಂದ್ ಪ್ರಸಾದ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ಮತ್ತು ಕೆಪಿಸಿಸಿಯ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿ. ಬೆಂಗಳೂರಿನ ಕೆ. ಆರ್. ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಂದು ತಿಳಿದುಬಂದಿದೆ.

ಕೇಂದ್ರ ಅಮಿತ್ ಶಾ ಆರೋಗ್ಯ ಸ್ಥಿತಿ ಬಗ್ಗೆ ಕೆಲವರು ಟ್ವೀಟ್‌ ಮಾಡಿದ್ದರು. ಈ ಟ್ವೀಟ್‌ಗಳಿಗೆ ಆನಂದ್ ಪ್ರಸಾದ್ ಅವಹೇಳನಕಾರಿ ಕಮೆಂಟ್ ಹಾಕಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ದೂರಿನ ಅನ್ವಯ ಪೊಲೀಸರು ಬಂಧಿಸಿದ್ದರು.