ಬ್ರೇಕಿಂಗ್ ನ್ಯೂಸ್
20-04-23 01:18 pm Bangaluru Correspondent ಕರ್ನಾಟಕ
ಬೆಂಗಳೂರು, ಎ.20: ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಿನ್ನೆ ರಾತ್ರಿ ಲಿಂಗಾಯತ ನಾಯಕರ ಸಭೆ ನಡೆದಿತ್ತು. ಸಭೆಯಲ್ಲಿ ಲಿಂಗಾಯತ ಮುಖ್ಯಮಂತ್ರಿ ಮಾಡುವ ಬಗ್ಗೆ ಘೋಷಣೆ ಮಾಡಬೇಕೆಂದು ಆಗ್ರಹ ಕೇಳಿಬಂದಿತ್ತು. ಈ ಬಗ್ಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಆ ಕುರಿತು ಯಾವುದೇ ನಿರ್ಣಯ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಭೆಯಲ್ಲಿ ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮತ್ತು ಕಾಂಗ್ರೆಸ್ನವರ ಅಪಪ್ರಚಾರಕ್ಕೆ ಹೇಗೆ ಪ್ರತ್ತುತ್ತರ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ಲಿಂಗಾಯತ ಮುಖ್ಯಮಂತ್ರಿ ಬಗ್ಗೆಯೂ ಕೆಲವರು ಸಲಹೆ ಕೊಟ್ಟಿದ್ದಾರೆ. ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಕೂಡ ಇದ್ದರು. ಸಭೆಯಲ್ಲಿ ವ್ಯಕ್ತವಾಗಿರುವ ಭಾವನೆಗಳನ್ನು ಪ್ರಧಾನ್ ವರಿಷ್ಠರಿಗೆ ತಿಳಿಸುವುದಾಗಿ ಹೇಳಿದ್ದಾರೆ ಎಂದರು.


1967ರಿಂದ ಈವರೆಗೆ 50 ವರ್ಷದಲ್ಲಿ ಒಬ್ಬ ಲಿಂಗಾಯತರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಮಾಡಿಲ್ಲ. ಈ ಮಧ್ಯೆ, ವಿರೇಂದ್ರ ಪಾಟೀಲರು ಒಂಬತ್ತು ತಿಂಗಳು ಮುಖ್ಯಮಂತ್ರಿಗಳಾಗಿದ್ದರೂ ಅವರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಲಿಲ್ಲ. ವಿಮಾನ ನಿಲ್ದಾಣದಲ್ಲಿಯೇ ಅವರನ್ನು ತೆಗೆದು ಹಾಕಲಾಗಿದೆ ಎಂದರು.
ರಾಜಶೇಖರ ಮೂರ್ತಿ ಅವರನ್ನು ನಡೆಸಿಕೊಂಡ ರೀತಿಯೂ ಸರಿಯಲ್ಲ. ಲಿಂಗಾಯತ ಧರ್ಮವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನಿಸಿತ್ತು. ಮತ ಬ್ಯಾಂಕ್ಗಾಗಿ ಧರ್ಮ ಒಡೆಯಲು ಹೋಗಿದ್ದನ್ನು ಜನ ಮರೆಯುವುದಿಲ್ಲ. ಕಾಂಗ್ರೆಸ್ನವರು ದಲಿತರು, ಹಿಂದುಳಿದವರು, ಲಿಂಗಾಯತರಿಗೆ ಮೋಸ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
Next CM of Karnataka from Lingayat community yet to be decided says Bommai in Bangalore. The prominent BJP MLAs, along with members of parliament and former MPs, met with chief minister Baswaraj Bommai and leader BS Yediyurappa. Lingayat party members were very furious with the BJP and tried to salvage the action.#lingayat #bsyediyurappa #bjp #congress #karnatakaelection
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm